Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಮುಖ್ಯಪ್ರಾಣ ಗುಡಿ ಛಾವಣಿಗೆ...

ಉಡುಪಿ: ಮುಖ್ಯಪ್ರಾಣ ಗುಡಿ ಛಾವಣಿಗೆ ಸ್ವರ್ಣ ಕವಚ

ವಾರ್ತಾಭಾರತಿವಾರ್ತಾಭಾರತಿ4 Oct 2019 7:48 PM IST
share
ಉಡುಪಿ: ಮುಖ್ಯಪ್ರಾಣ ಗುಡಿ ಛಾವಣಿಗೆ ಸ್ವರ್ಣ ಕವಚ

ಉಡುಪಿ, ಅ.4:ಉಡುಪಿ ಶ್ರೀಕೃಷ್ಣಮಠದಲ್ಲಿ ಕೃಷ್ಣ ದೇವರ ಬಲ ಪಾರ್ಶ್ವ ದಲ್ಲಿರುವ ಮುಖ್ಯಪ್ರಾಣ ದೇವರ ಗುಡಿಯ ಮುಖ ಮಂಪಟದ ನವೀಕರಣ ಕಾರ್ಯ ಇದೀಗ ಪೂರ್ಣಗೊಂಡಿದ್ದು, ಇದರ ಛಾವಣಿಗೂ ಸ್ವರ್ಣ ಕವಚ ಅಳವಡಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ.

ಕೃಷ್ಣ ದೇವರ ಗರ್ಭಗುಡಿ ಮೇಲ್ಛಾವಣಿಗೆ ಸ್ವರ್ಣಕವಚ ಹೊದಿಸಲಾಗಿದ್ದು, ಇದೀಗ ಶಿಥಿಲಗೊಂಡಿದ್ದ ಮುಖ್ಯಪ್ರಾಣ ದೇವರ ಗುಡಿಯ ಮುಖ ಮಂಟಪದ ಜೀರ್ಣೋದ್ಧಾರ ಕಾರ್ಯವನ್ನು ತಿಂಗಳ ಹಿಂದೆ ಕೈಗೆತ್ತಿಕೊಳ್ಳಲಾಗಿತ್ತು. ಪ್ರಸ್ತುತ ಮುಖಮಂಟಪಕ್ಕೆ ಶಿಲಾಮಯ ಗೋಡೆ ಹಾಗೂ ಅದರ ಸುತ್ತಲೂ ಮರದ ದಳಿಗಳನ್ನು 10 ಲಕ್ಷ ರೂ. ವೆಚ್ಚದಲ್ಲಿ ರಚಿಸಲಾಗಿದೆ.

ಮುಂದಿನ ಹಂತದಲ್ಲಿ ಮರದ ಮೇಲ್ಛಾವಣಿಗೆ ಬಂಗಾರದ ಹೊದಿಕೆ ಅಳವಡಿಸುವ ಸಂಕಲ್ಪವನ್ನು ಪರ್ಯಾಯ ಪಲಿಮಾರು ಮಠಾಧೀಶರಾದ ಶ್ರೀವಿದ್ಯಾಧೀಶತೀರ್ಥರು ಕೆಗೊಂಡಿದ್ದಾರೆ.

ಗರ್ಭಗುಡಿಯ ಮುಂಭಾಗ ಮತ್ತು ಎಡಪಾರ್ಶ್ವದಲ್ಲಿ ಆಂಗ್ಲ ಅಕ್ಷರದ ಎಲ್ ಆಕಾರದಲ್ಲಿ ಮೇಲ್ಛಾವಣಿ ಇದ್ದು, ಅಷ್ಟು ಜಾಗಕ್ಕೆ ಮಾತ್ರ ಹೊದಿಕೆ ಅಳವಡಿಸಲು ಅವಕಾಶವಿದೆ. ಸುಮಾರು 60 ಚದರಡಿ ವ್ಯಾಪ್ತಿಗೆ 2 ಕೆ.ಜಿ. ಬಂಗಾರದ ಅಗತ್ಯ ವಿದ್ದು, ಸುಮಾರು ಒಂದು ಕೋಟಿ ರೂ. ವೆಚ್ಚದಲ್ಲಿ ಯೋಜನೆ ಕಾರ್ಯಗತಗೊಳ್ಳಲಿದೆ.

ಸುಮಾರು ಐದು ಶತಮಾನಗಳ ಹಿಂದೆ ಸೋದೆ ಮಠದ ಶ್ರೀವಾದಿರಾಜರು ಅಯೋಧ್ಯೆಯಿಂದ ಮುಖ್ಯಪ್ರಾಣ ವಿಗ್ರಹವನ್ನು ತಂದು ಪ್ರತಿಷ್ಠಾಪಿಸಿ ದ್ದರೆಂದು ಹೇಳಲಾಗಿದೆ. ಶತಮಾನಗಳಷ್ಟು ಹಳೆಯದಾದ ಮಣ್ಣಿನಯೊಂದಿಗೆ ಅದಕ್ಕೆ ಅಳವಡಿಸಲಾಗಿದ್ದ ಮರ ಹಾಗೂ ತಾಮ್ರದ ಹೊದಿಕೆಯೂ ಶಿಥಿಲಗೊಂಡು ಜೀರ್ಣಾವಸ್ಥೆಯಲ್ಲಿತ್ತು.

ಇದೀಗ ಮುಖಮಂಟಪಕ್ಕೆ ಶಿಲಾಮಯ ಗೋಡೆ ನಿರ್ಮಿಸಲಾಗಿದೆ.ಮಠಕ್ಕೆ ಭೇಟಿ ನೀಡುವ ಭಕ್ತಾಧಿಗಳಿಗೆ ತೊಂದರೆಯಾಗದಂತೆ ರಾತ್ರಿಯ ವೇಳೆ ಇವುಗಳ ಜೋಡಣೆ ಕಾರ್ಯಕ್ರಮವನ್ನು ಶಿಲ್ಪಿಗಳು ನೆರವೇರಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X