Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇನ್ನು ಪಕ್ಷವಾತ ಪೀಡಿತರು ನಡೆದಾಡಬಹುದು!

ಇನ್ನು ಪಕ್ಷವಾತ ಪೀಡಿತರು ನಡೆದಾಡಬಹುದು!

ಮೆದುಳಿನ ನಿಯಂತ್ರಣದ ‘ಎಕ್ಸೋಸ್ಕೆಲೆಟಾನ್’ನಿಂದ ಇದು ಸಾಧ್ಯ

ವಾರ್ತಾಭಾರತಿವಾರ್ತಾಭಾರತಿ4 Oct 2019 10:36 PM IST
share
ಇನ್ನು ಪಕ್ಷವಾತ ಪೀಡಿತರು ನಡೆದಾಡಬಹುದು!

ಪ್ಯಾರಿಸ್, ಅ. 4: ನೈಟ್‌ಕ್ಲಬ್ ಒಂದರಲ್ಲಿ ನಡೆದ ಅಪಘಾತದಲ್ಲಿ ಪಕ್ಷವಾತಕ್ಕೆ ಒಳಗಾಗಿದ್ದ ಫ್ರಾನ್ಸ್‌ನ ವ್ಯಕ್ತಿಯೊಬ್ಬರು ಈಗ ಮತ್ತೆ ನಡೆಯಲು ಆರಂಭಿಸಿದ್ದಾರೆ. ಮೆದುಳಿನ ನಿಯಂತ್ರಣಕ್ಕೊಳಪಟ್ಟ ‘ಎಕ್ಸೋಸ್ಕೆಲೆಟಾನ್’ ಎಂಬ ಸಾಧನವೊಂದನ್ನು ಬಳಸಿ ಅವರು ನಡೆದಾಡುತ್ತಿದ್ದಾರೆ.

 ಇದು ಕುತ್ತಿಗೆಯಿಂದ ಕೆಳಗಿನ ದೇಹದ ಭಾಗ ಸಂಪೂರ್ಣವಾಗಿ ನಿಶ್ಚಲವಾಗಿರುವ ರೋಗಿಗಳಿಗೆ ಭರವಸೆಯ ಬೆಳಕನ್ನು ನೀಡುವ ಅಮೋಘ ಸಂಶೋಧನೆಯಾಗಿದೆ ಎಂದು ವಿಜ್ಞಾನಿಗಳು ಬಣ್ಣಿಸಿದ್ದಾರೆ.

ಈ ಪ್ರಯೋಗದಲ್ಲಿ ರೋಗಿಯು ಹಲವು ತಿಂಗಳ ಕಾಲ ತರಬೇತಿಗೊಳಗಾಗಿದ್ದಾರೆ. ತರಬೇತಿಯ ಅವಧಿಯಲ್ಲಿ, ದೇಹದ ಮೂಲ ಚಲನೆಗಳನ್ನು ನಿಭಾಯಿಸುವುದಕ್ಕಾಗಿ ಅವರ ಮೆದುಳಿನ ಸಂಕೇತಗಳು ಕಂಪ್ಯೂಟರ್ ಆಧಾರಿತ ವ್ಯವಸ್ಥೆಯೊಂದರ ಮೇಲೆ ನಿಯಂತ್ರಣ ಹೊಂದುವಂತೆ ಮಾಡಲಾಯಿತು. ಬಳಿಕ ರೋಬಟ್ ಸಾಧನವೊಂದರ ಸಹಾಯದೊಂದಿಗೆ ನಡೆದಾಡಿದರು.

ಆದರೆ, ಈ ಸಾಧನ ಸಾರ್ವಜನಿಕರ ಬಳಕೆಗೆ ಲಭ್ಯವಾಗಲು ವರ್ಷಗಳೇ ಬೇಕು ಎಂದು ಈ ಪ್ರಯೋಗ ನಡೆಸಿದ ವಿಜ್ಞಾನಿಗಳು ಹೇಳಿದ್ದಾರೆ. ಆದರೆ, ಅದು ಪಕ್ಷವಾತ ರೋಗಿಗಳ ಜೀವನ ಗುಣಮಟ್ಟ ಮತ್ತು ಸ್ವಾಯತ್ತತೆಯನ್ನು ಅಮೂಲಾಗ್ರವಾಗಿ ಸುಧಾರಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಅವರು ಹೇಳಿದ್ದಾರೆ.

ಈ ಸೌಲಭ್ಯದ ಮೊದಲ ಫಲಾನುಭವಿಯಾಗಿರುವ ಫ್ರಾನ್ಸ್‌ನ ಲಯೋನ್ ನಗರದ ನಿವಾಸಿ 28 ವರ್ಷದ ತಿಯಾಬೊ ನಾಲ್ಕು ವರ್ಷಗಳ ಹಿಂದೆ ನೈಟ್‌ಕ್ಲಬ್ ಒಂದರಲ್ಲಿ 12 ಮೀಟರ್ ಎತ್ತರದ ಬಾಲ್ಕನಿಯಿಂದ ಬಿದ್ದಿದ್ದರು. ಅವರ ಬೆನ್ನುಮೂಳೆ ತುಂಡಾಗಿ ಭುಜದಿಂದ ಕೆಳಗೆ ಅವರ ದೇಶ ನಿಶ್ಚಲಗೊಂಡಿತು.

ಈ ತಂತ್ರಜ್ಞಾನವು ನನಗೆ ಹೊಸ ಬದುಕೊಂದನ್ನು ನೀಡಿದೆ ಎಂದು ಅವರು ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X