Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ: ರಾಷ್ಟ್ರಕೂಟರ ತುರುಗೋಳು,...

ಶಿವಮೊಗ್ಗ: ರಾಷ್ಟ್ರಕೂಟರ ತುರುಗೋಳು, ಹೊಯ್ಸಳರ ನಂದಿಪೀಠ ಶಾಸನ ಪತ್ತೆ

ವಾರ್ತಾಭಾರತಿವಾರ್ತಾಭಾರತಿ9 Oct 2019 5:43 PM IST
share

ಶಿವಮೊಗ್ಗ, ಅ. 9: ಭದ್ರಾವತಿ ತಾಲೂಕಿನ ತಡಸ ಗ್ರಾಮದಲ್ಲಿ ಪುರಾತತ್ತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ವತಿಯಿಂದ ಕೈಗೊಂಡ ಕ್ಷೇತ್ರಕಾರ್ಯದಲ್ಲಿ ರಾಷ್ಟ್ರಕೂಟರ ಕಾಲದ ಕ್ರಿ.ಶ.10ನೇ ಶತಮಾನದ ತುರುಗೋಳು ವೀರಗಲ್ಲು ಶಾಸನ ಮತ್ತು ಹೊಯ್ಸಳದ ಕಾಲದ ಕ್ರಿ.ಶ. 13ನೇ ಶತಮಾನದ ನಂದಿಪೀಠ ಶಾಸನ ಪತ್ತೆಯಾಗಿದೆ.

ರಾಷ್ಟ್ರಕೂಟರ ಕಾಲದ ತುರುಗೋಳು ವೀರಗಲ್ಲು ಶಾಸನ: ತಡಸ ಗ್ರಾಮದ ಮಧ್ಯದಲ್ಲಿ ತುರುಗೋಳು ವೀರಗಲ್ಲು ಶಾಸನ ಪತ್ತೆಯಾಗಿದ್ದು, ಇದು ಗ್ರಾನೈಟ್ ಶಿಲೆಯಿಂದ ಕೆತ್ತಲ್ಪಟ್ಟಿದ್ದು, ಒಂದೂವರೆ ಮೀಟರ್ ಉದ್ದ ಹಾಗೂ 65ಸೆಂ.ಮೀ. ಅಗಲವಾಗಿದ್ದು, ಹಳೆಗನ್ನಡ ಶಾಸನವನ್ನು ಹೊಂದಿದೆ. ಈ ಶಿಲ್ಪವು ಮೂರು ಪಟ್ಟಿಕೆಗಳಿಂದ ಕೂಡಿದ್ದು, ವೀರಗಲ್ಲಿನ ಸುತ್ತಲೂ ಶಾಸನವನ್ನು ಕಾಣಬಹುದಾಗಿದೆ.

ಶಿಲ್ಪದ ವಿವರ: ಮೊದಲ ಪಟ್ಟಿಕೆಯಲ್ಲಿ ವೀರನು ಬಿಲ್ಲು-ಬಾಣಗಳನ್ನು ಹಿಡಿದು ಹೋರಾಡುತ್ತಿರುವುದು, ವೀರನ ಸುತ್ತ ಗೋವುಗಳು ನಿಂತಿರುವುದು. ಒಬ್ಬ ಶತ್ರುವು ಕೆಳಗೆ ಬಿದ್ದಿದ್ದು, ಇನ್ನೊಬ್ಬ ಶತ್ರು ವೀರನೊಂದಿಗೆ ಬಿಲ್ಲು ಬಾಣವನ್ನು ಹಿಡಿದು ಹೋರಾಡುತ್ತಿರುವುದು ಕಂಡುರುತ್ತದೆ.
ಎರಡನೇ ಪಟ್ಟಿಕೆಯಲ್ಲಿ ಇಬ್ಬರು ಅಪ್ಸರೆಯರು ವೀರನನ್ನು ತಮ್ಮ ತೋಳುಗಳಲ್ಲಿ ಸ್ವರ್ಗಕ್ಕೆ ಕರೆದುಕೊಂಡು ಹೋಗುತ್ತಿರುವುದು ಕಂಡುಬರುತ್ತದೆ. ಮೂರನೇ ಪಟ್ಟಿಕೆಯಲ್ಲಿ ವೀರನು ಪೀಠದ ಮೇಲೆ ಕುಳಿತಿರುವುದು ಅಂದರೆ ಇಲ್ಲಿ ಅವನು ಸ್ವರ್ಗಸ್ಥನಾಗಿರುವ ಕಲ್ಪನೆ ಕಂಡುಬರುತ್ತದೆ. ಪಕ್ಕದಲ್ಲಿ ಚಾಮರಧಾರಣಿಯರು ಚಾಮರ ಹಿಡಿದು ನಿಂತಿರುವುದು ಕಂಡುಬರುತ್ತದೆ. ರಾಷ್ಟ್ರಕೂಟರ ಕಾಲದಲ್ಲಿ ಪೀಠದ ಮೇಲೆ ದೇವರ ಬದಲಿ ವ್ಯಕ್ತಿಯನ್ನು ಕೂರಿಸುತ್ತಿರುವುದು ವಿಶೇಷವಾಗಿದೆ.

