Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೃಹತ್ ಕೈಗಾರಿಕೆಗೆ ಒತ್ತು ನೀಡಿ ತಪ್ಪು...

ಬೃಹತ್ ಕೈಗಾರಿಕೆಗೆ ಒತ್ತು ನೀಡಿ ತಪ್ಪು ಮಾಡಿದ್ದೇವೆ: ಎಚ್.ಎಸ್.ದೊರೆಸ್ವಾಮಿ

ಪವಿತ್ರ ಆರ್ಥಿಕತೆಗಾಗಿ ಮೂರನೇ ದಿನದ ಉಪವಾಸ ಸತ್ಯಾಗ್ರಹ

ವಾರ್ತಾಭಾರತಿವಾರ್ತಾಭಾರತಿ4 Oct 2019 8:32 PM IST
share
ಬೃಹತ್ ಕೈಗಾರಿಕೆಗೆ ಒತ್ತು ನೀಡಿ ತಪ್ಪು ಮಾಡಿದ್ದೇವೆ: ಎಚ್.ಎಸ್.ದೊರೆಸ್ವಾಮಿ

ಬೆಂಗಳೂರು, ಅ.4: ಪ್ರೇಮದ ಪ್ರತೀಕದ ಯಂತ್ರಗಳು ಎಷ್ಟು ಬೇಕಾದರೂ ಬರಲಿ. ಆದರೆ ಮಾರಕ ಯಂತ್ರಗಳು ಬೇಡ. ಈಗಾಗಲೇ ತುಂಬಾ ನಿಧಾನವಾಗಿದೆ. ನಾವೆಲ್ಲಾ ಬೃಹತ್ ಕೈಗಾರಿಕೆಗಳಿಗೆ ಅತಿಹೆಚ್ಚು ಒಲವನ್ನು ತೋರಿಸಿ ತಪ್ಪುಮಾಡಿದ್ದೇವೆ ಎಂದು ಹಿರಿಯ ಸ್ವಾತಂತ್ರ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅಭಿಪ್ರಾಯಿಸಿದ್ದಾರೆ.

ಗ್ರಾಮ ಸೇವಾ ಸಂಘ ನಡೆಸುತ್ತಿರುವ ಪವಿತ್ರ ಆರ್ಥಿಕತೆಗಾಗಿ ಸತ್ಯಾಗ್ರಹದ ಮೂರನೇ ದಿನದ ಸರಣಿ ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾವು ಕಾರ್ಮಿಕರ ಚಳುವಳಿಯನ್ನು ಗೆಲ್ಲಿಸಬೇಕಾದ ಕಾಲವಿದು. ಹೀಗಾಗಿ ಪರಿಸರ ಸ್ನೇಹಿಯಾದ ಪವಿತ್ರ ಆರ್ಥಿಕ ಸತ್ಯಾಗ್ರಹದ ಜೊತೆಗೆ ಸದಾ ಇದ್ದೇನೆ ಎಂದು ತಿಳಿಸಿದರು.

ರಂಗಕರ್ಮಿ ಪ್ರಸನ್ನ ಮಾತನಾಡಿ, ನಮ್ಮ ಬೇಡಿಕೆ ಸರಳವಿದೆ, ಕೆಲಸ ಕೊಡಿ, ಕೆಲಸ ಕೊಡಿ, ಹಸಿರನ್ನು ಹಸಿರಾಗಿ ಉಳಿಸಬಲ್ಲ ಕೆಲಸ ಕೊಡಿ. ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಅಥವಾ ಗಾಂಧೀಜಿಯವರ ಆರ್ಥಿಕತೆ ಎಂದು ಯಾವುದನ್ನು ಕರೆಯುತ್ತೇವೋ, ಅದನ್ನು ನಾವು ಪವಿತ್ರ ಆರ್ಥಿಕತೆ ಎನ್ನುತ್ತಿದ್ದೇವೆ ಎಂದರು.

ಗ್ರಾಮ ಸ್ವರಾಜ್ಯದ ಆಚೆಗೆ ನಿಲ್ಲುವ ಅನೇಕ ನಗರ ಕೈಗಾರಿಕೆಗಳಲ್ಲೂ ಕೂಡಾ ವಿಪರೀತ ಕೆಲಸ ನಷ್ಟ ಆಗುತ್ತಿದೆ. ಈ ಸಂಘಟಿತ ವಲಯ ಎಂದು ನಾವು ಕರೆಯುತ್ತಿರುವ ಕೆಲಸದ ಜಾಗಗಳಲ್ಲೂ ದಿನಕ್ಕೆ ಮೂರು ಲಕ್ಷ ಮಂದಿ ಕೆಲಸ ಕಳೆದುಕೊಳ್ಳುತ್ತಿದ್ದಾರೆ. ಈ ರಾಕ್ಷಸ ಆರ್ಥಿಕತೆಯ ರೋಗ ಹೀಗೆ ದಿನದಿಂದ ದಿನಕ್ಕೆ ಗ್ರಾಮಗಳಿಂದ ಬೆಳೆದು ನಗರಗಳಿಗೂ ವ್ಯಾಪಿಸಿದೆ. ಆದ್ದರಿಂದ ಪವಿತ್ರ ಆರ್ಥಿಕತೆ ಎಂಬ ಹೊಸ ಘೋಷಣೆಯೊಂದಿಗೆ ಈ ಹೋರಾಟವನ್ನು ಮಾಡುತ್ತಾ ಇದ್ದೇವೆ ಎಂದು ಅವರು ತಿಳಿಸಿದರು.

ಗ್ರಾಮ ಸೇವಾ ಸಂಘದ ಮಾರ್ಗದರ್ಶಕ ಚೊಕ್ಕಲಿಂಗಮ್ ಮುತ್ತಯ್ಯ, ಹರಿಹರನ್, ಎಮ್.ಸಿ.ನರೇಂದ್ರ ಹಾಗೂ ಹಾಡುಗಾರ ನಾದ ಮಣಿನಾಲ್ಕೂರು ಅವರು ಮೂರನೇ ದಿನದ ಉಪವಾಸ ಸತ್ಯಾಗ್ರಹವನ್ನು ಮುನ್ನಡೆಸುತ್ತಿದ್ದಾರೆ. ಕೋಲಾರ ಚಿಂತಾಮಣಿಯ ಬೇರು ಬೆವರು ಕಲಾ ಬಳಗ ತಮ್ಮ 59ನೇ ಹಸಿರುಪದ ಹಾಡುಗಳನ್ನು ಹಾಡುವುದರ ಮೂಲಕ ಸತ್ಯಾಗ್ರಹವನ್ನು ಬೆಂಬಲಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X