Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕುಟುಂಬದ 6 ಜನರನ್ನು ಕೊಂದ ಸರಣಿ ಹಂತಕಿಯ...

ಕುಟುಂಬದ 6 ಜನರನ್ನು ಕೊಂದ ಸರಣಿ ಹಂತಕಿಯ ಬಗ್ಗೆ ಗ್ರಾಮಸ್ಥರು ಹೇಳಿದ ಸ್ಫೋಟಕ ಸತ್ಯಗಳಿವು...

ವಾರ್ತಾಭಾರತಿವಾರ್ತಾಭಾರತಿ7 Oct 2019 1:01 PM IST
share
ಕುಟುಂಬದ 6 ಜನರನ್ನು ಕೊಂದ ಸರಣಿ ಹಂತಕಿಯ ಬಗ್ಗೆ ಗ್ರಾಮಸ್ಥರು ಹೇಳಿದ ಸ್ಫೋಟಕ ಸತ್ಯಗಳಿವು...

ತಿರುವನಂತಪುರಂ, ಅ.7: ತನ್ನ ಮಾಜಿ ಪತಿ, ಆತನ ಹೆತ್ತವರು ಹಾಗೂ ಕುಟುಂಬದ ಇತರ ಮೂವರು ಸದಸ್ಯರನ್ನು 14 ವರ್ಷಗಳ ಅವಧಿಯಲ್ಲಿ ಯಾರಿಗೂ ಸಂಶಯ ಬಾರದಂತೆ ಆಹಾರದಲ್ಲಿ ಸಯನೈಡ್ ಬೆರೆಸಿ ಕೊಂದು ಕೊನೆಗೂ ಪೊಲೀಸರ ಅತಿಥಿಯಾಗಿರುವ 47  ವರ್ಷದ ಜಾಲಿ ಜೋಸೆಫ್ ಕುಟುಂಬದ ಆಸ್ತಿ ಕಬಳಿಸಿ ತನ್ನ ಸ್ನೇಹಿತನ ಜತೆ ಜೀವನ ನಡೆಸುವ ಇಚ್ಛೆಯಿಂದ ಇಷ್ಟೆಲ್ಲಾ ಕೊಲೆಗಳನ್ನು ಮಾಡಿದ್ದಳೆಂದು ತಿಳಿದು ಬಂದಿದೆ.

ಜಾಲಿ ಜೋಸೆಫ್ ಳ ಮಾಜಿ ಪತಿ ಜಾಯ್ ಥಾಮಸ್ ಗ್ರಾಮವಾದ ಕೂಡತಾಯಿಯ ಜನರಿಗೆ ಜಾಲಿ ಇಷ್ಟೆಲ್ಲಾ ಕೊಲೆಗಳನ್ನು ಮಾಡಿದ್ದಾಳೆಂದು ತಿಳಿದು ಆಘಾತವಾಗಿದೆ. ದೇವರ ಮೇಲೆ ಭಯಭಕ್ತಿ ಹೊಂದಿದ್ದವಳು, ಎಲ್ಲರೊಡನೆ ನಗುನಗುತ್ತಾ ಮಾತನಾಡುತ್ತಾ ಎಲ್ಲರ ಪ್ರೀತಿಗೆ ಪಾತ್ರಳಾಗಿದ್ದವಳು ಹಾಗೂ ಅಪಾರ ಸ್ನೇಹಿತರನ್ನು ಹೊಂದಿದ ಮಹಿಳೆ ಇಂತಹ ಘೋರ ಕೃತ್ಯವೆಸಗಿದ್ದಾಳೆಂಬುದನ್ನು ನಂಬಲು ಗ್ರಾಮದ ಜನತೆಗೆ ಸಾಧ್ಯವಾಗುತ್ತಿಲ್ಲ.

