Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೈದರಾಬಾದ್ ನಿಝಾಮರ 306 ಕೋಟಿ ರೂ.ಗೆ...

ಹೈದರಾಬಾದ್ ನಿಝಾಮರ 306 ಕೋಟಿ ರೂ.ಗೆ 120ಕ್ಕೂ ಅಧಿಕ ಹಕ್ಕುದಾರರು

ವಾರ್ತಾಭಾರತಿವಾರ್ತಾಭಾರತಿ3 Oct 2019 9:17 PM IST
share
ಹೈದರಾಬಾದ್ ನಿಝಾಮರ 306 ಕೋಟಿ ರೂ.ಗೆ 120ಕ್ಕೂ ಅಧಿಕ ಹಕ್ಕುದಾರರು

ಹೈದರಾಬಾದ್, ಅ.3: ಹೈದರಾಬಾದ್ ಪ್ರಾಂತ್ಯದ ಕೊನೆಯ ನಿಝಾಮರು ಇಂಗ್ಲೆಂಡಿನ ನಾಟ್‌ವೆಸ್ಟ್ ಬ್ಯಾಂಕ್‌ನಲ್ಲಿ 1948ರ ಸೆಪ್ಟೆಂಬರ್‌ನಲ್ಲಿ ಜಮೆ ಮಾಡಿದ್ದ ಸುಮಾರು 306 ಕೋಟಿ ರೂ. ಹಣ ಭಾರತ ಸರಕಾರ ಹಾಗೂ ನಿಝಾಮರ ಕಾನೂನುಬದ್ಧ ವಾರಸುದಾರರಿಗೆ ಸಲ್ಲಬೇಕು ಎಂದು ಇಂಗ್ಲೆಂಡ್ ಮತ್ತು ವೇಲ್ಸ್ ನ್ಯಾಯಾಲಯ ತೀರ್ಪು ನೀಡಿದೆ.

ನಿಝಾಮರ ಕುಟುಂಬದ ಮೂಲಗಳ ಪ್ರಕಾರ ಈ ಹಣ ಭಾರತ ಸರಕಾರ, ನಿಝಾಮರ ಮೊಮ್ಮಕ್ಕಳಾದ ಮುಕರ್ರಂ ಝಾ ಮತ್ತು ಮುಫಕ್ಕಂ ಝಾ ಹಾಗೂ ಎಸ್ಟೇಟ್‌ನ ಭಾಗವಾಗಿರುವ ಇತರ 120 ಮಂದಿಗೆ ಸಲ್ಲಬೇಕಾಗಿದೆ. ಈ ಮೊತ್ತ ತನಗೆ ಸೇರಬೇಕು ಎಂದು ಪಾಕಿಸ್ತಾನ ವಾದಿಸುತ್ತಿತ್ತು. ಇದನ್ನು ವಿರೋಧಿಸಿ ನಿಝಾಮರ ಮೊಮ್ಮಗ ನಜಾಫ್ ಆಲಿ ಖಾನ್ ಹಾಗೂ ಇತರ 120 ಹಕ್ಕುದಾರರು ಅರ್ಜಿ ಸಲ್ಲಿಸಿದ್ದರು. ಇದೀಗ ಬ್ರಿಟನ್ ನ್ಯಾಯಾಲಯ ನೀಡಿರುವ ತೀರ್ಪಿನಿಂದಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮತ್ತೆ ಪಾಕ್‌ಗೆ ಮುಖಭಂಗವಾಗಿದೆ. ಎರಡೂ ರಾಷ್ಟ್ರಗಳಿಗೆ ಇದೊಂದು ಪ್ರತಿಷ್ಠೆಯ ವಿಷಯವಾಗಿತ್ತು.

ನಿಝಾಮರ 120 ಹಕ್ಕುದಾರರು ಈಗ ನಿಝಾಮ್ ಎಸ್ಟೇಟ್‌ನ ಭಾಗವಾಗಿದ್ದು ಇವರು ಬ್ರಿಟನ್ ನ್ಯಾಯಾಲಯದಲ್ಲಿ ಪಾಕ್ ವಿರುದ್ಧ ನಡೆಸಿದ್ದ ಕಾನೂನು ಹೋರಾಟಕ್ಕೆ ಭಾರತ ಸರಕಾರ ನೆರವು ನೀಡಿತ್ತು. ಈ ನಿಧಿಯನ್ನು ಹಂಚಿಕೊಳ್ಳುವ ಬಗ್ಗೆ ನಿಝಾಮ್ ಎಸ್ಟೇಟ್ ಭಾರತ ಸರಕಾರದೊಂದಿಗೆ ರಹಸ್ಯ ಒಪ್ಪಂದ ಮಾಡಿಕೊಂಡಿದೆ ಎನ್ನಲಾಗಿದೆ. ನಿಝಾಮ್ ವಂಶದ ಬಹುತೇಕ ವಾರಸುದಾರರು ಈಗ ಆರ್ಥಿಕ ಸಂಕಷ್ಟದಲ್ಲಿದ್ದು ಬ್ರಿಟನ್ ನ್ಯಾಯಾಲಯದ ತೀರ್ಪು ಇವರಿಗೆ ಅದೃಷ್ಟದ ರೂಪದಲ್ಲಿ ಒಲಿದು ಬಂದಿದೆ. ನಿಝಾಮರ ನಿಧಿಯನ್ನು ಹಂಚಿಕೊಳ್ಳಲು ನ್ಯಾಯಾಲಯದ ಅನುಮೋದನೆ ಪಡೆಯಬೇಕು ಎಂದು ತೀರ್ಪು ಪ್ರಕಟಿಸಿರುವ ನ್ಯಾಯಾಧೀಶ ಮಾರ್ಕಸ್ ಸ್ಮಿತ್ ಹೇಳಿದ್ದಾರೆ.

ಭಾರತ ಸರಕಾರ ಹಾಗೂ ನಿಝಾಮರ ಕಾನೂನುಬದ್ಧ ಹಕ್ಕುದಾರರು ಸೂಕ್ತ ಹಂಚಿಕೆ ಸೂತ್ರ ರೂಪಿಸಿದರೆ ಅದನ್ನು ಪರಿಶೀಲಿಸಿ ಅನುಮೋದನೆ ನೀಡಬಹುದು ಎಂದವರು ಹೇಳಿದ್ದಾರೆ. ನಿಝಾಮರ ವಾರಸುದಾರರು ನಿಧಿ ಹಂಚಿಕೆ ಸೂತ್ರವನ್ನು ನ್ಯಾಯಾಲಯಕ್ಕೆ ಒಪ್ಪಿಸಿದ ಬಳಿಕವೇ ಯಾರಿಗೆ ಎಷ್ಟು ಮೊತ್ತ ಸಲ್ಲುತ್ತದೆ ಎಂಬ ವಿವರ ದೊರಕಬಹುದು. ಅಲ್ಲದೆ, ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಪಾಕಿಸ್ತಾನ ಮೇಲ್ಮನವಿ ಸಲ್ಲಿಸಿದರೆ ಆಗ ಮತ್ತಷ್ಟು ಸಮಯ ಈ ನಿಧಿ ಬ್ರಿಟನ್‌ನ ನಾಟ್‌ವೆಸ್ಟ್ ಬ್ಯಾಂಕ್‌ನಲ್ಲಿಯೇ ಇರುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X