Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಜಿಪಮುನ್ನೂರು: ಜಮಾಅತ್ ಅಂಗೀಕಾರ, ಖಾಝಿ...

ಸಜಿಪಮುನ್ನೂರು: ಜಮಾಅತ್ ಅಂಗೀಕಾರ, ಖಾಝಿ ಸ್ವೀಕಾರ, ದಫನ ಭೂಮಿ ಸಮರ್ಪಣೆ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ4 Oct 2019 10:59 PM IST
share
ಸಜಿಪಮುನ್ನೂರು: ಜಮಾಅತ್ ಅಂಗೀಕಾರ, ಖಾಝಿ ಸ್ವೀಕಾರ, ದಫನ ಭೂಮಿ ಸಮರ್ಪಣೆ ಕಾರ್ಯಕ್ರಮ

ವಿಟ್ಲ : ಜಾತ್ಯಾತೀತ ಭಾರತದಲ್ಲಿ ಬಹುಸಂಖ್ಯಾತರು-ಅಲ್ಪಸಂಖ್ಯಾತರು ಪರಸ್ಪರ ಹೊಂದಾಣಿಕೆಯಿಂದ ಜೀವಿಸಿದಾಗ ಮಾತ್ರ ಈ ದೇಶದ ಸುಂದರ ಇತಿಹಾಸ ಹಾಗೂ ಸಂಸ್ಕೃತಿಯನ್ನು ಉಳಿಸಿಕೊಳ್ಳಬಹುದು. ದಕ್ಷಿಣ ಭಾರತಕ್ಕೆ ಪವಿತ್ರ ಇಸ್ಲಾಮನ್ನು ಪರಿಚಯಿಸಿದ ಮಾಲಿಕುದ್ದೀನಾರ್ ಸಹಿತ ಇಸ್ಲಾಮಿನ ಪೂರ್ವಿಕ ಮಹಾನುಭಾವರ ಉದ್ದೇಶವೂ ಅದೇ ಆಗಿತ್ತು ಎಂದು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಸಾರಿದರು.

ಸಜಿಪಮುನ್ನೂರು ಗ್ರಾಮದ ಮಲಾಯಿಬೆಟ್ಟು ಮುಹಿಯುದ್ದೀನ್ ಜುಮಾ ಮಸೀದಿಯ ಖಾಝಿ ಸ್ವೀಕಾರ, ದಫನ ಭೂಮಿ ಸಮರ್ಪಣೆ ಹಾಗೂ ಸ್ವತಂತ್ರ ಜಮಾಅತ್ ಅಂಗೀಕಾರ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದ ಅವರು ಪವಿತ್ರ ಇಸ್ಲಾಂ ಧರ್ಮದ ತತ್ವಾದರ್ಶಗಳು ವ್ಯಕ್ತಿಗಳ ಮನೋಭಾವಕ್ಕೆ ತಕ್ಕಂತೆ ಬದಲಾಯಿಸುವಂತದ್ದಲ್ಲ. ಇಸ್ಲಾಮಿನ ಎಲ್ಲಾ ತತ್ವಾದರ್ಶಗಳನ್ನು ಪೂರ್ವಿಕ ಮಹಾತ್ಮರು ಯಥಾವತ್ತಾಗಿ ಸಮುದಾಯಕ್ಕೆ ಅರ್ಪಿಸಿದ್ದಾರೆ. ಅದೇ ಅಡಿಸ್ಥಾನದಲ್ಲಿ ಸುನ್ನತ್ ಜಮಾತಿನ ಎಲ್ಲಾ ಜಮಾಅತ್‍ಗಳು ಒಗ್ಗೂಡಿ ಕಾರ್ಯಪ್ರವೃತ್ತರಾಗುವುದು ಅಗತ್ಯವಾಗಿದೆ ಎಂದರು.

ಸುನ್ನತ್ ಜಮಾಅತ್ ಆಶಯಾದರ್ಶಗಳಡಿಯಲ್ಲಿರುವ ಎಲ್ಲಾ ಜಮಾಅತ್‍ಗಳನ್ನು ಒಂದೇ ಸೂರಿನಡಿ ಒಂದುಗೂಡಿಸಲು ಸಮಸ್ತ ಜಂ-ಇಯ್ಯತುಲ್ ಉಲಮಾ ಈಗಾಗಲೇ ಸುನ್ನೀ ಮಹಲ್ಲ್ ಫೆಡರೇಶನ್ (ಎಸ್.ಎಂ.ಎಫ್.) ಎಂಬ ಸಂಘಟನೆಯನ್ನು ರೂಪೀಕರಿಸಲಾಗಿದೆ. ಸುನ್ನತ್ ಜಮಾಅತಿ ಆಶಯಾದರ್ಶಗಳನ್ನು ಅಂಗೀಕರಿಸುವ ಸರ್ವ ಜಮಾಅತ್‍ಗಳೂ ಕೂಡಾ ಈ ವೇದಿಕೆಯಡಿ ಒಗ್ಗೂಡಬೇಕು ಎಂದು ಖಾಝಿ ಕರೆ ನೀಡಿದರು.