ಶಾಸನದ ಮಹತ್ವ: ಶಾಸನವು ತುಂಬಾ ತೃಟಿತವಾಗಿದ್ದು ಹಳೆಗನ್ನಡದಲ್ಲಿದೆ. ಸ್ವಸ್ತಿ ವರ್ಷ ಕಲಿ ಉಲ್ಲೇಖ ಮಾತ್ರ ಕಂಡುಬರುತ್ತದೆ. ಇದು ಬಹುಶಃ ಗೋವುಗಳನ್ನು ಕದಿಯಲು ಬಂದ ಕಳ್ಳರ ವಿರುದ್ಧ ಹೋರಾಡಿ ವೀರ ಮರಣ ಹೊಂದಿರುವುದರ ಮಾಹಿತಿಯನ್ನು ಒಳಗೊಂಡಿರಬಹುದು ಎನ್ನಬಹುದು.

ನಂದಿ ಪೀಠ ಶಾಸನ: ತಡಸಿ ಗ್ರಾಮದ ವೀರಭದ್ರ ದೇವಾಲಯದ ಮುಂದೇ ನಂದಿ ಪೀಠ ಶಾಸನ ಪತ್ತೆಯಾಗಿದ್ದು, ಇದು ಸಿಸ್ಟ್ ಶಿಲೆಯಿಂದ ಕೂಡಿದ್ದು, 58 ಸೆಂ.ಮೀ. ಅಗಲವಾಗಿದೆ. ಪೀಠದ ಬಲಭಾಗದಲ್ಲಿ ಎರಡು ಸಾಲಿನ ಹಳೆಗನ್ನಡದ ಶಾಸನವಿದ್ದು, ಲಿಪಿಯ ಆಧಾರದ ಮೇಲೆ ಇದು ಕ್ರಿ.ಶ.13ನೇ ಶತಮಾನದ ಹೊಯ್ಸಳರ ಕಾಲದ್ದು ಎನ್ನಬಹುದಾಗಿದೆ.

ಮುಳಗಿರೆಯನು ಜಯಸಂವತ್ಸರದ ಆಶ್ವಿಜ ಸೋಮವಾರದಂದು ಈ ನಂದಿಯ ವಿಗ್ರಹವನ್ನು ಮಾಡಿಸಿ ಪ್ರತಿಷ್ಠಾಪಿಸಿದ್ದಾನೆ ಎಂದು ತಿಳಿದುಬರುತ್ತದೆ. ಈ ಶಾಸನವನ್ನು ಗುರುತಿಸುವಲ್ಲಿ ಪ್ರಾಚ್ಯವಸ್ತು ಇಲಾಖೆಯ ಸಹಾಯಕ ನಿರ್ದೇಶಕ ಆರ್.ಶೇಜೇಶ್ವರ್, ಗ್ರಾಮಸ್ಥರಾದ ಮಹ್ಮದ್ ಜಲಾಲ್, ದೇವೇಂದ್ರಪ್ಪ, ಐತಾಳು ಚೆನ್ನಪ್ಪ, ಶಾಸನ ಓದಲು ಸಹಕರಿಸಿದ ಡಾ.ಜಗದೀಶ, ಕುಮಾರ್ ನವಲಗುಂದ ಇವರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X