Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾರವಾರ: ಕೊಂಕಣ ರೈಲಿನಲ್ಲಿ 6...

ಕಾರವಾರ: ಕೊಂಕಣ ರೈಲಿನಲ್ಲಿ 6 ಕೆ.ಜಿ.ಗಾಂಜಾ ವಶ

ವಾರ್ತಾಭಾರತಿವಾರ್ತಾಭಾರತಿ2 Oct 2019 9:43 PM IST
share
ಕಾರವಾರ: ಕೊಂಕಣ ರೈಲಿನಲ್ಲಿ 6 ಕೆ.ಜಿ.ಗಾಂಜಾ ವಶ

ಉಡುಪಿ, ಅ.2: ಮುಂಬೈ ಸಿಎಸ್‌ಟಿಯಿಂದ ಮಂಗಳೂರಿಗೆ ತೆರಳುತಿದ್ದ ಎಕ್ಸ್‌ಪ್ರೆಸ್ ರೈಲು ಮಂಗಳವಾರ ಕಾರವಾರ ರೈಲು ನಿಲ್ದಾಣ ತಲುಪಿದಾಗ ಕರ್ತವ್ಯದಲ್ಲಿದ್ದ ರೈಲ್ವೆ ಪೊಲೀಸ್ ಪಡೆಯ ಸಿಬ್ಬಂದಿಯೊಬ್ಬರು ರೈಲಿನ ತಪಾಸಣೆ ನಡೆಸುವ ಸಂದರ್ಭ ವಾರಸುದಾರರಿಲ್ಲದ ಬ್ಯಾಗೊಂದರಲ್ಲಿ ಆರು ಕೆ.ಜಿ. ಗಾಂಜಾ ಪತ್ತೆಯಾದ ಘಟನೆ ನಡೆದಿದೆ.

ಕರ್ತವ್ಯದಲ್ಲಿದ್ದ ಆರ್‌ಪಿಎಫ್ ಸಿಬ್ಬಂದಿ ಸಿ.ಟಿ.ಸಜೀರ್ ಅವರು ಜನರಲ್ ಕೋಚ್ ತಪಾಸಣೆ ನಡೆಸುತಿದ್ದಾಗ, ಮೇಲಿನ ಸಾಮಾನಿಡುವ ರ್ಯಾಕ್‌ನಲ್ಲಿ ಸೈನ್ಯದ ಸಮವಸ್ತ್ರದ ಮಾದರಿಯಲ್ಲಿದ್ದ ಬೆನ್ನಿಗೆ ಹಾಕುವ ಚೀಲವೊಂದು ಅನುಮಾನಾಸ್ಪದವಾಗಿ ಕಂಡುಬಂದಿತ್ತು. ಇದರ ಕುರಿತು ಪ್ರಶ್ನಿಸಿದಾಗ ಯಾರೂ ವಾರಸುದಾರರು ಮುಂದೆ ಬರಲಿಲ್ಲ. ಬ್ಯಾಗ್‌ನ್ನು ಅವರು ತೆರೆದಾಗ ಅದರಲ್ಲಿ ಕಂದು ಟೇಪ್‌ನಿಂದ ಸುತ್ತಿದ ದೊಡ್ಡ ಪ್ಯಾಕೆಟ್ ಕಂಡುಬಂತು.

ಕೂಡಲೇ ಅವರು ಅನುಮಾನದಿಂದ ತನ್ನ ಸಹೋದ್ಯೋಗಿಗಳಿಗೆ ಹಾಗೂ ಕಾರವಾರದ ಪೊಲೀಸರಿಗೆ ಮಾಹಿತಿ ನೀಡಿದರು. ರೈಲು ನಿಲ್ದಾಣಕ್ಕೆ ಧಾವಿಸಿ ಬಂದ ಪೊಲೀಸರು ಇಬ್ಬರು ಸ್ವತಂತ್ರ ಸಾಕ್ಷಿಗಳ ಸಮ್ಮುಖದಲ್ಲಿ ಪ್ಯಾಕೆಟ್‌ನ್ನು ತೆರೆದಾಗ ಅದರಲ್ಲಿ ಗಾಂಜಾ ಕಂಡು ಬಂತು. ಕೂಡಲೇ ಇಲೆಕ್ಟ್ರಾನಿಕ್ಸ್ ತೂಕಯಂತ್ರವನ್ನು ತರಿಸಿ ಪರೀಕ್ಷಿಸಿದಾಗ ಆರು ಕೆ.ಜಿ.300 ಗ್ರಾಂ ಗಾಂಜಾ ಇರುವುದು ಗೊತ್ತಾಯಿತು. ಇದರ ಅಂದಾಜು ಮೌಲ್ಯ 60,000 ರೂ. ಎಂದು ಹೇಳಲಾಗಿದೆ.

ತಕ್ಷಣ ಕಾರವಾರದ ಎಎಸ್‌ಸಿ ಅವರಿಗೆ ಮಾಹಿತಿ ನೀಡಿದ್ದು, ವಿಧಿವಿಧಾನ ಗಳನ್ನು ಪೂರ್ಣಗೊಳಿಸಿದ ಬಳಿಕ ಅವರು ಪ್ಯಾಕೆಟ್‌ನ್ನು ಕಾರವಾರದ ಗ್ರಾಮಾಂತರ ಪೊಲೀಸರಿಗೆ ಮುಂದಿನ ಕ್ರಮಕ್ಕೆ ಹಸ್ತಾಂತರಿಸಿದರು.

ಈ ಕುರಿತು ಪ್ರಕರಣವೊಂದನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.

ಘಟನೆಯ ಕುರಿತು ಕೂಡಲೇ ಭಟ್ಕಳದ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿ, ಯಾರಾದರೂ ಅಪರಾಧಿಗಳು ಕೋಚ್‌ನಲ್ಲಿ ಇರುವರೇ ಎಂಬುದನ್ನು ಪರಿಶೀಲಿಸುವಂತೆ ತಿಳಿಸಲಾಯಿತಾದರೂ, ಯಾವುದೇ ಅನುಮಾನಾಸ್ಪದ ವ್ಯಕ್ತಿ ಪತ್ತೆಯಾಗಲಿಲ್ಲ. ಇದೀಗ ಕಾರವಾರ ಗ್ರಾಮಾಂತರ ಪೊಲೀಸರು ಸಿಸಿಟಿವಿಯ ರೆರ್ಕಾಡಿಂಗ್‌ನ್ನು ಪರಿಶೀಲನೆ ನಡೆಸುತಿದ್ದಾರೆ ಎಂದು ಕೊಂಕಣ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.

ಘಟನೆಯ ಹಿನ್ನೆಲೆಯಲ್ಲಿ ಕೊಂಕಣ ರೈಲು ಮಾರ್ಗದಲ್ಲಿ ರೈಲುಗಳ ಪರಿಶೋಧನೆಯನ್ನು ತೀವ್ರಗೊಳಿಸಲು ನಿರ್ಧರಿಸಲಾಗಿದೆ ಎಂದು ಕಾರವಾರದ ಎಎಸ್‌ಸಿ ಅವರು ತಿಳಿಸಿದ್ದಾರೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X