Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾನವೀಯ ಸೇವೆಯೇ ರಾಷ್ಟ್ರೀಯತೆ ಎಂದು...

ಮಾನವೀಯ ಸೇವೆಯೇ ರಾಷ್ಟ್ರೀಯತೆ ಎಂದು ಭಾವಿಸಿದ್ದ ಗಾಂಧೀಜಿ: ನರೇಂದ್ರ ಮೋದಿ

ವಾರ್ತಾಭಾರತಿವಾರ್ತಾಭಾರತಿ2 Oct 2019 10:00 PM IST
share
ಮಾನವೀಯ ಸೇವೆಯೇ ರಾಷ್ಟ್ರೀಯತೆ ಎಂದು ಭಾವಿಸಿದ್ದ ಗಾಂಧೀಜಿ: ನರೇಂದ್ರ ಮೋದಿ

ಹೊಸದಿಲ್ಲಿ, ಅ.2: ಭಾರತೀಯ ರಾಷ್ಟ್ರೀಯತೆಯು ಸಂಕುಚಿತ ಅಥವಾ ಪ್ರತ್ಯೇಕಿಸುವ ಲಕ್ಷಣ ಹೊಂದಿಲ್ಲ. ಇದು ಮಾನವೀಯ ಸೇವೆ ಸಾಧಿಸುವ ಬದ್ಧತೆ ಹೊಂದಿದೆ ಎಂಬುದು ಮಹಾತ್ಮಾ ಗಾಂಧೀಜಿಯವರ ಪರಿಕಲ್ಪನೆಯಾಗಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಗಾಂಧೀ ಜಯಂತಿಯ ಸಂದರ್ಭದಲ್ಲಿ ‘ನ್ಯೂಯಾರ್ಕ್ ಟೈಮ್ಸ್’ನಲ್ಲಿ ಬರೆದಿರುವ ‘ಭಾರತಕ್ಕೆ ಹಾಗೂ ವಿಶ್ವಕ್ಕೆ ಗಾಂಧೀಜಿ ಯಾಕೆ ಅಗತ್ಯ? ಎಂಬ ಶೀರ್ಷಿಕೆಯ ಲೇಖನದಲ್ಲಿ ಮೋದಿ, ಮಹಾತ್ಮಾ ಗಾಂಧೀಜಿಯವರ ಸಿದ್ಧಾಂತಗಳನ್ನು ಮುಂದಿನ ತಲೆಮಾರಿನ ಜನತೆ ಸದಾ ಸ್ಮರಿಸಿಕೊಳ್ಳುವಂತಾಗಲು ಹಾಗೂ ಇವನ್ನು ಪಸರಿಸಲು ಚಿಂತಕರು, ಉದ್ಯಮಿಗಳು ಹಾಗೂ ತಂತ್ರಜ್ಞಾನ ಕ್ಷೇತ್ರದ ನಾಯಕರು ಮುಂದೆ ಬರಬೇಕು ಎಂದು ಹೇಳಿದ್ದಾರೆ.

ಒಂದು ಹಿಡಿ ಉಪ್ಪಿಗಾಗಿ ಸಾಮೂಹಿಕ ಅಭಿಯಾನವನ್ನು ಹುಟ್ಟುಹಾಕುವ ಸಾಮರ್ಥ್ಯ ಬೇರೆ ಯಾರಿಗಾದರೂ ಇರಬಹುದೇ ಎಂದು ಗಾಂಧೀಜಿಯವರ ದಾಂಡಿ ಯಾತ್ರೆಯನ್ನು ಉಲ್ಲೇಖಿಸಿ ಪ್ರಶ್ನಿಸಿರುವ ಮೋದಿ, ಮಾನವ ಸಮಾಜದಲ್ಲಿರುವ ಹಲವು ವಿರೋಧಾಭಾಸಗಳ ಮಧ್ಯೆ ಸೇತುವೆ ನಿರ್ಮಿಸುವ ವಿಶಿಷ್ಟ ಸಾಮರ್ಥ್ಯ ಗಾಂಧಿಯವರಲ್ಲಿತ್ತು ಎಂದಿದ್ದಾರೆ.

ಸಮೃದ್ಧ, ದ್ವೇಷ, ಹಿಂಸೆ ಮತ್ತು ಯಾತನೆಯಿಂದ ಮುಕ್ತವಾದ ವಿಶ್ವ ನಿರ್ಮಿಸುವ ಮಹಾತ್ಮಾ ಗಾಂಧೀಜಿಯವರ ಆಶಯ ಈಡೇರಬೇಕಿದ್ದರೆ ನಾವೆಲ್ಲಾ ಹೆಗಲಿಗೆ ಹೆಗಲು ಕೊಟ್ಟು ಮುಂದೆ ಸಾಗಬೇಕಿದೆ. ಇದು ನಾವು ಮಹಾತ್ಮನಿಗೆ ನೀಡುವ ನಿಜವಾದ ಗೌರವವಾಗಿದೆ. ಇತರರ ನೋವನ್ನು ಅರ್ಥೈಸಿಕೊಳ್ಳುವ, ಇತರರ ಸಂಕಟ, ನೋವನ್ನು ಅರಿತುಕೊಳ್ಳುವವನೇ ನಿಜವಾದ ಮಾನವ ಎಂಬ ಅರ್ಥದ ‘ವೈಷ್ಣವ ಜನ ತೊ’ ಶ್ಲೋಕ ಮಹಾತ್ಮಾ ಗಾಂಧೀಜಿಯವರಿಗೆ ಅತ್ಯಂತ ಪ್ರಿಯವಾಗಿತ್ತು.

ಪ್ರತಿಯೊಂದು ಸಮಸ್ಯೆಗೂ ಗಾಂಧಿಯವರಲ್ಲಿ ಪರಿಹಾರವಿತ್ತು. ಅವರೊಬ್ಬ ಉತ್ತಮ ಶಿಕ್ಷಕನಂತೆ ಮಾರ್ಗದರ್ಶನ ನೀಡುವವರಾಗಿದ್ದರು. ಅವರ 150ನೇ ಜನ್ಮದಿನಾಚರಣೆ ಸಂದರ್ಭದಲ್ಲಿ ಭಾರತ ಸರಕಾರ ಬೃಹತ್ ಸ್ವಚ್ಛತಾ ಅಭಿಯಾನ ಆರಂಭಿಸಿದೆ. ಇಡೀ ವಿಶ್ವವೇ ನಿಮಗೆ ಶಿರಬಾಗುತ್ತಿದೆ, ಪ್ರಿಯ ಬಾಪೂಜಿ ಎಂದು ಮೋದಿ ತಮ್ಮ ಲೇಖನದ ಅಂತ್ಯದಲ್ಲಿ ಬರೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X