Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಗಝಲ್‌ಗಳಿಗೆ ದೇಶ, ಕಾಲ, ಜಾತಿಯ...

ಗಝಲ್‌ಗಳಿಗೆ ದೇಶ, ಕಾಲ, ಜಾತಿಯ ಚೌಕಟ್ಟಿಲ್ಲ: ವಿಮರ್ಶಕ ರಾಜಶೇಖರ ಮಠಪತಿ

ವಾರ್ತಾಭಾರತಿವಾರ್ತಾಭಾರತಿ5 Oct 2019 9:59 PM IST
share
ಗಝಲ್‌ಗಳಿಗೆ ದೇಶ, ಕಾಲ, ಜಾತಿಯ ಚೌಕಟ್ಟಿಲ್ಲ: ವಿಮರ್ಶಕ ರಾಜಶೇಖರ ಮಠಪತಿ

ಬೆಂಗಳೂರು, ಅ.5: ಗಝಲ್‌ಗಳಿಗೆ ದೇಶ, ಕಾಲ, ಜಾತಿಯ ಹಂಗಿರುವುದಿಲ್ಲ. ಒಂದು ವೇಳೆ ಮಿತಿಗಳಿಗೆ ಒಳಪಟ್ಟಿದ್ದರೆ, ಅದು ಗಝಲ್ ಆಗಲಾರದು ಎಂದು ವಿಮರ್ಶಕ ರಾಜಶೇಖರ ಮಠಪತಿ ಅಭಿಪ್ರಾಯಿಸಿದ್ದಾರೆ. 

ಶನಿವಾರ ಅವಿರತ ಪ್ರಕಾಶನ ನಗರದ ನಯನ ಸಭಾಂಗಣದಲ್ಲಿ ಆಯೋಜಿಸಿದ್ದ ಹಿರಿಯ ಕವಿ ಸಂಗಮೇಶ ಬಾದವಾಡಗಿ ಅವರ ‘ಜೀವನ್ಮುಖಿ ಗಝಲ್’ ಸಂಕಲನ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಪಾಕಿಸ್ತಾನದ ಪ್ರಸಿದ್ಧ ಕವಿ ಫೈಝ್ ಅಹ್ಮದ್ ಫೈಝ್ ಉರ್ದು, ಹಿಂದಿ, ಪಂಜಾಬಿ, ಅರಬಿಕ್, ಪರ್ಷಿಯನ್ ಭಾಷೆಗಳಲ್ಲಿ ಗಝಲ್ ರಚಿಸಿದ್ದಾರೆ. ಇವರನ್ನು ಒಂದು ದೇಶಕ್ಕೆ, ಒಂದು ಭಾಷೆಗೆ ಸೀಮಿತಗೊಳಿಸಲು ಸಾಧ್ಯವೇ ಎಂದು ಪ್ರಶ್ನಿಸಿದರು.

ಕಾವ್ಯವಾಗಲಿ, ಗಝಲ್‌ಗಳಾಗಲಿ ಯಾರ ಸೊತ್ತಲ್ಲ. ಹಾಗೂ ಅದರ ಜನಪ್ರಿಯತೆಗೆ ಪ್ರಚಾರ ಬೇಕಿಲ್ಲ. ಅದು ತನ್ನ ಶಕ್ತಿಯಿಂದಲೇ ಓದುಗನ, ಕೇಳುಗನ ಮನಸೂರೆ ಗೊಳಿಸಬಲ್ಲವು. ಗಝಲ್‌ಗಳು ಯಾವುದೇ ಭಾಷೆಯಲ್ಲಿದ್ದರು, ಅದರಿಂದ ಹೊರಹೊಮ್ಮುವ ಭಾವ ಎಲ್ಲರ ಮನಸನ್ನು ತಟ್ಟಬಲ್ಲದು ಎಂದು ಅವರು ಹೇಳಿದರು.

ಗಝಲ್‌ಗಳಿಗೂ ವಚನಗಳಿಗೂ ಸಾಕಷ್ಟು ಸಾಮ್ಯತೆ ಇದೆ. ಇವುಗಳಲ್ಲಿ ಬಾಗುವುದು, ತಾಗುವುದು ಹಾಗೂ ಧಿಕ್ಕರಿಸುವಂತಹ ಎಲ್ಲ ಅಂಶಗಳನ್ನು ಒಳಗೊಂಡಿರುತ್ತದೆ. ಒಟ್ಟು ಸಾರಾಂಶದಲ್ಲಿ ಗಝಲ್ ಅಂದರೆ, ಜಿಂಕೆಯ ಕಣ್ಣಿನಿಂದ ಬಿದ್ದ ಕಟ್ಟಕಡೆಯ ಕಣ್ಣೀರಿನ ಬಿಂದು ಎಂದು ವರ್ಣಿಸಲಾಗಿದೆ. ಸೂಕ್ಷ್ಮವಾದ ಮನಸುಗಳಿಗೆ ಮಾತ್ರ ಗಝಲ್‌ಗಳು ದಕ್ಕಲು ಸಾಧ್ಯವೆಂದು ಅವರು ಹೇಳಿದರು.

ಹಿರಿಯ ಸಾಹಿತಿ ಹಂಪಾ ನಾಗರಾಜಯ್ಯ ಮಾತನಾಡಿ, ದೇಶದ ಸಾಹಿತ್ಯ ಲೋಕದಲ್ಲಿ ಗಝಲ್‌ಗಳಿಗೆ ತನ್ನದೇ ಆದ ವಿಶಿಷ್ಟ ಸ್ಥಾನವಿದೆ. ಹೈದರಾಬಾದ್ ಕರ್ನಾಟಕದ ಭಾಗದಲ್ಲಿ ಗಝಲ್ ಹಾಡುಗಳು ಹೆಚ್ಚಾಗಿವೆ. ಇದು ರಾಜ್ಯದ ಇತರೆ ಭಾಗಗಳಲ್ಲೂ ವಿಸ್ತರಣೆಯಾಗಬೇಕಾಗಿದೆ. ಗಝಲ್‌ಗಳನ್ನು ಕೇಳುವುದೇ ಒಂದು ವಿಶಿಷ್ಟವಾದ ಪ್ರಕ್ರಿಯೆಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಕವಿ ಚಿದಾನಂದ ಸಾಲಿ, ಗಿರೀಶ್ ಜಕಾಪುರೆ, ಚನ್ನಪ್ಪ ಅಂಗಡಿ ಹಾಗೂ ಕೃತಿಕಾರ ಕವಿ ಸಂಗಮೆೀಶ ಬಾದವಾಡಗಿ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X