Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ‘ಎಂಐಒ ಡೇ’ 8ನೇ ವಾರ್ಷಿಕೋತ್ಸವ

ಮಂಗಳೂರು: ‘ಎಂಐಒ ಡೇ’ 8ನೇ ವಾರ್ಷಿಕೋತ್ಸವ

ವಾರ್ತಾಭಾರತಿವಾರ್ತಾಭಾರತಿ5 Oct 2019 9:31 PM IST
share
ಮಂಗಳೂರು: ‘ಎಂಐಒ ಡೇ’ 8ನೇ ವಾರ್ಷಿಕೋತ್ಸವ

ಮಂಗಳೂರು, ಅ.5: ಮಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಆಂಕಾಲಜಿ (ಎಂಐಒ), ಕ್ಯಾನ್ಸರ್ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಯು ನಿರಂತರ ಸೇವೆ ಹಾಗೂ ಕ್ಯಾನ್ಸರ್ ರೋಗಿಗಳ ಆರೈಕೆಯ ನೆನಪಿಗಾಗಿ 8ನೇ ವಾರ್ಷಿಕೋತ್ಸವದ 'ಎಂಐಒ ಡೇ' ಕಾರ್ಯಕ್ರಮವನ್ನು ನಗರದ ಪಂಪ್‌ವೆಲ್‌ನ ಎಂಐಒ ಆವರಣದಲ್ಲಿ ಶನಿವಾರ ಸಂಜೆ ಹಿರಿಯ ಆಂಕಾಲಜಿ ತಜ್ಞ ಡಾ.ಎಂ.ಎಸ್. ವಿದ್ಯಾ ಸಾಗರ್ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಗಲ್ಫ್ ಹಾಗೂ ಆಫ್ರಿಕನ್ ರಾಷ್ಟ್ರಗಳಲ್ಲಿನ ಆಸ್ಪತ್ರೆಗಳ ಸೌಲಭ್ಯ, ಚಿಕಿತ್ಸೆ, ವೆಚ್ಚಗಳನ್ನು ನೋಡಿದಾಗ ಮಂಗಳೂರಿನಲ್ಲಿ ದೊರೆಯುವ ಚಿಕಿತ್ಸೆ ಉತ್ತಮ ಗುಣಮಟ್ಟದಿಂದ ಕೂಡಿದ್ದು, ಆರ್ಥಿಕ ವೆಚ್ಚವೂ ಅಧಿಕವಲ್ಲ. ಮಂಗಳೂರಿನಲ್ಲಿ ‘ಮೆಡಿಕಲ್ ಟೂರಿಸಂ’ ಆರಂಭಿಸುವ ಸಿದ್ಧತೆ ನಡೆದಿದೆ ಎಂದು ಹೇಳಿದರು.

ಮಂಗಳೂರು ನಗರವು ಶಿಕ್ಷಣ, ಬ್ಯಾಂಕಿಂಗ್ ಕ್ಷೇತ್ರ ಸೇರಿದಂತೆ ವೈದ್ಯಕೀಯ ರಂಗದಲ್ಲೂ ಮುಂಚೂಣಿಯಲ್ಲಿದೆ. ದೇಶ-ವಿದೇಶದಿಂದಲೂ ರೋಗಿಗಳು ಮಂಗಳೂರಿಗೆ ಬಂದು ಚಿಕಿತ್ಸೆ ಪಡೆದು ತೆರಳುತ್ತಿದ್ದಾರೆ. ಕರಾವಳಿ ಪ್ರದೇಶವು ಮೆಡಿಕಲ್ ಟೂರಿಸಂಗೆ ಹೇಳಿ ಮಾಡಿಸಿದ ಸ್ಥಳವಾಗಿದೆ. ವಿದೇಶದಿಂದ ಬರುವ ರೋಗಿಯನ್ನು ವಿಮಾನ ನಿಲ್ದಾಣದಿಂದ ವಿಶೇಷ ವಾಹನದಲ್ಲಿ ಕರೆತಂದು, ಚಿಕಿತ್ಸೆ ನೀಡಿ, ವಾಪಸ್ ವಿಮಾನ ನಿಲ್ದಾಣವರೆಗೆ ಕಳುಹಿಸಿಕೊಡುವ ವ್ಯವಸ್ಥೆ ಮೆಡಿಕಲ್ ಟೂರಿಸಂನಲ್ಲಿದೆ. ಇದರಿಂದ ಜಿಲ್ಲೆಗೆ ವಾರ್ಷಿಕ 2000ದಿಂದ 3000 ಕೋಟಿ ರೂ. ವರೆಗೆ ಲಾಭ ಆಗಲಿದೆ ಎಂದು ಮಾಹಿತಿ ನೀಡಿದರು.

