ಕ್ಷೇತ್ರದಿಂದ ಕಾಲ್ಕಿತ್ತಿರುವ ಸಂಸದೆ ಶೋಭಾ: ಮಾಜಿ ಸಿಎಂ ಕುಮಾರಸ್ವಾಮಿ
![ಕ್ಷೇತ್ರದಿಂದ ಕಾಲ್ಕಿತ್ತಿರುವ ಸಂಸದೆ ಶೋಭಾ: ಮಾಜಿ ಸಿಎಂ ಕುಮಾರಸ್ವಾಮಿ ಕ್ಷೇತ್ರದಿಂದ ಕಾಲ್ಕಿತ್ತಿರುವ ಸಂಸದೆ ಶೋಭಾ: ಮಾಜಿ ಸಿಎಂ ಕುಮಾರಸ್ವಾಮಿ](https://www.varthabharati.in/sites/default/files/images/articles/2019/10/7/213687-1570443956.jpg)
ಬೆಂಗಳೂರು, ಅ. 7: ‘ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಹ ಬಂದು ಸಾವಿರಾರು ಕುಟುಂಬಗಳ ಬದುಕು ಡೋಲಾಯಮಾನವಾಗಿದೆ. ನೆರೆ ಪರಿಹಾರ ಸಿಗುತ್ತಿಲ್ಲ ಎಂದು ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ’ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಕ್ಷೇತ್ರದ ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ ಅವರು ಅವರೊಂದಿಗಿದ್ದು ಧೈರ್ಯ ತುಂಬುವ ಕೆಲಸ ಮಾಡುವ ಬದಲು ಕ್ಷೇತ್ರದಿಂದ ಕಾಲ್ಕಿತ್ತಿರುವುದು ಅವರ ‘ರೈತಪರ ಕಾಳಜಿ’ಯನ್ನು ಎತ್ತಿತೋರಿಸುತ್ತದೆ’ ಎಂದು ಟ್ವಿಟ್ಟರ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ
Next Story