Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಫೇಲ್ ವಿಮಾನಕ್ಕೂ ಧಾರ್ಮಿಕ ನಂಟು...

ರಫೇಲ್ ವಿಮಾನಕ್ಕೂ ಧಾರ್ಮಿಕ ನಂಟು ಕಲ್ಪಿಸುವುದೇಕೆ: ಕೇಂದ್ರದ ವಿರುದ್ಧ ಕಾಂಗ್ರೆಸ್ ಆಕ್ರೋಶ

ಯುದ್ಧ ವಿಮಾನಕ್ಕೆ ಆಯುಧಪೂಜೆ

ವಾರ್ತಾಭಾರತಿವಾರ್ತಾಭಾರತಿ9 Oct 2019 1:24 PM IST
share
ರಫೇಲ್ ವಿಮಾನಕ್ಕೂ ಧಾರ್ಮಿಕ ನಂಟು ಕಲ್ಪಿಸುವುದೇಕೆ: ಕೇಂದ್ರದ ವಿರುದ್ಧ ಕಾಂಗ್ರೆಸ್ ಆಕ್ರೋಶ

ಹೊಸದಿಲ್ಲಿ, ಅ.9: ಭಾರತದ ವಾಯುಪಡೆಯ ವೈಮಾನಿಕ ಯುದ್ಧ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸಲು ಸಹಕಾರಿಯಾಗುವ ಮೊಟ್ಟಮೊದಲ ರಫೇಲ್ ಯುದ್ಧ ವಿಮಾನವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಅಧಿಕೃತವಾಗಿ ಫ್ರಾನ್ಸ್ ನಿಂದ ಸ್ವೀಕರಿಸಿದ್ದಾರೆ.

ಪ್ರಾಯೋಗಿಕ ಹಾರಾಟಕ್ಕಿಂತ ಮೊದಲು ಯುದ್ಧ ವಿಮಾನದ ಮೇಲೆ ‘ಓಂ’ ಎಂದು ಬರೆದು ನಂತರ ತೆಂಗಿನಕಾಯಿ, ಹೂವುಗಳನ್ನು ಇರಿಸಿ  ಅದಕ್ಕೆ ಆಯುಧಪೂಜೆ ನಡೆಸಿರುವುದನ್ನು ಕಾಂಗ್ರೆಸ್ ಕಟುವಾಗಿ ಟೀಕಿಸಿದೆ.

ರಫೇಲ್ ಹಸ್ತಾಂತರವನ್ನೂ ನರೇಂದ್ರ ಮೋದಿ ಸರಕಾರ ಕೇಸರೀಕರಣಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್  ಟೀಕಿಸಿದ್ದಾರೆ.

“ವಿಜಯದಶಮಿ ಹಾಗೂ ರಫೇಲ್ ಯುದ್ಧ ವಿಮಾನ ಹಸ್ತಾಂತರದ ನಡುವಿನ ಧಾರ್ಮಿಕ ಸಂಬಂಧ ಹೊಂದಾಣಿಕೆಯಾಗುವುದಿಲ್ಲ. ನಾವೆಲ್ಲರೂ ಆಚರಿಸುವ ಹಬ್ಬಕ್ಕೆ ರಫೇಲ್ ಜತೆ ಏಕೆ ನಂಟು ಕಲ್ಪಿಸಬೇಕು?'' ಎಂದು ಸಂದೀಪ್ ದೀಕ್ಷಿತ್ ಪ್ರಶ್ನಿಸಿದ್ದಾರೆ.

``ರಕ್ಷಣಾ ಸಚಿವರ ಬದಲು ರಕ್ಷಣಾ ಪಡೆಗಳು ಈ ಯುದ್ಧ ವಿಮಾನವನ್ನು ಪಡೆಯಬೇಕಿತ್ತು. ಈ ಸರಕಾರದ ಸಮಸ್ಯೆಯೇ ಇದು. ಯಾವುದೇ ಮಹತ್ತರ ಕಾರ್ಯ ಸಾಧಿಸದೇ ಇದ್ದರೂ ಎಲ್ಲದರಲ್ಲಿ ನಾಟಕೀಯತೆ ತರುತ್ತಾರೆ'' ಎಂದು ದೀಕ್ಷಿತ್ ಹೇಳಿದ್ದಾರೆ.

ಇತ್ತೀಚೆಗೆ ಎಎಪಿಯಿಂದ ಕಾಂಗ್ರೆಸ್ ಪಕ್ಷ ಸೆರಿರುವ ಅಲ್ಕಾ ಲಾಂಬ ಅವರು ರಫೇಲ್ ಯುದ್ಧ ವಿಮಾನದ ಚಕ್ರದಡಿಯಲ್ಲಿ ಇರಿಸಲಾಗಿದ್ದ ಎರಡು ನಿಂಬೆ ಹಣ್ಣುಗಳ ಫೋಟೋ ಟ್ವೀಟ್ ಮಾಡಿ “ಫ್ರಾನ್ಸ್ ತಯಾರಿತ ರಫೇಲ್ ಇನ್ನೂ ಭಾರತಕ್ಕೆ ತಲುಪಿಲ್ಲ, ಆದರೆ ಅದಾಗಲೇ ಅದು ಎರಡು ಹಸಿರು ನಿಂಬೆ ಹಣ್ಣುಗಳನ್ನು ತನ್ನ ಚಕ್ರದಡಿ   ಜಜ್ಜಿ ಮೊದಲ ಯಶಸ್ಸು ಸಾಧಿಸಿ ದೇಶವನ್ನು  ಕೆಟ್ಟ ದೃಷ್ಟಿಯಿಂದ ರಕ್ಷಿಸಿದೆ'' ಎಂದು ಮಾರ್ಮಿಕವಾಗಿ ಟ್ವೀಟ್ ಮಾಡಿದ್ದಾರೆ.

“ಮಾಜಿ ರಕ್ಷಣಾ ಸಚಿವ ಎ ಕೆ ಆ್ಯಂಟನಿ ಅಥವಾ ಮಾಜಿ ರಾಷ್ಟ್ರಪತಿ ಡಾ ಎ ಪಿ ಜೆ ಅಬ್ದುಲ್ ಕಲಾಂ ಆಗಿದ್ದರೆ ಅವರು ಬೈಬಲ್ ಅಥವಾ ಕುರ್ ಆನ್ ಕೊಂಡುಹೋಗುತ್ತಿದ್ದರೇ ?'' ಎಂದೂ ಅಲ್ಕಾ ಪ್ರಶ್ನಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X