ಯೆನೆಪೊಯ ವಿಶ್ವವಿದ್ಯಾನಿಲಯದ ಉಪಕುಲಪತಿ ಹಾಗೂ ಹಿರಿಯ ಕ್ಯಾನ್ಸರ್ ಶಸ್ತ್ರಚಿಕಿತ್ಸಾ ತಜ್ಞ ಡಾ. ವಿಜಯ ಕುಮಾರ್ ಮಾತನಾಡಿ, ದೇಶದಲ್ಲಿ ಶೇ.12ರಷ್ಟು ಜನರು ಕ್ಯಾನ್ಸರ್ ಪ್ರಾಥಮಿಕ ಹಂತದಲ್ಲಿರುವಾಗಲೇ ಚಿಕಿತ್ಸೆ ಪಡೆದುಕೊಳ್ಳುತ್ತಾರೆ. ಇನ್ನು ಶೇ.88ರಷ್ಟು ಜನರು ತಡವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಮೆರಿಕ, ಇಂಗ್ಲೆಂಡ್‌ಗೆ ಹೋಲಿಸಿದಾಗ ಭಾರತದಲ್ಲಿಯೇ ಕ್ಯಾನ್ಸರ್ ರೋಗಿಗಳ ಪ್ರಮಾಣ ಕಡಿಮೆ ಇದೆ. ಎಂಐಒ ಸ್ಥಾಪನೆಯಾದ ಕೆಲವೇ ವರ್ಷಗಳಲ್ಲಿ ಸಾಧನೆಯ ಶಿಖರವನ್ನೇರಿದೆ ಎಂದರು.

ಕಾರ್ಯಕ್ರಮದಲ್ಲಿ ಎಂಐಒ ಕೈಪಿಡಿ ಮತ್ತು ಹೊಸ ಲಾಂಛನವನ್ನು ಎಂಐಒ ಅಧ್ಯಕ್ಷ ಅನಂತಕೃಷ್ಣ ಅನಾವರಣಗೊಳಿಸಿದರು. ಎಂಐಒ ನಿರ್ದೇಶಕ ರಾದ ಡಾ.ಜಲಾಲುದ್ದೀನ್ ಅಕ್ಬರ್ ಕೆ.ಸಿ., ಡಾ.ಕೃಷ್ಣ ಪ್ರಸಾದ್ ಎಂಐಒ ಆರೋಗ್ಯ ಯೋಜನೆಯ ಮಾಹಿತಿ ನೀಡಿದರು.

25 ಸಾವಿರ ರೋಗಿಗಳಿಗೆ ವಿಕಿರಣ ಚಿಕಿತ್ಸೆ ಪೂರ್ತಿಗೊಳಿಸಿದ ಅಪರೂಪದ ಶ್ರೇಷ್ಠ ಸಾಧನೆಗಾಗಿ ಎಂಐಒ ಸಂಸ್ಥೆಯ ನಿರ್ದೇಶಕ ಡಾ.ಸುರೇಶ್ ರಾವ್ ಅವರನ್ನು ಹಿರಿಯ ಆಂಕಾಲಜಿ ತಜ್ಞ ಡಾ.ಎಂ.ಎಸ್.ವಿದ್ಯಾಸಾಗರ್ ಹಾಗೂ ಶಾಸಕ ವೇದವ್ಯಾಸ ಕಾಮತ್ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು.

ಹಿರಿಯ ಆಂಕಾಲಜಿ ತಜ್ಞ ಡಾ.ಎಂ.ಎಸ್. ವಿದ್ಯಾಸಾಗರ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಎಚ್.ಆರ್. ಮ್ಯಾನೇಜರ್ ಸುಜಾತಾ ರಾವ್ ಮತ್ತಿತರರು ಉಪಸ್ಥಿತರಿದ್ದರು. ಎಂಐಒ ಸಂಸ್ಥೆಯ ನಿರ್ದೇಶಕ ಡಾ.ಸನತ್ ಹೆಗ್ಡೆ ಸ್ವಾಗತಿಸಿದರು. ಡಾ.ಎಂ.ಎಸ್. ಬಾಳಿಗಾ ವಂದಿಸಿದರು. ರಿಹಾ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X