Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ‘ಚೂಡಾಮಣಿ’ ರಾಮ ಸೀತೆಯರ ಪ್ರೇಮ ಕತೆ

‘ಚೂಡಾಮಣಿ’ ರಾಮ ಸೀತೆಯರ ಪ್ರೇಮ ಕತೆ

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ3 Oct 2019 12:02 AM IST
share
‘ಚೂಡಾಮಣಿ’ ರಾಮ ಸೀತೆಯರ ಪ್ರೇಮ ಕತೆ

ಕನ್ನಡ ರಂಗಭೂಮಿ ಸಾಹಿತ್ಯದಲ್ಲಿ ಪುರಾಣಗಳನ್ನು ವಸ್ತುವಾಗಿಟ್ಟುಕೊಂಡು ‘ಮುರಿದು ಕಟ್ಟುವ’ ಕೆಲವನ್ನು ಹಲವು ಹಿರಿಯ ನಾಟಕಕಾರರು ಮಾಡಿದ್ದಾರೆ. ಕುವೆಂಪು ಅವರ ‘ಸ್ಮಶಾನ ಕುರುಕ್ಷೇತ್ರ’ದಿಂದ ಹಿಡಿದು ಕಾರ್ನಾಡ್ ಅವರ ‘ಯಯಾತಿ’ಯವರೆಗೆ ಬೇರೆ ಬೇರೆ ನೆಲೆಗಳಲ್ಲಿ ಈ ಪ್ರಯತ್ನ ನಡೆದಿದೆ. ಇದೇ ಸಂದರ್ಭದಲ್ಲಿ ಪುರಾಣಗಳ ಕತೆಗಳನ್ನು ರಮ್ಯವಾಗಿ ರಂಗಭೂಮಿಯಲ್ಲಿ ನಿರೂಪಿಸುವ ಪ್ರಯತ್ನವೂ ನಡೆದಿದೆ. ಇತ್ತೀಚಿನ ದಿನಗಳಲ್ಲಿ ರಂಗ ಸಾಹಿತ್ಯದ ಬರವಣಿಗೆ ಕಡಿಮೆಯಾಗುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಇಂತಹ ಸಂದರ್ಭದಲ್ಲಿ, ಆಶಾ ರಘು ಅವರು ‘ರಾಮಾಯಣ’ ಕತೆಯ ಭಾಗವೊಂದನ್ನು ಪುನರ್ ನಿರೂಪಿಸುವ ಪ್ರಯತ್ನವನ್ನು ಮಾಡಿದ್ದಾರೆ. ಇದೊಂದು ಸಂಗೀತ ನಾಟಕವಾಗಿದೆ. ‘ಅಭಿಜ್ಞಾನ ಶಾಕುಂತಲಾ’ ನಾಟಕದ ಮೂಲಕ ದುಷ್ಯಂತ ಶಕುಂತಳೆಯರ ಪ್ರೇಮ ಕತೆಯನ್ನು ತೆರೆದಿಡುತ್ತದೆ. ಅದನ್ನೇ ಮಾದರಿಯಾಗಿರಿಸಿಕೊಂಡು ‘ಚೂಡಾಮಣಿ’ಯ ಮೂಲಕ ಶ್ರೀರಾಮ ಮತ್ತು ಸೀತೆಯರ ನಡುವಿನ ಪ್ರೇಮ ಕತೆಯನ್ನು ನಿರೂಪಿಸಲು ಆಶಾ ರಘು ಪ್ರಯತ್ನಿಸಿದ್ದಾರೆ.

