Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಾಟೆಕಲ್: ಆತ್ಮಶಕ್ತಿ ಸಹಕಾರಿ ಸಂಘದ ನೂತನ...

ನಾಟೆಕಲ್: ಆತ್ಮಶಕ್ತಿ ಸಹಕಾರಿ ಸಂಘದ ನೂತನ ಶಾಖೆ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ6 Oct 2019 9:01 PM IST
share
ನಾಟೆಕಲ್: ಆತ್ಮಶಕ್ತಿ ಸಹಕಾರಿ ಸಂಘದ ನೂತನ ಶಾಖೆ ಉದ್ಘಾಟನೆ

ಕೊಣಾಜೆ:  ಅತ್ಯಂತ ಕಡಿಮೆ ಅವಧಿಯಲ್ಲಿ  17 ನೇ ಶಾಖೆ ತೆರೆಯುವ ಮೂಲಕ ಕ್ರಾಂತಿ ಮಾಡಿರುವ ಆತ್ಮಶಕ್ತಿ ಸಹಕಾರಿ ಸಂಘವು  ಸಹಕಾರಿ ರಂಗಕ್ಕೆ ಬಹಳ ದೊಡ್ಡ ಕೊಡುಗೆ. ನೂತನ‌ ಶಾಖೆ  ಅದ್ಭುತ ಪ್ರಗತಿ ಸಾಧಿಸಲಿ ಎಂದು ಶಾಸಕ ಯು.ಟಿ. ಖಾದರ್ ಹೇಳಿದರು.

ನಾಟೆಕಲ್ ನ ನಾಟೆಕಲ್ ವಾಣಿಜ್ಯ ಸಂಕೀರ್ಣದಲ್ಲಿ ರವಿವಾರ ಉದ್ಘಾಟನೆಗೊಂಡ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 17ನೇ ನಾಟೆಕಲ್ ಶಾಖೆ ಉದ್ಘಾಟಿಸಿ ಅವರು ಮಾತನಾಡಿದರು.

ಯಾವುದೇ ಕ್ಷೇತ್ರದಲ್ಲಿ  ವಿಶ್ವಾಸವೇ ದೊಡ್ಡದು. ಆತ್ಮಶಕ್ತಿ ಸಹಕಾರಿ  ಕಡಿಮೆ ಅವಧಿಯಲ್ಲಿ  ಹೆಚ್ಚಿನ‌ ಶಾಖೆ ತೆರೆಯುವ ಮೂಲಕ ರಾಜ್ಯ, ರಾಷ್ಟ್ರಪ್ರಶಸ್ತಿಗೆ ಮುಂದಿನ ದಿನಗಳಲ್ಲಿ  ಪಾತ್ರವಾಗಲಿದೆ. ಯಾಕೆಂದರೆ ಸಂಘ ಹಣಕಾಸು ವ್ಯವಹಾರ ಮಾತ್ರವಲ್ಲದೇ ಸಾಮಾಜಿಕ ಕಳಕಳಿ ಯನ್ನು ಪ್ರದರ್ಶಿಸುತ್ತಿದ್ದು ಆ ದಿಸೆಯಲ್ಲಿ ಗ್ರಾಹಕರು ಹಾಗೂ ಸಿಬ್ಬಂದಿಗಳು ಪರಸ್ಪರ ಅನ್ಯೋನ್ಯತೆಯಿಂದ ವ್ಯವಹರಿಸಿ ಸಂಘದ ಬೆಳವಣಿಗೆಯಲ್ಲಿ ಸಹಕರಿಸಬೇಕು ಎಂದರು.

ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆ ವಹಿಸಿ ನಮ್ಮ ಸಂಘದ ನೂತನ ಶಾಖೆಗಳು ರಾಷ್ಟ್ರೀಕೃತ ಬ್ಯಾಂಕಿನಂತೆ ಹವಾನಿಯಂತ್ರಿತ ವ್ಯವಸ್ಥೆ, ವಿದೇಶಕ್ಕೆ ಹಣ ಕಳುಹಿಸಲು, ವಿದೇಶದಿಂದ ಕಳುಹಿಸುವ, ಹತ್ತು ಸಾವಿರ ರೂ. ಸಾಲ ಕೇವಲ‌ ಐದು ನಿಮಿಷದಲ್ಲಿ, ಚಿನ್ನಾಭರಣ ಈಡಿನ‌ ಸಾಲ ತಿಂಗಳಿಗೆ ಕೇವಲ ಒಂದು ರೂ. ಕನಿಷ್ಟ ಬಡ್ಡಿಯಲ್ಲಿ ಗ್ರಾಂಗೆ ಗರಿಷ್ಠ  2800ರೂ. ಕೊಡುವ ಹಾಗೂ ವರ್ತಕರಿಗೆ ಸಹಾಯವಾಗುವಂತಹ ಸಾಲ ಸೌಲಭ್ಯ ನೀಡಲಿದ್ದೇವೆ ಎಂದು‌ ನುಡಿದರು.

ಕೊಲ್ಯ ಬಿಲ್ಲವ ಸೇವಾ ಸಮಾಜದ ಗೌರವಾಧ್ಯಕ್ಷ ಡಾ. ರಾಮಾನುಜಂ ಕಾರ್ಯಕ್ರಮ ಉದ್ಘಾಟಿಸಿದರು.  ಜಿಲ್ಲಾ ಪಂ. ಮಾಜಿ ಸದಸ್ಯ ಎನ್. ಎಸ್. ಕರೀಂ, ದೇರಳಕಟ್ಟೆ ವಿದ್ಯಾರತ್ನ ಆಂಗ್ಲ‌ಮಾಧ್ಯಮ ಶಾಲೆಯ ಆಡಳಿತ ನಿರ್ದೇಶಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು, ಕಿನ್ಯ ಬೆಳರಿಂಗೆ ಭಂಡಾರಮನೆ ಶ್ರೀ ಮಲರಾಯ ಧೂಮಾವತಿ ಬಂಟ ದೈವಗಳ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬಾಬು ಶ್ರೀಶಾಸ್ತಾ ಕಿನ್ಯ ಭದ್ರತಾ ಕೊಠಡಿ ಉದ್ಘಾಟಿಸಿದರು.

ತಾಲೂಕು ಪಂ. ಸದಸ್ಯೆ ಸುರೇಖ ಚಂದ್ರಹಾಸ್, ಮಂಜನಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹಮ್ಮದ್ ಅಸೈ, ಸದಸ್ಯ ಅಬ್ಬಾಸ್, ಸದಸ್ಯೆ ಪ್ರೇಮ, ಪಿಡಿಒ ಮಂಜಪ್ಪ ಎಚ್. ಎಚ್ ಹಾಗೂ ನಾಟೆಕಲ್ ವರ್ತಕರ ಸಂಘದ ಅಧ್ಯಕ್ಷ ಹನೀಫ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ನಿರ್ದೇಶಕ ವಾಮನ ಕೆ., ಕೆ. ಸದಾನಂದ ಡಿ.ಎಸ್, ರಾಮ್ ದಾಸ್ ಮರೋಳಿ, ಜಿ. ಪರಮೇಶ್ವರ ಪೂಜಾರಿ, ಆನಂದ ಎಸ್. ಕೊಂಡಾಣ, ಸುರೇಶ್ ವಿ. ಪೂಜಾರಿ, ರಮನಾಥ ಸನಿಲ್,  ಸುಜಯ ಹೇಮಚಂದ್ರ, ಕುಶಾಲಾಕ್ಷಿ ಯಶವಂತ್, ಶಾಖಾ ಪ್ರಬಂಧಕಿ ಪೂಜಾ, ಸಲಹಾ ಸಮಿತಿ ಸದಸ್ಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಸಂಘದ ಉಪಾಧ್ಯಕ್ಷ ನೇಮಿರಾಜ್ ಸ್ವಾಗತಿಸಿದರು. ಮೇಘಶ್ರೀ ಕಾರ್ಯಕ್ರಮ ನಿರೂಪಿಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಪೂಜಾ ವಿಜಯ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X