Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ನೂತನ ‘ವೇಫ್ಲ್ ಆ್ಯಂಡ್...

ಮಂಗಳೂರು: ನೂತನ ‘ವೇಫ್ಲ್ ಆ್ಯಂಡ್ ಬೈಟ್ಸ್’ ಶುಭಾರಂಭ

ವಾರ್ತಾಭಾರತಿವಾರ್ತಾಭಾರತಿ4 Oct 2019 7:11 PM IST
share
ಮಂಗಳೂರು: ನೂತನ ‘ವೇಫ್ಲ್ ಆ್ಯಂಡ್ ಬೈಟ್ಸ್’ ಶುಭಾರಂಭ

ಮಂಗಳೂರು, ಅ. 4: ನೂತನ ‘ವೇಫ್ಲ್ ಆ್ಯಂಡ್ ಬೈಟ್ಸ್’ ಕೆಫೆಯನ್ನು ನಗರದ ವೆಲೆನ್ಸಿಯ ರಸ್ತೆಯಲ್ಲಿನ ಮೋರ್ ಸೂಪರ್‌ ಮಾರ್ಕೆಟ್ ಪಕ್ಕದ ಮಳಿಗೆಯಲ್ಲಿ ಮಾಜಿ ಸಚಿವ, ಶಾಸಕ ಯು.ಟಿ.ಖಾದರ್ ಶುಕ್ರವಾರ ಸಂಜೆ ಉದ್ಘಾಟಿಸಿದರು. ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕ ಅಹ್ಮದ್ ಮುಸ್ಲಿಯಾರ್ ದುಆಗೈದರು.

ನಂತರ ಮಾತನಾಡಿದ ಶಾಸಕ ಯು.ಟಿ. ಖಾದರ್, ನೂತನ ಕೆಫೆಯನ್ನು ತೆರೆಯುವ ಮೂಲಕ ಯುವಕರು ಹೊಸ ಉದ್ಯಮಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಯುವಜನಾಂಗದ ಉತ್ತಮ ಪ್ರಯತ್ನ ಇದಾಗಿದೆ. ಗ್ರಾಹಕರಿಗೆ ಪೌಷ್ಟಿಕಾಂಶದ ಸಿಹಿತಿನಿಸು, ತಂಪು ಪಾನೀಯ, ಖಾದ್ಯಗಳನ್ನು ಪೂರೈಕೆ ಮಾಡಲು ಗಮನಹರಿಸಬೇಕು. ಕೆಫೆಗೆ ಭೇಟಿ ನೀಡುವ ಗ್ರಾಹಕರು ಪುನಃ ಬರುವಂತಾಗಲು ಗುಣಮಟ್ಟ ಕಾಯ್ದು ಕೊಳ್ಳಬೇಕು. ಗ್ರಾಹಕರು ಸಂತೃಪ್ತರಾದರೆ ವ್ಯಾಪಾರವೂ ವೃದ್ಧಿಸುತ್ತದೆ ಎಂದು ಶುಭ ಹಾರೈಸಿದರು.

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮಾತನಾಡಿ, ಕಡಿಮೆ ಜಾಗದಲ್ಲಿ ಹೆಚ್ಚು ವ್ಯಾಪಾರ ಮಾಡುವ ಹೊಸ ಉದ್ಯಮಗಳತ್ತ ಯುವಕರು ಚಿತ್ತ ಹರಿಸಬೇಕು. ರಾಹಿಲ್ ಹಂಝ ರಶೀದ್ ಮಾಲಕತ್ವದ ನೂತನ ‘ವೇಫ್ಲ್ ಆ್ಯಂಡ್ ಬೈಟ್ಸ್’ ಶುಭಾರಂಭಗೊಂಡಿದ್ದು, ಕೇಕ್ ಸೇರಿದಂತೆ ವಿವಿಧ ಬಗೆಯ ಖಾದ್ಯಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದಾರೆ. ಆನ್‌ಲೈನ್ ಮೂಲಕವೂ ಬೇಕರಿಯ ಸೇವೆ ಲಭ್ಯವಿದೆ. ಆಧುನಿಕ ಕಾಲಮಾನಕ್ಕೆ ತಕ್ಕಂತೆ ಹೊಂದಿಕೊಂಡು ವ್ಯಾಪಾರಕ್ಕೆ ಯುವಕರು ಮುಂದಾಗಿರುವುದು ಮಾದರಿಯಾಗಿದೆ ಎಂದರು.

