Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಿಲಾತಬೆಟ್ಟು: ವ್ಯವಸಾಯ ಸೇವಾ ಸಹಕಾರಿ...

ಪಿಲಾತಬೆಟ್ಟು: ವ್ಯವಸಾಯ ಸೇವಾ ಸಹಕಾರಿ ಸಂಘದ ಕಚೇರಿ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ3 Oct 2019 11:06 PM IST
share
ಪಿಲಾತಬೆಟ್ಟು: ವ್ಯವಸಾಯ ಸೇವಾ ಸಹಕಾರಿ ಸಂಘದ ಕಚೇರಿ ಉದ್ಘಾಟನೆ

ಬಂಟ್ವಾಳ, ಅ. 3: ಕಾರ್ಪೊರೇಟ್ ಸಂಸ್ಥೆಗಳು ಮುಚ್ಚುವ, ರಾಷ್ಟ್ರೀಕೃತ ಬ್ಯಾಂಕ್‍ಗಳು ವಿಲೀನವಾಗುತ್ತಿರುವ ಈ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಸಹಕಾರ ಸಂಘಗಳು ತಲೆ ಎತ್ತುತ್ತಿರುವುದು ಸಹಕಾರಿ ರಂಗದ ಶಕ್ತಿಯಾಗಿದೆ ಎಂದು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನ ಅಧ್ಯಕ್ಷ, ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದ್ದಾರೆ.

ಬಿ.ಸಿ.ರೋಡ್-ಧರ್ಮಸ್ಥಳ ಹೆದ್ದಾರಿಯ ಪುಂಜಾಲಕಟ್ಟೆ ಹೃದಯಭಾಗದಲ್ಲಿ ನೂತನವಾಗಿ ಸುಮಾರು 1.60 ಕೋ.ರೂ. ವೆಚ್ಚದಲ್ಲಿ ನಿರ್ಮಾಣವಾದ ಪಿಲಾತಬೆಟ್ಟು ವ್ಯವಸಾಯ ಸೇವಾ ಸಹಕಾರಿ ಸಂಘದ "ಸುಧನ್ವ" ಕಟ್ಟಡದಲ್ಲಿ ಸಂಘದ ಕಚೇರಿಯನ್ನು ಉದ್ಘಾಟಿಸಿ, ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. 

ಸಹಕಾರಿ ಕ್ಷೇತ್ರದ ಆರ್ಧಶಕ್ತಿಯೇ ನವೋದಯ ಗುಂಪಿನ ಮಹಿಳೆಯರು, ಇಪ್ಪತ್ತು ವರ್ಷಗಳಿಂದ ಈ ಮಹಿಳೆಯರು ಆರ್ಥಿಕವಾಗಿ ಸಬಲರಾಗುತ್ತಿದ್ದು, ಸಹಕಾರ ಸಂಘಗಳ ಯಶಸ್ಸಿನ ಪಾಲುದಾರರಾಗಿದ್ದಾರೆ ಎಂದರು. 

ನೂತನ "ಸುಧನ್ವ'' ಕಟ್ಟಡ ಹಾಗೂ ಕೃಷಿ ಉಪಕರಣ ಮಾರಾಟ ವಿಭಾಗವನ್ನು  ಉದ್ಘಾಟಿಸಿ ಮಾತನಾಡಿದ ಪುತ್ತೂರು ಶ್ರೀ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಮಾತನಾಡಿ, ಶ್ರೀಮಂತರು ಮಾತ್ರ ಶ್ರೀಮಂತರಾಗುವುದಲ್ಲ. ಸರ್ವಸಾಮಾನ್ಯ ಜನರು ಕೂಡ ಶ್ರೀಮಂತರಾಗಬೇಕು ಎಂದರು.

ಸಂಘದ ಭದ್ರಾತಾ ಕೊಠಡಿಯನ್ನು ಉದ್ಘಾಟಿಸಿ ಹಾಗೂ ಠೇವಣಾತಿ ಪತ್ರ ಬಿಡುಗಡೆಗೊಳಿಸಿದ ಮಂಗಳೂರು ಕ್ಯಾಂಪೆÇ್ಕೀ ಸಂಸ್ಥೆಯ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ಮಾತನಾಡಿ, ಸಹಕಾರಿ ಕ್ಷೇತ್ರ ಪ್ರಜಾಪ್ರಭುತ್ವದ ತೊಟ್ಟಿಲು ಹಿರಿಯರ ತಪಸ್ಸಿನ ಫಲವಾಗಿ ಜಿಲ್ಲೆಯ ಸಹಕಾರಿ ರಂಗ ಅದ್ಬುತವಾಗಿ ಬೆಳೆದಿದೆ. ಇದು ಹಿರಿಯರಿಗೆ ಸಂದ ಗೌರವ ಎಂದರು.

ಡಿಸಿಸಿ ಬ್ಯಾಂಕ್ ನಿರ್ದೇಶಕ ಟಿ.ಜಿ.ರಾಜಾರಾಮ ಭಟ್ ಕೌಶಲ್ಯಾಭಿವೃದ್ಧಿ ಖಾತೆ, ಕಂಪ್ಯೂಟರೀಕರಣವನ್ನು ಉದ್ಘಾಟಿಸಿ ಶುಭಹಾರೈಸಿದರು. ಜಿಪಂ ಸದಸ್ಯ ತುಂಗಪ್ಪ ಬಂಗೇರ ಸ್ವಸಹಾಯ ಸಂಘಗಳ ಠೇವಣಾತಿ ಪತ್ರ ಬಿಡುಗಡೆಗೊಳಿಸಿದರು. 

