Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸೂಲಿಬೆಲೆ ಎಚ್ಚರಿಕೆಗೋಸ್ಕರ...

ಸೂಲಿಬೆಲೆ ಎಚ್ಚರಿಕೆಗೋಸ್ಕರ ಗದರಿಸಿದ್ದಾರೆ: ಕೋಟ ಶ್ರೀನಿವಾಸ ಪೂಜಾರಿ

ವಾರ್ತಾಭಾರತಿವಾರ್ತಾಭಾರತಿ4 Oct 2019 7:57 PM IST
share

ಉಡುಪಿ, ಅ.4: ಎಚ್ಚರಿಕೆಗೋಸ್ಕರ ನಮ್ಮವರೇ ನಮ್ಮನ್ನು ಗದರಿಸುತ್ತಾರೆ. ಅದರ ಅರ್ಥ ಚಕ್ರವರ್ತಿ ಸೂಲಿಬೆಲೆ ನಮ್ಮ ಮೇಲೆ ಕೋಪಗೊಂಡಿದ್ದಾರೆ ಎಂಬುದು ಅಲ್ಲ. ಹಾಗಂತ ಅವರು ನಮ್ಮನ್ನು ಬಿಡುತ್ತಾರೆ ಎಂಬುದು ಕೂಡಾ ಅಲ್ಲ. ನಮ್ಮಲ್ಲಿ ಸಮಸ್ಯೆಗಳಿದ್ದರೆ ಸರಿಪಡಿಸಿಕೊಂಡು ಹೋಗುತ್ತೇವೆ ಎಂದು ರಾಜ್ಯ ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಣಕಾಸಿನ ಕೊರತೆ ಇಲ್ಲ. ಬಹುದೊಡ್ಡ ದುರಂತಗಳು ನಡೆದಾಗ ಹಣ ಎಷ್ಟಿದ್ದರೂ ಸಾಕಾಗುವುದಿಲ್ಲ. ಯಡಿಯೂರಪ್ಪ ಖಜಾನೆಯಲ್ಲಿ ದುಡ್ಡಿಲ್ಲ ಎಂದು ಹೇಳಿಲ್ಲ ಎಂದರು.

ದೇಶದ್ರೋಹಿ ಎಂಬ ಸದಾನಂದ ಗೌಡ ಪದಬಳಕೆ ವಿಚಾರ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ತಪ್ಪಾಗಿದ್ದರೆ ನಾವೇ ಸರಿ ಮಾಡಿಕೊಳ್ಳುತ್ತೇವೆ. ಸೂಲಿಬೆಲೆ, ಸದಾನಂದ ಗೌಡರನ್ನು ಭೇಟಿಯಾದಾಗ ಚೆನ್ನಾಗಿ ಮಾತನಾಡು ತ್ತಾರೆ. ಸದಾನಂದ ಗೌಡ ಸೂಲಿಬೆಲೆಯನ್ನು ಕಂಡು ನಗುತ್ತಾರೆ. ಅಲ್ಲಿಗೆ ಈ ಪ್ರಕರಣ ಮುಗಿದುಬಿಡುತ್ತದೆ. ಪಾರ್ಟಿಗಾಗಿ ದುಡಿದವರು ಅಭಿವೃದ್ಧಿ ವಿಚಾರ ವಾಗಿ ಮಾತನಾಡಿದ್ದಾರೆ. ಅವರನ್ನು ಸಮಾಧಾನ ಮಾಡಿದ್ದೇವೆ. ಕಾರ್ಯಕರ್ತರ ಭಾವನೆಗಳನ್ನು ಮನಸ್ಸಿನಲ್ಲಿಟ್ಟುಕೊಂಡು ಕೆಲಸ ಮಾಡುತ್ತೇವೆ. ನಮ್ಮ ಗುರಿ ಅಭಿವೃದ್ಧಿ ಕಡೆಗೆ ಇದೆ ಎಂದು ತಿಳಿಸಿದರು.

ರಾಜ್ಯ ಸಿದ್ದಪಡಿಸಿದ ನಷ್ಟದ ವರದಿಯ ನಿರಾಕರಣೆ ವಿಚಾರ ಬಗ್ಗೆ ಪ್ರತಿಕ್ರಿಯೆ ನೀಡಿದ ಕೋಟ, ಕೇಂದ್ರ ಸರಕಾರ ನಮ್ಮ ವರದಿಯನ್ನು ತಿರಸ್ಕರಿಸಿಲ್ಲ. ಹೆಚ್ಚುವರಿ ಮಾಹಿತಿಯನ್ನು ಕೇಳಿರಬಹುದು. ಮಾಹಿತಿ ಕೇಳಿದ್ದಾರೆ ಅಂದರೆ ವಾಪಾಸು ವರದಿ ಕಳಿಸಲಾಗಿದೆ ಎಂಬುದು ಅರ್ಥವಲ್ಲ. ಕೇಂದ್ರ ಮಾಹಿತಿ ಕೇಳಿದೆ ಅಂದರೆ ಹಣ ಕೊಡಲು ನಿರ್ಧಾರ ಮಾಡಿದ್ದಾರೆ ಎಂದರ್ಥ. ಮೂರು ನಾಲ್ಕು ದಿನಗಳಲ್ಲಿ ಗರಿಷ್ಟ ಮೊತ್ತದ ಹಣ ರಾಜ್ಯಕ್ಕೆ ಬರುತ್ತದೆ. ಆ ಮೂಲಕ ಎಲ್ಲ ಗೊಂದಲಗಳು ಶೀಘ್ರ ಬಗೆಹರಿಯಲಿದೆ ಎಂದರು.

ವಿಧಾನಸಭೆ ವಿಪಕ್ಷ ನಾಯಕ ಆಯ್ಕೆ ವಿಚಾರ ಕುರಿತ ಪ್ರಶ್ನೆಗೆ, ಅವರಿಗಿರುವ ಆತಂಕ ಅವರೇ ಸರಿಪಡಿಸಿಕೊಳ್ಳಬೇಕು. ಕಾಂಗ್ರೆಸ್‌ನಲ್ಲಿ ನಾಯಕತ್ವ ಕೊರತೆ ಜಟಿಲವಾಗಿದೆ. ಅವರ ಸಮಸ್ಯೆಗಳನ್ನು ಶೀಘ್ರ ಪರಿಹಾರಪಡಿಸಿಕೊಳ್ಳಲಿ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X