Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಸ್ಮಾರ್ಟ್‌ಫೋನ್‌ನ ಅತಿಯಾದ ಬಳಕೆ...

ಸ್ಮಾರ್ಟ್‌ಫೋನ್‌ನ ಅತಿಯಾದ ಬಳಕೆ ನಿಮ್ಮನ್ನು ಖಿನ್ನತೆಗೆ ತಳ್ಳಬಹುದು

ವಾರ್ತಾಭಾರತಿವಾರ್ತಾಭಾರತಿ4 Oct 2019 7:56 PM IST
share
ಸ್ಮಾರ್ಟ್‌ಫೋನ್‌ನ ಅತಿಯಾದ ಬಳಕೆ ನಿಮ್ಮನ್ನು ಖಿನ್ನತೆಗೆ ತಳ್ಳಬಹುದು

ಸ್ಮಾರ್ಟ್‌ಫೋನ್ ಅಥವಾ ಸ್ಮಾರ್ಟ್ ಡಿವೈಸ್‌ಗಳ ಅತಿಯಾದ ಗೀಳು ಹೊಂದಿರುವವರಲ್ಲಿ ನೀವೂ ಒಬ್ಬರಾಗಿದ್ದರೆ ನೀವು ಖಿನ್ನತೆಗೆ ಗುರಿಯಾಗುವ ಹೆಚ್ಚಿನ ಅಪಾಯವನ್ನು ಎದುರಿಸುತ್ತಿದ್ದೀರಿ ಎಂದೇ ಅರ್ಥ. ಸ್ನೇಹಿತರು ಮತ್ತು ಕುಟುಂಬದ ಜೊತೆಗೆ ಸಮಯವನ್ನು ಕಳೆಯುವ ಬದಲು ತಮ್ಮ ಹೆಚ್ಚಿನ ಸಮಯ ಸ್ಮಾರ್ಟ್‌ಫೋನ್‌ಗಳಲ್ಲಿಯೇ ಮುಳುಗಿರುವವರು ನಿರ್ದಿಷ್ಟ ಅವಧಿಯ ಬಳಿಕ ಒಂಟಿತನ ಮತ್ತು ಖಿನ್ನತೆಯಿಂದ ನರಳಬಹುದು ಎಂದು ಇತ್ತೀಚಿನ ಅಧ್ಯಯನವೊಂದು ಬೆಟ್ಟು ಮಾಡಿದೆ. ವರದಿಯು ವಿಶೇಷವಾಗಿ ತಮ್ಮ ಫೋನ್‌ಗಳಿಗೆ ಅಂಟಿಕೊಂಡಿರುವ ಯುವ ಪೀಳಿಗೆಯನ್ನು ಗಮನದಲ್ಲಿಟ್ಟುಕೊಂಡು ಈ ಎಚ್ಚರಿಕೆಯನ್ನು ನೀಡಿದೆ.

ಸ್ಮಾರ್ಟ್‌ಫೋನ್ ಅವಲಂಬನೆ ಹಾಗೂ ಒಂಟಿತನ ಮತ್ತು ಖಿನ್ನತೆಯ ಲಕ್ಷಣಗಳಿಗೂ ಸಂಬಂಧವಿದೆ ಎನ್ನುವುದನ್ನು ಸಂಶೋಧಕರು ಸಾಬೀತುಗೊಳಿಸಿದ್ದಾರೆ. ಆದರೆ ಇದರ ಉಲ್ಟಾವಾದವಾಗಿರುವ,ಒಂಟಿತನ ಮತ್ತು ಖಿನ್ನತೆಯಿಂದ ನರಳುತ್ತಿರುವವರೇ ತಮ್ಮ ಮೊಬೈಲ್ ಫೋನ್‌ಗಳಿಗೆ ದಾಸರಾಗುತ್ತಾರೆ ಎನ್ನುವುದು ಸಹ ನಿಜವೇ ಎನ್ನುವುದನ್ನು ಸಂಶೋಧಕರು ಇನ್ನಷ್ಟೇ ಕಂಡುಕೊಳ್ಳಬೇಕಿದೆ.

ಅರಿರೆನಾ ವಿವಿಯ ಸಂಶೋಧಕರ ತಂಡವೊಂದರ ಈ ಅಧ್ಯಯನವನ್ನು 18ರಿಂದ 20 ವರ್ಷ ವಯೋಮಾನದ 350 ಜನರ ಮೇಲೆ ನಡೆಸಲಾಗಿತ್ತು. ಸ್ಮಾರ್ಟ್ ಫೋನ್‌ಗಳ ಮೇಲಿನ ಅವಲಂಬನೆ ಅಥವಾ ಅತಿಯಾದ ಬಳಕೆಯು ಖಿನ್ನತೆ ಮತ್ತು ಒಂಟಿತನಕ್ಕೆ ಕಾರಣವಾಗುತ್ತದೆ ಎನ್ನುವುದನ್ನು ಸಂಶೋಧಕರು ಈ ಅಧ್ಯಯನದಲ್ಲಿ ಕಂಡುಕೊಂಡಿದ್ದಾರೆ.

