Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ​ಭಾರತಕ್ಕೂ ಒಂದು "ಗ್ರೇಟ್ ಗ್ರೀನ್ ವಾಲ್"

​ಭಾರತಕ್ಕೂ ಒಂದು "ಗ್ರೇಟ್ ಗ್ರೀನ್ ವಾಲ್"

ವಾರ್ತಾಭಾರತಿವಾರ್ತಾಭಾರತಿ9 Oct 2019 9:08 AM IST
share
​ಭಾರತಕ್ಕೂ ಒಂದು ಗ್ರೇಟ್ ಗ್ರೀನ್ ವಾಲ್

ಹೊಸದಿಲ್ಲಿ : ಹವಾಮಾನ ಬದಲಾವಣೆ ಮತ್ತು ಮರುಭೂಮೀಕರಣವನ್ನು ತಡೆಯುವ ನಿಟ್ಟಿನಲ್ಲಿ ಗುಜರಾತ್‌ನಿಂದ ದೆಹಲಿ- ಹರ್ಯಾಣ ಗಡಿವರೆಗೆ ಒಟ್ಟು 1400 ಕಿಲೋಮೀಟರ್ ಉದ್ದ ಹಾಗೂ 5 ಕಿಲೋಮೀಟರ್ ವಿಸ್ತಾರದ ಹಸಿರುಪಟ್ಟಿ ಅಭಿವೃದ್ಧಿಪಡಿಸುವ ಮಹತ್ವಾಕಾಂಕ್ಷಿ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸಿದೆ.

ಸೆನೆಗಲ್‌ನ ದಕರ್‌ನಿಂದ ದಿಜಿಬೋಟಿವರೆಗೆ ಆಫ್ರಿಕದುದ್ದಕ್ಕೂ ಬೆಳೆಸಲು ಉದ್ದೇಶಿಸಿರುವ "ಗ್ರೇಟ್ ಗ್ರೀನ್ ವಾಲ್" ಮಾದರಿಯಲ್ಲಿ ಈ ಹಸಿರುಪಟ್ಟಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ.

ಈ ಮಹತ್ವಾಕಾಂಕ್ಷಿ ಯೋಜನೆ ಇನ್ನೂ ಆರಂಭಿಕ ಹಂತದಲ್ಲಿದ್ದು, ಇದಕ್ಕೆ ಅನುಮೋದನೆ ದೊರಕಿದಲ್ಲಿ, ಭೂಮಿಯ ಗುಣಮಟ್ಟ ಕುಸಿತ ಮತ್ತು ಥಾರ್‌ಮರುಭೂಮಿ ಪೂರ್ವಾಭಿಮುಖವಾಗಿ ಬೆಳೆಯುವುದನ್ನು ತಡೆಯುವ ಮಹತ್ವದ ಯೋಜನೆಯಾಗಲಿದೆ ಎಂದು ಉನ್ನತ ಮೂಲಗಳು ಹೇಳಿವೆ.

ಈ ಮೆಗಾ ಯೋಜನೆ ಈಗಾಗಲೇ ವಿವಿಧ ಸಚಿವಾಲಯಗಳ ಉನ್ನತ ಅಧಿಕಾರಿಗಳಲ್ಲಿ ಸಂಚಲನ ಮೂಡಿಸಿದೆ.

ಪೋರಬಂದರ್‌ನಿಂದ ಪಾಣಿಪತ್‌ವರೆಗೆ ನಿರ್ಮಿಸಲು ಉದ್ದೇಶಿಸಿರುವ ಈ ಹಸಿರುಪಟ್ಟಿ, ಅರವಲಿ ಬೆಟ್ಟ ಶ್ರೇಣಿಯಲ್ಲಿ ಅಂದರೆ ಗುಜರಾತ್, ರಾಜಸ್ಥಾನ, ಹರ್ಯಾಣ ಮತ್ತು ದೆಹಲಿವರೆಗೆ ಅರಣ್ಯ ಬೆಳೆಸುವ ಮೂಲಕ ಭೂಗುಣಮಟ್ಟ ಕುಸಿತ ತಡೆಯಲು ನೆರವಾಗುವುದು ಮಾತ್ರವಲ್ಲದೇ, ಪಶ್ಚಿಮ ಭಾರತ ಹಾಗೂ ಪಾಕಿಸ್ತಾನದಿಂದ ಬರುವ ದೂಳನ್ನು ತಡೆಯುವಲ್ಲಿ ಕೂಡಾ ನೆರವಾಗಲಿದೆ ಎನ್ನುವುದು ಅಧಿಕಾರಿಗಳ ಅಭಿಮತ.

ಭಾರತದಲ್ಲಿ ಅರಣ್ಯ ನಾಶವನ್ನು ತಡೆಯುವ ನಿಟ್ಟಿನಲ್ಲಿ ನಡೆದ ಸಿಒಪಿ14 ಸಮ್ಮೇಳನದ ಕಾರ್ಯಸೂಚಿಗೆ ಅನುಗುಣವಾಗಿ ಈ ಬೃಹತ್ ಹಸಿರು ಪಟ್ಟಿ ಬೆಳೆಸುವ ಯೋಜನೆ ರೂಪಿಸಲಾಗಿದೆ. ಆದರೆ ಇದಕ್ಕೆ ಅಂತಿಮ ಒಪ್ಪಿಗೆ ಸಿಗಬೇಕಾಗಿರುವ ಕಾರಣ ತಕ್ಷಣಕ್ಕೆ ಅನುಷ್ಠಾನಕ್ಕೆ ತರುವಂತಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ವಿವರ ನೀಡಿದ್ದಾರೆ.

ಆಫ್ರಿಕಾದ ಗ್ರೇಟ್ ಗ್ರೀನ್ ವಾಲ್ ಪ್ರಸ್ತಾವ ದಶಕದ ಹಿಂದೆಯೇ ಚಾಲನೆ ಪಡೆದಿದ್ದರೂ, ಇದರ ಅನುಷ್ಠಾನಕ್ಕೆ ಹಲವು ದೇಶಗಳ ಪಾಲ್ಗೊಳ್ಳುವಿಕೆ ಅಗತ್ಯತೆ ಹಿನ್ನೆಲೆಯಲ್ಲಿ ಇನ್ನೂ ಕಾರ್ಯ ಆರಂಭವಾಗಿಲ್ಲ. ಆದರೆ ಭಾರತ ಇದನ್ನು ರಾಷ್ಟ್ರೀಯ ಆದ್ಯತೆಯಾಗಿ ಪರಿಗಣಿಸಿ, 26 ದಶಲಕ್ಷ ಹೆಕ್ಟೇರ್ ಭೂಭಾಗದ ಗುಣಮಟ್ಟ ಕುಸಿಯುವುದನ್ನು 2030ರೊಳಗೆ ತಡೆಯುವ ಉದ್ದೇಶ ಹೊಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X