Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನೆಕ್ಕಿಲಾಡಿಯಲ್ಲಿ ಕಡತ ತಿದ್ದುವ ಮೂಲಕ...

ನೆಕ್ಕಿಲಾಡಿಯಲ್ಲಿ ಕಡತ ತಿದ್ದುವ ಮೂಲಕ ಸಾಕ್ಷ್ಯ ನಾಶ ಪಡಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ- ಜೆಡಿಎಸ್ ಕಾರ್ಯಾಧ್ಯಕ್ಷ

ಕುಡಿಯುವ ನೀರಿನ ಬಿಲ್ ನಲ್ಲಿ ಅವ್ಯವಹಾರ

ವಾರ್ತಾಭಾರತಿವಾರ್ತಾಭಾರತಿ2 Oct 2019 11:40 PM IST
share

ಉಪ್ಪಿನಂಗಡಿ: ಪುತ್ತೂರು ತಾಲೂಕಿನ 34 ನೆಕ್ಕಿಲಾಡಿ ಗ್ರಾ.ಪಂ. ನಲ್ಲಿ ಲಕ್ಷಾಂತರ ರೂಪಾಯಿ ಕುಡಿಯುವ ನೀರಿನ ಬಿಲ್ ಬಾಕಿ ಇದೆ ಎಂಬ ಮಾಹಿತಿ ಹೊರಬಂದಿದ್ದು, ಇದರಲ್ಲಿ ಸಾಕಷ್ಟು ಅವ್ಯವಾಹರ ನಡೆದಿರಬಹುದಾದ ಸಾಧ್ಯತೆ ಇರುವುದರಿಂದ ಈ ಬಗ್ಗೆ ಎಸಿಬಿ ಅಥವಾ ಲೋಕಾಯುಕ್ತಕ್ಕೆ ದೂರು ನೀಡುವ ಚಿಂತನೆ ನಡೆದಿದೆ. 

ಆದರೆ ಈ ನಡುವೆ ಈ ಹಿಂದಿನ ಕಾರ್ಯದರ್ಶಿ ರಾತ್ರಿ ವೇಳೆ ಗ್ರಾ.ಪಂ.ಗೆ ಬಂದು ಕಡತ ತಿದ್ದುವ ಮೂಲಕ ಸಾಕ್ಷ್ಯ ನಾಶ ಪಡಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ  ಎಂದು ಪುತ್ತೂರು ವಿಧಾನಸಭಾ ಕಾರ್ಯಾಧ್ಯಕ್ಷ ಅಬ್ದುಲ್ ರಹಿಮಾನ್ ಯುನಿಕ್ ಆರೋಪಿಸಿದ್ದಾರೆ. 

34 ನೆಕ್ಕಿಲಾಡಿ ಗ್ರಾಮ ಪಂಚಾಯತ್ ನಲ್ಲಿ ಲಕ್ಷಾಂತರ ರೂ. ಕುಡಿಯುವ ನೀರಿನ ಬಿಲ್ ವಸೂಲಾತಿಗೆ ಬಾಕಿ ಇದೆಯೆಂದು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಇತ್ತೀಚೆಗೆ ಸದಸ್ಯರ ಸಾಮಾನ್ಯ ಸಭೆಯ ಮುಂದೆ ತಂದಿದ್ದರು. ಈ ಬಗ್ಗೆ ಸದಸ್ಯರು ಸಮಗ್ರ ವರದಿ ನೀಡಲು ಸೂಚಿಸಿದ್ದರು.

