Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬ್ರೆಡ್ ಖರೀದಿಸಲು ಹೊರಬಂದ ಕಾಶ್ಮೀರಿ...

ಬ್ರೆಡ್ ಖರೀದಿಸಲು ಹೊರಬಂದ ಕಾಶ್ಮೀರಿ ಬಾಲಕನನ್ನು ಥಳಿಸಿ ಲಾಕಪ್ ನಲ್ಲಿಟ್ಟ ಪೊಲೀಸರು: ಆರೋಪ

ವಾರ್ತಾಭಾರತಿವಾರ್ತಾಭಾರತಿ8 Oct 2019 11:25 PM IST
share
ಬ್ರೆಡ್ ಖರೀದಿಸಲು ಹೊರಬಂದ ಕಾಶ್ಮೀರಿ ಬಾಲಕನನ್ನು ಥಳಿಸಿ ಲಾಕಪ್ ನಲ್ಲಿಟ್ಟ ಪೊಲೀಸರು: ಆರೋಪ

ಶ್ರೀನಗರ, ಅ.8: ಬ್ರೆಡ್ ಖರೀದಿಸಲು ಅಂಗಡಿಗೆ ತೆರಳಿದ್ದ 9 ವರ್ಷದ ಬಾಲಕನಿಗೆ ಪೊಲೀಸರು ಅಮಾನುಷವಾಗಿ ಥಳಿಸಿ ಎರಡು ದಿನ ಲಾಕಪ್‌ನಲ್ಲಿ ಚಿತ್ರಹಿಂಸೆ ನೀಡಿದ್ದು ಈಗ ಬಾಲಕ ಖಿನ್ನತೆಗೆ ಒಳಗಾಗಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ. ಈ ಬಗ್ಗೆ telegraphindia.com ವರದಿ ಮಾಡಿದೆ.

4ನೇ ತರಗತಿ ವಿದ್ಯಾರ್ಥಿಯಾಗಿರುವ ಈತನ ತಾಯಿ ಮೃತಪಟ್ಟಿದ್ದು ತಂದೆ ತೊರೆದು ಹೋಗಿದ್ದಾನೆ. ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿ ರದ್ದುಗೊಳಿಸಿದ ಬಳಿಕ ನಿರ್ಬಂಧ ವಿಧಿಸಲಾಗಿದೆ. ಈ ಅವಧಿಯಲ್ಲಿ ಕನಿಷ್ಟ 144 ಅಪ್ರಾಪ್ತ ವಯಸ್ಸಿನವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಪೋಷಕರು ಆರೋಪಿದ್ದಾರೆ.

 ಆಗಸ್ಟ್ 7ರಂದು ಅಂಗಡಿಗೆ ತೆರಳಿ ಬ್ರೆಡ್ ತರುವಂತೆ ಬಾಲಕನ ಅಜ್ಜಿ ತಿಳಿಸಿದ ಕಾರಣ ಬಾಲಕ ಮನೆಯಿಂದ ಹೊರಬಿದ್ದಿದ್ದಾನೆ. ಈ ಸಂದರ್ಭ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು ಭದ್ರತಾ ಪಡೆಗಳ ಹಾಗೂ ಪ್ರತಿಭಟನಾಕಾರರ ಮಧ್ಯೆ ಸಂಘರ್ಷ ನಡೆದಿದೆ. ಆಗ ಪ್ರತಿಭಟನಾಕಾರರ ಜೊತೆ ತನ್ನನ್ನೂ ಪೊಲೀಸರು ಬಂಧಿಸಿದ್ದಾರೆ ಎಂದು ಬಾಲಕ ಹೇಳಿದ್ದಾನೆ.