ಮಲಾಯಿಬೆಟ್ಟು ಮುಹಿಯುದ್ದೀನ್ ಜುಮಾ ಮಸೀದಿಯ ಅಧ್ಯಕ್ಷ ಬದ್ರುದ್ದೀನ್ ಅವರ ಮುಂದಾಳುತ್ವದಲ್ಲಿ ಸಯ್ಯಿದ್ ಹುಸೈನ್ ಬಾಅಲವಿ ತಂಙಳ್ ಅವರು ಶೈಖುನಾ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರನ್ನು ಮೊಹಲ್ಲಾ ಖಾಝಿಯಾಗಿ ಜಮಾಅತರ ಸಮ್ಮುಖದಲ್ಲಿ ಸ್ವೀಕರಿಸಲಾಯಿತು. 

ಸಯ್ಯಿದ್ ಹುಸೈನ್ ಬಾಅಲವಿ ತಂಙಳ್ ಕುಕ್ಕಾಜೆ ದುವಾ ನೆರವೇರಿಸಿದರು. ಮಲಾಯಿಬೆಟ್ಟು ಮುಹಿಯುದ್ದೀನ್ ಜುಮಾ ಮಸೀದಿ ಅಧ್ಯಕ್ಷ ಬದ್ರುದ್ದೀನ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಸೀದಿ ಗೌರವಾಧ್ಯಕ್ಷ ಹಾಜಿ ಇರ್ಶಾದ್ ದಾರಿಮಿ ಅಲ್-ಜಝರಿ ಮಿತ್ತಬೈಲು, ಮಲಾಯಿಬೆಟ್ಟು ಎಂಜೆಎಂ ಖತೀಬ್ ಝುಬೈರ್ ಅಝ್‍ಹರಿ, ಕಾಶಿಪಟ್ಣ ದಾರುನ್ನೂರು ಕಾರ್ಯದರ್ಶಿ ಅಬ್ದುಲ್ ರಝಾಕ್ ಹಾಜಿ, ದಾರಿಮೀಸ್ ಜಿಲ್ಲಾಧ್ಯಕ್ಷ ಕೆ.ಬಿ. ಅಬ್ದುಲ್ ಖಾದಿರ್ ದಾರಿಮಿ, ಸಜಿಪ ರೇಂಜ್ ಜಂ-ಇಯ್ಯತುಲ್ ಮುಅಲ್ಲಿಮೀನ್ ಕಾರ್ಯದರ್ಶಿ ಶರೀಫ್ ದಾರಿಮಿ, ಮದ್ರಸ ಮುಖ್ಯ ಶಿಕ್ಷಕ ಇಸ್ಮಾಯಿಲ್ ಮುಸ್ಲಿಯಾರ್, ಅಧ್ಯಾಪಕ ಹೈದರ್ ಅಲಿ ಮುಸ್ಲಿಯಾರ್, ಆಲಾಡಿ ಬಿಜೆಎಂ ಮಾಜಿ ಅಧ್ಯಕ್ಷ ಅಬ್ದುಲ್ ರಹಿಮಾನ್ ಹಾಜಿ, ಕಾರ್ಯದರ್ಶಿ ಯೂಸುಫ್ ಆಲಾಡಿ, ಎಂಜೆಎಂ ಮಲಾಯಿಬೆಟ್ಟು ಮಾಜಿ ಅಧ್ಯಕ್ಷರುಗಳಾದ ಕೆ.ಎಂ. ಮುಹಮ್ಮದ್, ಅಹ್ಮದ್ ಬಾವಾ, ಅಬ್ದುಲ್ ಖಾದರ್ ಗುಂಡಿಕೆರೆ, ಸಜಿಪ ರೇಂಜ್ ಮದ್ರಸ ಮ್ಯಾನೇಜ್‍ಮೆಂಟ್ ಅಧ್ಯಕ್ಷ ಅಬ್ದುಲ್ ರಝಾಕ್, ಎಸ್ಕೆಎಸ್ಸೆಸ್ಸೆಫ್ ಆಲಾಡಿ ಶಾಖಾಧ್ಯಕ್ಷ ಯೂಸುಫ್ ಮಂಜಲ್ಪಾದೆ, ಎಸ್ಕೆಎಸ್ಸೆಸ್ಸೆಫ್ ಮಲಾಯಿಬೆಟ್ಟು ಶಾಖಾಧ್ಯಕ್ಷ ಇಕ್ಬಾಲ್ ಪಡ್ಪು, ಮಲಾಯಿಬೆಟ್ಟು ಅಲ್-ಅಮೀನ್ ಯಂಗ್‍ಮೆನ್ಸ್ ಅಧ್ಯಕ್ಷ ಚೆರಿಯೆ ಮೋನು ಮೊದಲಾದವರು ಭಾಗವಹಿಸಿದ್ದರು.

ಕಾರ್ಯಕ್ರಮ ಸ್ವಾಗತ ಸಮಿತಿ ಅಧ್ಯಕ್ಷ ಯೂಸುಫ್ ಕರಂದಾಡಿ ಸ್ವಾಗತಿಸಿ, ಮಸೀದಿ ಕಾರ್ಯದರ್ಶಿ ಮುಹಮ್ಮದ್ ಶರೀಫ್ ವಂದಿಸಿದರು. ಪತ್ರಕರ್ತ ಪಿ.ಎಂ. ಅಶ್ರಫ್ ಪಾಣೆಮಂಗಳೂರು ಕಾರ್ಯಕ್ರಮ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X