ಯುವಕರು ಶ್ರಮ ವಹಿಸಿ ಹೊಸ ಉದ್ಯಮ ನಡೆಸಿಕೊಂಡು ಹೋದರೆ ಯಶಸ್ಸು ಖಂಡಿತ ಲಭಿಸುತ್ತದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಕ್ಷಣಕ್ಷಣವೂ ಪ್ರಮುಖ ಪಾತ್ರ ವಹಿಸುತ್ತದೆ. ಆಹಾರ ಉತ್ಪನ್ನದ ಗುಣಮಟ್ಟ, ಸ್ವಾದದಲ್ಲೂ ಸ್ಪರ್ಧಾತ್ಮಕತೆಯಿದೆ. ವೆಲೆನ್ಸಿಯದಂತಹ ಸುಶಿಕ್ಷಿತ ಪ್ರದೇಶದಲ್ಲೇ ನೂತನ ಕೆಫೆ ತೆರೆದಿರುವುದು ಉದ್ಯಮಕ್ಕೆ ಬಲ ನೀಡಿದಂತಾಗಿದೆ. ನವ ಉದ್ಯಮವು ಅಭಿವೃದ್ಧಿಯ ಉತ್ತುಂಗಕ್ಕೆ ಸಾಗಲಿ ಎಂದು ಅವರು ಶುಭ ಹಾರೈಸಿದರು.

ಸಮಾರಂಭದಲ್ಲಿ ಮಸ್ಜಿದುಲ್ ತಕ್ವಾ ಖತೀಬ್ ಅಬ್ದುಲ್ ರೆಹಮಾನ್ ಸಖಾಫಿ ಆಶೀರ್ವಚನ ನೀಡಿದರು.

ಈ ಸಂದರ್ಭದಲ್ಲಿ ಈದ್ಗಾ ಮಸೀದಿಯ ಖತೀಬ್ ಸದಕತುಲ್ ನದ್ವಿ, ಕಾಪ್ರಿಗುಡ್ಡದ ಜಲಾಲ್ ಮಸೀದಿಯ ಖತೀಬ್ ಮುಸ್ತಾಕ್ ಮದನಿ, ಬಿಸಿಸಿಐ ಅಧ್ಯಕ್ಷ ಎಸ್.ಎಂ.ರಶೀದ್ ಹಾಜಿ, ರಶೀದ್ ಹಾಜಿ ಪುತ್ರ ಹಾಗೂ ಕೆಫೆ ಮಾಲಕ ರಾಹಿಲ್ ಹಂಝ ರಶೀದ್, ಆರ್ಚಿಟೆಕ್ಟ್ ಆಸಿಫ್, ರಾಹಿಫ್ ಅಬ್ಬಾಸ್, ರಿಫಾತ್ ಅಹ್ಮದ್, ಡೆಂಜಿಲ್ ಜೇಸುದಾಸ್, ಸಿ.ಮಾಹಿನ್, ಜೋಹರ್ ಬಾವ ಮತ್ತಿತರರು ಉಪಸ್ಥಿತರಿದ್ದರು.

ವಿಶೇಷ ಖಾದ್ಯಗಳು: ಥಿಕ್ ಶೇಕ್ಸ್, ಮೊಜಿಟೊಸ್, ಸ್ಮೂತೀಸ್, ಮೊಕ್‌ಟೇಲ್ಸ್, ಕೋಲ್ಡ್ ಕಾಫಿ, ಹಾಟ್ ಬೆವರೆಸ್, ಬೆಲ್ಜಿಯನ್ ವಾಫಲ್ಸ್, ಡಚ್ ಪ್ಯಾನ್‌ಕೇಕ್ಸ್, ಐಸ್-ಕ್ರೀಮ್ಸ್ ಸೇರಿದಂತೆ ಬಗೆಬಗೆಯ ಖಾದ್ಯಗಳು ಲಭ್ಯ ಇವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X