ಬಂಧಿಸುವ ಮೊದಲು ತನ್ನ ಕೆನ್ನೆಗೆ ಪೊಲೀಸರು ಬಾರಿಸಿದಾಗ ರಕ್ತ ಸುರಿದಿದೆ. ಆದರೂ ಕರುಣೆ ತೋರದೆ ಸ್ಟೇಷನ್‌ಗೆ ಎಳೆದೊಯ್ದು ಎರಡು ದಿನ ಬಂಧಿಸಿಟ್ಟಿದ್ದಾರೆ ಎಂದು ಬಾಲಕ ದೂರಿದ್ದಾನೆ. ಮೊಮ್ಮಗ ಮನೆಯಿಂದ ಹೊರಹೋಗಲು ಕೇಳುತ್ತಿರಲಿಲ್ಲ. ಆದರೆ ಹಸಿವು ತಾಳಲಾರದೆ ಒಂದಿಷ್ಟು ಬ್ರೆಡ್ ತರುವಂತೆ ತಾನೇ ಒತ್ತಾಯ ಮಾಡಿ ಕಳಿಸಿದ್ದೆ ಎಂದು ಬಾಲಕನ ಅಜ್ಜಿ ತಿಳಿಸಿದ್ದಾರೆ. ಬಾಲಕನನ್ನು ಲಾಕಪ್‌ನಲ್ಲಿ ಕೂಡಿ ಹಾಕಿದ ವಿಷಯ ತಿಳಿಯುತ್ತಿದ್ದಂತೆಯೇ ಪತಿಯೊಂದಿಗೆ ಠಾಣೆಗೆ ತೆರಳಿದೆವು. ಆದರೆ ನಮ್ಮ ಮಾತನ್ನೇ ಕಿವಿಗೆ ಹಾಕಿಕೊಳ್ಳಲಿಲ್ಲ. ಠಾಣೆಯ ಹೊರಗೆ ರಾತ್ರಿ 2.30ರವರೆಗೂ ಕುಳಿತು ವಾಪಸಾದೆವು. ಮರುದಿನ ಮತ್ತೆ ಠಾಣೆಗೆ ಹೋದಾಗ , ಪ್ರತೀ ದಿನ ಬೆಳಿಗ್ಗೆ ಬಾಲಕನನ್ನು ಠಾಣೆಗೆ ಹಾಜರುಪಡಿಸಿ ಕರೆದೊಯ್ಯುವಂತೆ ಪೊಲೀಸರು ತಿಳಿಸಿದರು. ಆದರೆ ಆತ ಇನ್ನೂ ಚಿಕ್ಕವನೆಂದು ಹೇಳಿದಾಗ, 15 ಮಂದಿ ಸಾಕ್ಷಿಗಳನ್ನು ಕರೆತಂದು ಬಾಂಡ್ ಪೇಪರ್‌ಗೆ ಸಹಿ ಹಾಕುವಂತೆ ಸೂಚಿಸಿದರು. 20 ಸಾಕ್ಷಿಗಳನ್ನು ಹಾಜರುಪಡಿಸಿದಾಗ ಮೊಮ್ಮಗನನ್ನು ಬಂಧಮುಕ್ತಗೊಳಿಸಿದ್ದಾರೆ. ಆದರೆ ಅಂದಿನಿಂದ ಆತ ಯಾವುದರಲ್ಲೂ ಆಸಕ್ತಿ ಇಲ್ಲದವನಂತೆ ಖಿನ್ನತೆಗೆ ಜಾರಿದ್ದಾನೆ ಎಂದು ಬಾಲಕನ ಅಜ್ಜಿ ಹೇಳಿದ್ದಾರೆ.

ಆದರೆ ಇದನ್ನು ನಿರಾಕರಿಸಿರುವ ಪೊಲೀಸರು, ಕಾನೂನಿನೊಂದಿಗೆ ಹೋರಾಟಕ್ಕಿಳಿದಿರುವ ಯಾವುದೇ ಬಾಲಕನನ್ನೂ ಪೊಲೀಸರು ಬಂಧಿಸಿಲ್ಲ. ಒಂದು ವೇಳೆ ಬಂಧಿಸಿದ್ದರೂ ಅಂತವರನ್ನು ಸಂಬಂಧಿಸಿದ ಬಾಲ ನ್ಯಾಯಮಂಡಳಿಯ ಆದೇಶದನ್ವಯ ವೀಕ್ಷಣಾ ಗೃಹದಲ್ಲಿಡಲಾಗುತ್ತದೆ ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X