``ಕಳೆದ ವಾರವಷ್ಟೇ ರಿಟ್ರೀಟ್ ಸೆಂಟರ್ ನಲ್ಲಿ ಒಂದು ವಾರವಿದ್ದು ನಾವೆಲ್ಲರೂ ಮರಳಿದ್ದೆವು. ಆಕೆ ನಿಯಮಿತವಾಗಿ ತನ್ನ ಮನೆಯಲ್ಲಿ ಪ್ರಾರ್ಥನಾ ಕೂಟಗಳನ್ನು ನಡೆಸುತ್ತಿದ್ದಳು'' ಎಂದು ಜಾಲಿ ಇದ್ದ ಪ್ರಾರ್ಥನಾ ಗುಂಪಿನ ಸದಸ್ಯರಾದ ಪಿ ಜಾರ್ಜ್ ಹೇಳುತ್ತಾರೆ.

ಪೊಲೀಸರು ಆಕೆಯ ಮೊದಲ ಪತಿ ರಾಯ್ ಥಾಮಸ್ ಪ್ರಕರಣದ ಮರುತನಿಖೆ ನಡೆಸುತ್ತಿದ್ದಾರೆಂಬ ಸುದ್ದಿಯ ಬಗ್ಗೆ ಹೇಳಿದಾಗ ಆ ಬಗ್ಗೆ ತನಗೆ ಚಿಂತಿಸಲು ಏನೂ ಇಲ್ಲ ಎಂದು ಆಕೆ ಹೇಳಿದ್ದಳೆಂದು ಜಾರ್ಜ್ ನೆನಪಿಸುತ್ತಾರೆ.

2017ರಲ್ಲಿ ಆಕೆ  ಹೈಸ್ಕೂಲ್ ಶಿಕ್ಷಕ ಶಾಜು ಝಚರಿಯಾಸ್ ಎಂಬವರನ್ನು ವಿವಾಹವಾಗಿದ್ದಳು. "ರಾಯ್ ಮತ್ತವರ ಕುಟುಂಬ ಸದಸ್ಯರ ಸಮಾಧಿ ಬಳಿ ಆಗಾಗ ಹೋಗಿ ಹೂಗಳನ್ನಿಟ್ಟು ಕ್ಯಾಂಡಲ್ ಹೊತ್ತಿಸುತ್ತಿದ್ದಳು. ಧಾರ್ಮಿಕ ಮನೋಭಾವದ ಆಕೆ ರವಿವಾರದ ಪ್ರಾರ್ಥನೆ ತಪ್ಪಿಹೋದರೆ ಸಂಕಟ ಪಡುತ್ತಿದ್ದಳು'' ಎಂದು ಶಾಜು ಹೇಳುತ್ತಾರೆ.

ಇಡುಕ್ಕಿಯ ಕಟ್ಟಪ್ಪನ ಎಂಬಲ್ಲಿನ ನಿವಾಸಿಯಾಗಿರುವ ಜಾಲಿ 1997ರಲ್ಲಿ ರಾಯ್ ಜತೆ ಪ್ರೇಮ ವಿವಾಹವಾಗಿದ್ದಳು, ದಂಪತಿಗೆ  15 ಹಾಗೂ 21 ವರ್ಷದ ಇಬ್ಬರು ಪುತ್ರರಿದ್ದಾರೆ. ಅವರಿಬ್ಬರೂ ಕೊಚ್ಚಿಯಲ್ಲಿರುವ ತಮ್ಮ ತಂದೆಯ ಸೋದರಿ ಮನೆಯಲ್ಲಿದ್ದಾರೆ.

ವಾಸ್ತವವಾಗಿ ಬ್ಯೂಟಿ ಪಾರ್ಲರ್ ಒಂದರಲ್ಲಿ ಉದ್ಯೋಗಿಯಾಗಿದ್ದ ಆಕೆ ತಾನು ಕ್ಯಾಲಿಕಟ್ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಇಲ್ಲಿನ ಶಿಕ್ಷಕಿ ಎಂದು ಎಲ್ಲರನ್ನೂ ನಂಬಿಸಿದ್ದಳು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X