ಇಲ್ಲಿ ಅವ್ಯವಹಾರದ ವಾಸನೆ ಮೇಲ್ನೋಟಕ್ಕೆ ಕಂಡು ಬಂದಿದ್ದರಿಂದ ಸಮಗ್ರ ದಾಖಲೆ ಸಂಗ್ರಹಿಸಿ ಎಸಿಬಿ ಅಥವಾ ಲೋಕಾಯುಕ್ತಕ್ಕೆ ದೂರು ನೀಡುವ ಚಿಂತನೆ ಜೆಡಿಎಸ್ ನಡೆಸಿತ್ತು. ಇದು ಪತ್ರಿಕಾ ಮಾಧ್ಯಮಗಳಲ್ಲಿ ಬಹಿರಂಗವೂ ಅಗಿತ್ತು. ಇಲ್ಲಿ ಅವ್ಯವಹಾರ ನಡೆದಿದ್ದು 2018-19ರ ಅವಧಿಯಲ್ಲಿ ಆದರೆ ಲೋಕಾಯುಕ್ತ ಅಥವಾ ಎಸಿಬಿ (ಭ್ರಷ್ಟಾಚಾರ ನಿಗ್ರಹ ದಳ) ಕ್ಕೆ ದೂರು ನೀಡುವ ವಿಚಾರ ಬೆಳಕಿಗೆ ಬಂದ ಬಳಿಕ ಆಗ ಕಾರ್ಯದರ್ಶಿ ಯಾಗಿ ವರ್ಗಾವಣೆಗೊಂಡು ಹೋಗಿದ್ದ ಈ ಅವ್ಯವಾಹರದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗುತ್ತಿರುವ ಚಂದ್ರಾವತಿಯವರನ್ನು ತುರಾತುರಿಯಲ್ಲಿ 34 ನೆಕ್ಕಿಲಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಯನ್ನಾಗಿ ಪ್ರಭಾರವಾಗಿ ನಿಯೋಜಿಸಲಾಗಿತ್ತು. ಆದರೆ ಇನ್ನೂ ಕರ್ತವ್ಯದ ರಿಪೋರ್ಟ್ ಮಾಡದ ಅವರು ಅಕ್ಟೋಬರ್ 1 ರಂದು ಸಂಜೆ ಪಂಚಾಯತ್ನ ಕಚೇರಿ ಅವಧಿ ಮುಗಿಯುವ ಸಮಯವಾದ 5:30 ರ ಬಳಿಕ ಬಂದು ರಾತ್ರಿ ತನಕ ಗ್ರಾ.ಪಂ.ನ ಕುಡಿಯುವ ನೀರಿನ ಬಿಲ್ ವಸೂಲಿಗಾರ ಹಾಗೂ ಗ್ರಾ.ಪಂ. ಸದಸ್ಯನೋರ್ವನ ಒಟ್ಟಿಗೆ ಇದ್ದು ಗ್ರಾ.ಪಂ.ನಲ್ಲಿ ಕಡತಗಳ ಪರಿಶೀಲನೆಯಲ್ಲಿ ತೊಡಗಿದ್ದರು ಎಂದು ತಿಳಿದು ಬಂದಿದೆ.

ಗ್ರಾ.ಪಂ.ಗೆ ಕರ್ತವ್ಯದ ವರದಿ ಮಾಡದೇ ಏಕಾಏಕಿ ಗ್ರಾ.ಪಂ.ನ ಕಚೇರಿ ಅವಧಿ ಮುಗಿದ ಬಳಿಕ ಅವರು ಬಂದು ರಾತ್ರಿ ತನಕ ಕಡತ ಪರಿಶೀಲಿಸಿದ್ದು ಅವರು ಸಾಕ್ಷ್ಯ ನಾಶ ಪಡಿಸುತ್ತಿದ್ದಾರೆ ಎಂಬ ಸಂಶಯ ನಮಗೆ ಎದುರಾಗಿದೆ. ಗ್ರಾ.ಪಂ. ಸದಸ್ಯನೋರ್ವನೂ ಈ ಸಂದರ್ಭ ಅಲ್ಲಿದ್ದು ಆತನೂ ಈ ಅಕ್ರಮದಲ್ಲಿ ಭಾಗಿಯಾಗಿದ್ದಾನೆಯೇ ಎಂಬ ಸಂಶಯ ಈಗ ಎದುರಾಗಿದೆ. ಅಲ್ಲದೇ ಅವ್ಯವಹಾರ ದ ಮಾಹಿತಿ ಸಿಕ್ಕಿದ ತಕ್ಷಣ ತರಾತುರಿಯಲ್ಲಿ ಈ ಹಿಂದಿನ ಕಾರ್ಯದರ್ಶಿ ಯವರಾದ ಚಂದ್ರಾವತಿಯನ್ನು ಇಲ್ಲಿಗೆ ನಿಯೋಜನೆಗೊಳಿಸಿರುವ ಮೇಲಾಧಿಕಾರಿಗಳೂ ಅವ್ಯಹಾರದ ಪಾಲು ಪಡೆದಿದ್ದಾರೆಯೇ ಎಂಬ ಸಂಶಯ ಸಾರ್ವಜನಿಕರದ್ದಾಗಿದೆ. ಅಲ್ಲಿನ ಅಕ್ರಮದ ಬಗ್ಗೆ ದಾಖಲೆಯನ್ನು ಮಾಹಿತಿ ಹಕ್ಕಿನಲ್ಲಿ ಕೇಳಲಾಗಿದ್ದು ಅದರ ಮೊದಲೇ ಸಾಕ್ಷ್ಯ ನಾಶ ಪಡಿಸಲಾಗುತ್ತಿದೆಯೋ ಎಂಬ ಅನುಮಾನ ವ್ಯಕ್ತವಾಗಿದ್ದು, ಕಚೇರಿ ಅವಧಿ ಮುಗಿದ ಬಳಿಕ ಗ್ರಾ.ಪಂ. ಕಡತಗಳನ್ನು ತಿದ್ದುವ ಕೆಲಸ ನಡೆಸಿದರೆ ಗ್ರಾಮಸ್ಥರನ್ನು ಸೇರಿಸಿಕೊಂಡು ರಾತ್ರಿ ವೇಳೆ ಬಂದು ಕಡತ ತಿದ್ದುವ ಭ್ರಷ್ಟರನ್ನು ಒಳಗಿರಿಸಿ ಬೀಗ ಜಡಿದು ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಅಬ್ದುರ್ರಹ್ಮಾನ್ ಯುನಿಕ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X