Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕುಮಾರಸ್ವಾಮಿ ಆಡಳಿತದಲ್ಲಿ ಮಂಡ್ಯ...

ಕುಮಾರಸ್ವಾಮಿ ಆಡಳಿತದಲ್ಲಿ ಮಂಡ್ಯ ಅಭಿವೃದ್ಧಿ ಆಗಿಲ್ಲ: ಮಾಜಿ ಸಚಿವ ಎನ್.ಚಲುವರಾಯಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ6 Oct 2019 11:35 PM IST
share
ಕುಮಾರಸ್ವಾಮಿ ಆಡಳಿತದಲ್ಲಿ ಮಂಡ್ಯ ಅಭಿವೃದ್ಧಿ ಆಗಿಲ್ಲ: ಮಾಜಿ ಸಚಿವ ಎನ್.ಚಲುವರಾಯಸ್ವಾಮಿ

ಮಂಡ್ಯ, ಅ.6: ಮಾಜಿ ಮುಖ್ಯಮಂತ್ರಿ ತನ್ನ 14 ತಿಂಗಳ ಆಡಳಿತದಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಏನೂ ಮಾಡಲಿಲ್ಲ. ಈಗ ಮತ್ತೆ ಜಿಲ್ಲೆಯ ಜನರ ಅನುಕಂಪ ಗಿಟ್ಟಿಸಿಕೊಳ್ಳಲು ಬಂದಿದ್ದಾರೆ ಎಂದು ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಟೀಕಿಸಿದ್ದಾರೆ.

ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಷುಗರ್ ಮತ್ತು ಪಿಎಸ್‍ಎಸ್‍ಕೆ ಸಕ್ಕರೆ ಕಾರ್ಖಾನೆಗಳು ಮುಚ್ಚಲು ಕುಮಾರಸ್ವಾಮಿಯೇ ಕಾರಣ. ಅವುಗಳ ಆರಂಭಕ್ಕೆ ಪ್ರಯತ್ನವನ್ನೇ ಮಾಡಲಿಲ್ಲ ಎಂದು ದೂರಿದರು.

ಕುಮಾರಸ್ವಾಮಿ ಎರಡು ಬಾರಿ ಮುಖ್ಯಮಂತ್ರಿಯಾದರು. ಅವರು ಮುಖ್ಯಮಂತ್ರಿಯಾಗಲು ಮಂಡ್ಯ ಜಿಲ್ಲೆಯ ಜನತೆ ಪ್ರಮುಖ ಕಾರಣ. ಆದರೆ, ತಮ್ಮ ಆಡಳಿತದಲ್ಲಿ ಜಿಲ್ಲೆಯ ಜನರ ಪರವಾದ ಕೆಲಸಗಳು ನಡೆದೇ ಇಲ್ಲ. ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಜಿಲ್ಲೆಯ ಜನರ ಅನುಕಂಪ ಪಡೆಯಲು ಯತ್ನಿಸುತ್ತಿದ್ದಾರೆ. ಹಾಗಾಗಿ ಜಿಲ್ಲೆಯ ರೈತರು ಮತ್ತು ಅಭಿವೃದ್ಧಿ ಕುರಿತಂತೆ ಮಾತನಾಡುತ್ತಿದ್ದಾರೆ. ಜಿಲ್ಲೆಯ ಜನರು ಎಚ್ಚರದಿಂದ ಇರಬೇಕು ಎಂದು ಅವರು ಸಲಹೆ ನೀಡಿದರು.

ತಾನು ಸಿಎಂ ಆಗಿದ್ದಾಗ ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಬಿಡುಗಡೆ ಮಾಡಿದ್ದ 8 ಸಾವಿರ ಕೋಟಿ ಅನುದಾನವನ್ನು ಇಂದಿನ ರಾಜ್ಯ ಸರಕಾರ ತಡೆಹಿಡಿದಿದೆ ಎನ್ನುವ ಕುಮಾರಸ್ವಾಮಿ, ಆ ಬಗ್ಗೆ ವಿಧಾನಸೌಧದ ಮುಂದೆ ಪ್ರತಿಭಟಿಸಲಿ ಎಂದರು. ಜಿಲ್ಲೆಯ ಅಭಿವೃದ್ಧಿಗೆ ತಾನು 8 ಸಾವಿರ ಕೋಟಿ ರೂ. ಅನುದಾನ ನೀಡಿದ್ದೆ ಎನ್ನುವ ಕುಮಾರಸ್ವಾಮಿ ಅವರು, ತನ್ನ 14 ತಿಂಗಳ ಅವಧಿಯಲ್ಲಿ ಆ ಅನುದಾನವನ್ನು ಅಭಿವೃದ್ಧಿಗೆ ಬಳಸಿಕೊಳ್ಳಲಿಲ್ಲವೇಕೆ ಎಂದು ಅವರು ಪ್ರಶ್ನಿಸಿದರು.