ಸ್ಮಾರ್ಟ್ ಫೋನ್ ಅವಲಂಬನೆಯು ನಂತರದ ಖಿನ್ನತೆಯ ಲಕ್ಷಣಗಳನ್ನು ನೇರವಾಗಿ ಸೂಚಿಸುತ್ತದೆ ಎನ್ನುವುದು ಈ ಅಧ್ಯಯನದ ಪ್ರಮುಖ ಫಲಿತಾಂಶವಾಗಿದೆ ಎಂದಿದ್ದಾರೆ ಅಧ್ಯಯನ ತಂಡದ ಸದಸ್ಯ ಪ್ರೊ.ಲ್ಯಾಪಿಯರ್.

ಜನರು ತಮ್ಮ ಸ್ಮಾರ್ಟ್ ಫೋನ್‌ಗಳನ್ನು ಅತಿಯಾಗಿ ಅವಲಂಬಿಸಿದಾಗ ಮತ್ತು ಅದರ ಬಳಕೆ ಸಾಧ್ಯವಾಗದಿದ್ದ ಸಂದರ್ಭಗಳಲ್ಲಿ ಆತಂಕವನ್ನು ಅನುಭವಿಸುತ್ತಾರೆ ಎನ್ನುವುದು ಇಲ್ಲಿಯ ಸಮಸ್ಯೆ. ಇಂತಹ ಬಳಕೆ ಅವರ ದೈನಂದಿನ ಜೀವನಕ್ಕೆ ಹಾನಿಯನ್ನುಂಟು ಮಾಡುತ್ತದೆ ಎನ್ನುತ್ತಾರೆ ಅವರು.

ಸಮಸ್ಯೆಯ ದಿಶೆಯನ್ನು ಗುರುತಿಸಲು ಸಾಧ್ಯವಾದರೆ ಮಾತ್ರ ಅದಕ್ಕೆ ಪರಿಹಾರವನ್ನು ಸಾಧಿಸಬಹುದು ಎನ್ನುವುದು ಸಂಶೋಧಕರ ಅಭಿಪ್ರಾಯವಾಗಿದೆ.

ಖಿನ್ನತೆ ಮತ್ತು ಒಂಟಿತನ ಸ್ಮಾರ್ಟ್ ಫೋನ್ ಅವಲಂಬನೆಗ ಕಾರಣವಾಗಿದ್ದರೆ ನಾವು ಜನರ ಮಾನಸಿಕ ಆರೋಗ್ಯವನ್ನು ಉತ್ತಮಗೊಳಿಸುವ ಮೂಲಕ ಅವಲಂಬನೆಯನ್ನು ಕಡಿಮೆ ಮಾಡಬಹುದು. ಆದರೆ ನಾವು ಕಂಡುಕೊಂಡಿರುವಂತ ಸ್ಮಾರ್ಟ್ ಫೋನ್ ಅವಲಂಬನೆಯು ಖಿನ್ನತೆ ಮತ್ತು ಒಂಟಿತನಕ್ಕೆ ಕಾರಣವಾಗಿದ್ದರೆ ಅದರ ತೀವ್ರತೆಯನ್ನು ಶಮನಿಸಲು ನಾವು ಸ್ಮಾರ್ಟ್‌ಫೋನ್ ಅವಲಂಬನೆಯನ್ನು ಕಡಿಮೆ ಮಾಡಬಹುದು ಎಂದು ಅಧ್ಯಯನ ವರದಿಯ ಸಹಲೇಖಕ ಪೆಂಗ್‌ಫೀ ಝಾವೊ ಹೇಳಿದ್ದಾರೆ.

ಯುವಜನರು ಸ್ಮಾರ್ಟ್‌ಫೋನ್ ಅವಲಂಬನೆಗೆ ಸುಲಭವಾಗಿ ಪಕ್ಕಾಗುತ್ತಾರೆ ಮತ್ತು ಅವರು ಅದಾಗಲೇ ಖಿನ್ನತೆ ಮತ್ತು ಒಂಟಿತನಕ್ಕೆ ಸುಲಭ ಭೇದ್ಯರಾಗಿರುವುದರಿಂದ ಸ್ಮಾರ್ಟ್‌ಫೋನ್ ಅವರ ಮೇಲೆ ಭಾರೀ ನಕಾರಾತ್ಮಕ ಪ್ರಭಾವವನ್ನು ಬೀರಬಹುದು ಎಂದಿದ್ದಾರೆ.

ಒತ್ತಡದಲ್ಲಿದ್ದಾಗ ಹೆಚ್ಚಿನವರು ತಮ್ಮ ಫೋನ್‌ಗಳಿಗಾಗಿ ತಡಕಾಡುತ್ತಿರುತ್ತಾರೆ ಮತ್ತು ಇದು ತಪ್ಪು. ಅಂತಹವರು ವರ್ಚ್ಯುವಲ್ ಲೋಕದಲ್ಲಿ ತಮ್ಮನ್ನು ನುಸುಳಿಸಿಕೊಳ್ಳುವ ಬದಲು ಹೊರ ಬಂದು ಇತರರೊಂದಿಗೆ ಮಾತುಕತೆ ನಡೆಸುವ ಮೂಲಕ ಮಾನಸಿಕ ಶಾಂತಿಯನ್ನು ಕಂಡುಕೊಳ್ಳುವುದು ಅಗತ್ಯವಾಗುತ್ತದೆ ಎಂದು ವರದಿಯು ಅಭಿಪ್ರಾಯ ವ್ಯಕ್ತಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X