‘‘ಕಾಳಿದಾಸನ ಅಭಿಜ್ಞಾನ ಶಾಕುಂತಲ ನಾಟಕದಲ್ಲಿ ಉಂಗುರ ಪ್ರೇಮದ ಸಂಕೇತವಾದಂತೆ, ಒಂದು ನಿರ್ಣಾಯಕ ಉಪಾಧಿಯಾದಂತೆ ಈ ನಾಟಕದಲ್ಲಿ ಚೂಡಾಮಣಿಯೇ ಸೀತಾರಾಮರ ಪ್ರೇಮದ ಸಂಕೇತವಾಗಿದೆ. ನಾಟಕದುದ್ದಕ್ಕೂ ಮತ್ತೆ ಮತ್ತೆ ಪುನರಾವರ್ತನೆಯಾಗುವ ‘ರೆಕರಿಂಗ್ ಮೆಟಫರ್’ ಆಗಿದೆ.....ಹೆಂಡತಿಯಾದವಳು ಗಂಡನ ಸಹಚಾರಿಣಿಯೆಂಬುದು ನಮ್ಮ ಸಾಮಾನ್ಯ ನಂಬಿಕೆಯಾಗಿದೆ. ಆದರೆ ‘ಚೂಡಾಮಣಿ’ ನಾಟಕದಲ್ಲಿ ಕೊನೆಗೆ ರಾಮನೇ ಸೀತೆಯನ್ನು ಹಿಂಬಾಲಿಸಲು ಬಯಸುವ ಸನ್ನಿವೇಶ ನಿಜಕ್ಕೂ ಹೃದಯಂಗಮವಾಗಿದೆ. ಈ ಕೃತಿ ಯಾವುದೇ ರಂಗ ನಿರ್ದೇಶಕನಿಗೆ ಸವಾಲೆಸೆವ ನಾಟಕವಲ್ಲ. ಬದಲಾಗಿ ನಿರ್ದೇಶಕನಿಗೆ ಸರ್ವ ಸ್ವಾತಂತ್ರ ನೀಡಬಲ್ಲ ನಾಟಕವಾಗಿದೆ’’ ಬೆನ್ನುಡಿಯಲ್ಲಿ ಡಾ. ಟಿ. ಎನ್. ವಾಸುದೇವಮೂರ್ತಿ ಅವರು ಬರೆಯುತ್ತಾರೆ.

‘‘ನೆನಪಿನ ಬುತ್ತಿಯಾಗಿ ದಾಂಪತ್ಯದ ಧ್ಯೋತಕವಾಗಿ ಚೂಡಾಮಣಿಯ ನಿರ್ವಚನವಾಗುತ್ತಲೇ ಕುಟೀರ ಮತ್ತು ಅಯೋಧ್ಯೆ ಎಂಬ ಎರಡು ಚಿತ್ರಣಗಳ ಮೂಲಕ ಭಿನ್ನ ಸಾಮಾಜಿಕ ಸಂದರ್ಭಗಳನ್ನು ನಿರೂಪಣೆ ಮಾಡುವುದು ಈ ನಾಟಕದ ಶಕ್ತಿಗಳಲ್ಲಿ ಮುಖ್ಯವಾದುದು. ಆಪ್ತವಾಗಿ ಸಂವಹನ ಮಾಡುವ ಪಾತ್ರಗಳು, ದೇಸಿ ನುಡಿಗಟ್ಟು, ಕಥೆಹೇಳುವ ತಂತ್ರ, ಕಾವ್ಯಾತ್ಮಕ ಭಾಷೆ, ಕಥಾ ಹಂದರಕ್ಕೆ ಪೂರಕವಾಗಿ ನಿಲ್ಲುವ ಹಾಡುಗಳು, ಸನ್ನಿವೇಶ ಮತ್ತು ದೃಶ್ಯಗಳ ಕಟ್ಟುವಿಕೆ, ನವಿರು ಸಂಭಾಷಣೆ ಇತ್ಯಾದಿಗಳು ನಾಟಕವನ್ನು ಓದಲು ಪ್ರಿಯವೆನಿಸುತ್ತದೆ....’’ ಎಂದು ಲೇಖಕ ಬೇಲೂರು ರಘುನಂದನ ಅವರು ಅಭಿಪ್ರಾಯಪಡುತ್ತಾರೆ.

ಕೃತಿಯಲ್ಲಿ ರಾಮ, ಸೀತೆ, ಶಕ, ಕಸ್ತೂರಿ, ಕುಶ, ಲವ, ಧನ್ಯಮ್ಮ, ವಾಲ್ಮೀಕಿ, ಲಕ್ಷ್ಮಣ, ಭರತ, ಶತ್ರುಘ್ನ ಮುಖ್ಯ ಪಾತ್ರಗಳು. ಒಟ್ಟು 21 ದೃಶ್ಯಗಳಿವೆ. ನಿರ್ದೇಶಕರ ಮನಸ್ಥಿತಿಗೆ ಪೂರಕವಾಗಿ ಒಗ್ಗುವ ರಂಗಚಲನೆ ಈ ನಾಟಕದಲ್ಲಿದೆ. ಸಾಹಿತ್ಯ ಲೋಕ ಪಬ್ಲಿಕೇಶನ್ಸ್, ಬೆಂಗಳೂರು ಇವರು ಹೊರತಂದಿರುವ ಈ ಕೃತಿಯ ಒಟ್ಟು ಪುಟಗಳು 80. ಮುಖಬೆಲೆ 80 ರೂಪಾಯಿ. ಆಸಕ್ತರು 99459 39436 ದೂರವಾಣಿಯನ್ನು ಸಂಪರ್ಕಿಸಬಹುದು.

share
-ಕಾರುಣ್ಯಾ
-ಕಾರುಣ್ಯಾ
Next Story
X