ಈಗ ಜಿಲ್ಲೆಯಲ್ಲಿ ನಡೆಯುತ್ತಿರುವ ರಸ್ತೆ ಮತ್ತಿತರ ಕಾಮಗಾರಿಗಳು ಸಿದ್ದರಾಮಯ್ಯನವರ ಸರಕಾರದ ಆಡಳಿತದ ಅವಧಿಯದ್ದು ಎಂದ ಅವರು, ಸುಳ್ಳು ಹೇಳಿದರೆ ಜನ ನಂಬೋದಿಲ್ಲ. ಇನ್ನಾದರೂ ಕುಮಾರಸ್ವಾಮಿ ಜನರಿಗೆ ಮಂಕುಬೂದಿ ಎರಚುವುದನ್ನು ಬಿಡಬೇಕು ಎಂದರು.

ಅವರ ಶಾಸಕರು ಏನು ಮಾಡುತ್ತಿದ್ದಾರೆ?

ಕುಮಾರಸ್ವಾಮಿ ಎಲ್ಲದಕ್ಕೂ ಸಂಸದೆ ಸುಮಲತಾ ಅವರನ್ನೇ ಟಾರ್ಗೆಟ್ ಮಾಡುತ್ತಾರೆ. ಸ್ವಾಭಿಮಾನಕ್ಕೆ ವೋಟು ಪಡೆದವರು ಇನ್ನೂ ನ್ಯೂಯಾರ್ಕಿನಲ್ಲಿದ್ದಾರ ಎಂದು ವ್ಯಂಗ್ಯ ಮಾಡುತ್ತಾರೆ. ಹಾಗಾದರೆ, ಜಿಲ್ಲೆಯ ಇವರ ಪಕ್ಷದ ಏಳು ಮಂದಿ ಶಾಸಕರು ಏನು ಮಾಡುತ್ತಿದ್ದಾರೆ ಎಂದು  ಚಲುವರಾಯಸ್ವಾಮಿ ತಿರುಗೇಟು ನೀಡಿದರು.

ಜಿಲ್ಲೆಯ ಸಮಸ್ಯೆ ಬಗೆಹರಿಸುವ ಜವಾಬ್ಧಾರಿ ಸಂಸದರಿಗೂ ಇದೆ ಗೊತ್ತು. ಆದರೆ, ಎಲ್ಲಕ್ಕೂ ಅವರ ಕಡೆಗೆ ಬೊಟ್ಟು ಮಾಡುವುದು ಸರಿಯಲ್ಲ. ಸುಮಲತಾ ಅವರೂ ರಾಜ್ಯ ಸರಕಾರದೊಂದಿಗೆ ಸಂಪರ್ಕ ಇಟ್ಟುಕೊಂಡು ಸಮಸ್ಯೆ ಬಗೆಹರಿಸಬೇಕು ಎಂದು ಅವರು ಸಲಹೆ ನೀಡಿದರು.

ನಾನು ಸಿಎಂ ಯಡಿಯೂರಪ್ಪ, ಯೋಗೇಶ್ವರ್ ಜೊತೆ ಚೆನ್ನಾಗಿ ಇದ್ದೇನೆ. ಅದೇ ರೀತಿ ಜೆಡಿಎಸ್‍ನ ಕೆಲ ಶಾಸಕರ ಜೊತೆಯೂ ಸಂಪರ್ಕದಲ್ಲಿದ್ದೇನೆ. ರಾತ್ರಿ ಯಡಿಯೂರಪ್ಪ ಮನೆಗೆ ಯಾಕೆ ಹೋಗಲಿ? ಬೇಕಾದರೆ ಬೆಳಗ್ಗೆಯೇ ಹೋಗುತ್ತೇವೆ. ಜಿಲ್ಲೆಯ ಸಮಸ್ಯೆ ಕುರಿತು ಚರ್ಚೆ ಮಾಡುತ್ತೇವೆ. ಕೆಲವು ಕೆಲಸಗಳನ್ನು ಮಾಡಿಸುತ್ತಿದ್ದೇವೆ ಎಂದು ಆರೋಪಕ್ಕೆ ಪ್ರತಿಕ್ರಿಯಿಸಿದರು.

ಮಾಜಿ ಶಾಸಕ ಎಚ್.ಬಿ.ರಾಮು, ಕಾಂಗ್ರೆಸ್ ಮುಖಂಡರಾದ ಸಿ.ಎಂ.ದ್ಯಾವಪ್ಪ, ಸಿ.ಕೆ.ತ್ಯಾಗರಾಜು, ಕಂಬದಹಳ್ಳಿ ಪುಟ್ಟಸ್ವಾಮಿ ಹಾಗು ಅಜ್ಜಹಳ್ಳಿ ರಾಮಕೃಷ್ಣ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X