ಜಿಪಂ ಸದಸ್ಯ ದ.ಕ.ಜಿಲ್ಲಾ ಕೃಷಿ ಸಹಕಾರ ಸಂಘದ ಅಧ್ಯಕ್ಷ  ರವೀಂದ್ರಕಂಬಳಿ, ಸಹಕಾರ ಸಂಘಗಳ ಉಪನಿಬಂಧಕರಾದ ಬಿ.ಕೆ.ಸಲೀಂ, ಬಂಟ್ವಾಳ ತಾಲೂಕು ಸಹಕಾರಿ ಅಭಿವೃದ್ದಿ ಅಧಿಕಾರಿ ತ್ರಿವೇಣಿ ರಾವ್, ಪುಂಜಾಲಕಟ್ಟೆಯ ಪ್ರಗತಿಪರ ಕೃಷಿಕ ಉದಯಕುಮಾರ್, ತಾಪಂ ಸದಸ್ಯ ರಮೇಶ್ ಕುಡ್ಮೇರು, ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಡಾ.ಎಂ.ಹರ್ಷ ಸಂಪಿಗೆತ್ತಾಯ, ಪುಂಜಾಲಕಟ್ಟೆ ವಿ.ಎಸ್.ಎಸ್.ಎಸ್.ನ ಮಾಜಿ ಅಧ್ಯಕ್ಷೆ ಪರಮೇಶ್ವರೀ ಪಿ.ಭಟ್, ಪಿಲಾತಬೆಟ್ಟು ಗ್ರಾಪಂ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ, ಇರ್ವತ್ತೂರು ಗ್ರಾಪಂ ಅಧ್ಯಕ್ಷೆ ಸುಜಾತ, ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿಯವರು ಅತಿಥಿಯಾಗಿ ಭಾಗವಹಿಸಿದ್ದರು.

ಸಂಘದ ಉಪಾಧ್ಯಕ್ಷ ಉಮೇಶ್ ಪೂಜಾರಿ, ನಿರ್ದೇಶಕರಾದ ಸುಂದರ ನಾಯ್ಕ್, ನಾರಾಯಣ ಪೂಜಾರಿ, ಬೂಬ ಸಪಲ್ಯ,ಸಂತೋಷ್ ಕುಮಾರ್ ಶೆಟ್ಟಿ, ದಿನೇಶ್ ಮೂಲ್ಯ, ಸೀತರಾಮ ಶೆಟ್ಟಿ, ಚಂದ್ರಶೇಖರ ಹೆಗ್ಡೆ, ಶಿವಯ್ಯ, ಸರೋಜಿನಿ ಡಿ.ಶೆಟ್ಟಿ, ಹರ್ಷಿಣಿ, ಬ್ಯಾಂಕ್ ಪ್ರತಿನಿಧಿ ಕೇಶವ ಕಿಣಿ ವೇದಿಕೆಯಲ್ಲಿದ್ದರು.

ಸನ್ಮಾನ:

ಇದೇ ವೇಳೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರಕುಮಾರ್, ಕಟ್ಟಡ ನಿರ್ಮಾಣಕ್ಕೆ ಜಮೀನು ನೀಡಿದ ಉದಯಕುಮಾರ್ ಕಟ್ಟೆಮಾರ್ ಹಾಗೂ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಪವರ್ ಲಿಪ್ಟಿಂಗ್‍ನಲ್ಲಿ ಎರಡು ಚಿನ್ನದ ಪದಕ ಪಡೆದು ದೇಶಕ್ಕೆ ಕೀರ್ತಿ ತಂದ ಗ್ರಾಮೀಣ ಪ್ರತಿಭೆ ಋತ್ವಿಕ್ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭ ಚಿಗುರು ಸ್ವಸಹಾಯ ಸಂಘವನ್ನು ಡಾ.ಎಂ.ಎನ್.ಆರ್. ಅವರು ಉದ್ಘಾಟಿಸಿದರು. ಸಂಘದ ಅಧ್ಯಕ್ಷ  ಲಕ್ಷ್ಮೀನಾರಾಯಣ ಉಡುಪ ಸ್ವಾಗತಿಸಿ, ಸಂಘದ ಮಾಜಿ ಕಾರ್ಯದರ್ಶಿ ಬೂಬ ಪೂಜಾರಿ ಪ್ರಸ್ತಾವಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜಪ್ಪ ಮೂಲ್ಯ ಅವರು ವೇದಿಕೆಯಲ್ಲಿದ್ದರು.

ಕಲಾವಿದ ಎಚ್.ಕೆ.ನಯನಾಡು, ಸಂಘದ ನಿರ್ದೇಶಕ ಪಿ.ಎಂ.ಪ್ರಭಾಕರ್ ವಂದಿಸಿದರು. ಬಳಿಕ ಜಿಲ್ಲೆಯ ಹೆಸರಾಂತ ಕಲಾವಿದರ ಕೂಡುವಿಕೆಯಲ್ಲಿ ಯಕ್ಷಗಾನ ತಾಳಮದ್ದಲೆ,ಲ.ದೇವದಾಸ್ ಕಾಪಿಕಾಡ್ ಅವರ ತಂಡದಿಂದ ತುಳು ಹಾಸ್ಯಮಯ ನಾಟಕ ಪ್ರದರ್ಶನಗೊಂಡಿತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X