Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಟಿವಿ9 ಮಾಜಿ ಸಿಇಓ ಬಿಡುಗಡೆಗೆ ಸಿಪಿಜೆ...

ಟಿವಿ9 ಮಾಜಿ ಸಿಇಓ ಬಿಡುಗಡೆಗೆ ಸಿಪಿಜೆ ಆಗ್ರಹ

ರವಿಪ್ರಕಾಶ್ ಬಂಧನದ ಹಿಂದೆ ತೆಲಂಗಾಣ ಸಿಎಂ ಕೈವಾಡದ ಆರೋಪ

ವಾರ್ತಾಭಾರತಿವಾರ್ತಾಭಾರತಿ9 Oct 2019 8:23 PM IST
share
ಟಿವಿ9 ಮಾಜಿ ಸಿಇಓ ಬಿಡುಗಡೆಗೆ ಸಿಪಿಜೆ ಆಗ್ರಹ

   ಹೊಸದಿಲ್ಲಿ,ಅ.10: ತೆಲಂಗಾಣ ಮೂಲದ ಪತ್ರಕರ್ತ ರವಿಪ್ರಕಾಶ್ ಅವರ ಬಂಧನವನ್ನು ಪತ್ರಿಕಾ ಸ್ವಾತಂತ್ರ್ಯಕ್ಕಾಗಿನ ‘ಪತ್ರಕರ್ತರ ರಕ್ಷಣಾ ಸಮಿತಿ’ (ಸಿಪಿಜೆ) ಬುಧವಾರ ಹಲವಾಗಿ ಖಂಡಿಸಿದೆ ಹಾಗೂ ಅವರನ್ನು ಬಿಡುಗಡೆಗೊಳಿಸುವಂತೆ ತೆಲಂಗಾಣ ಸರಕಾರವನ್ನು ಆಗ್ರಹಿಸಿದೆ.

‘ತೊಲಿವೆಲುಗು ನ್ಯೂಸ್’ ಎಂಬ ಸುದ್ದಿಜಾಲತಾಣದಲ್ಲಿ ರವಿ ಪ್ರಕಾಶ್ ಪ್ರಕಟಿಸಿದ್ದ ಟೀಕಾತ್ಮಕ ವರದಿಗೆ ಪ್ರತೀಕಾರವಾಗಿ ಅವ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ . ತೆಲಂಗಾಣ ಸರಕಾರವು ಕೂಡಲೇ ಅವರನ್ನು ಬಿಡುಗಡೆಗೊಳಿಸಬೇಕಾಗಿದೆ’’ ಎಂದು ಸಿಪಿಜೆ ಏಶ್ಯ ಸಂಸ್ಥೆಯ ಕಾರ್ಯಕ್ರಮ ಸಮನ್ವಯಕಾರರಾದ ಸ್ಟೀವನ್ ಬಟ್ಲರ್ ಆಗ್ರಹಿಸಿದ್ದಾರೆ.

ಟಿವಿ9 ಸುದ್ದಿವಾಹಿನಿಯ ಮಾಜಿ ಮುಖ್ಯ ಕಾರ್ಯನಿರ್ವಹಣಾ ಧಿಕಾರಿಯಾಗಿರುವ ರವಿಪ್ರಕಾಶ್ ಅವರನ್ನು ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಹೈದರಬಾದ್ ಪೊಲೀಸರು ಅಕ್ಟೋಬರ್ 5ರಂದು ಬಂಧಿಸಿದ್ದರು. ರವಿಪ್ರಕಾಶ್ ಅವರು ಟಿವಿ9 ಸುದ್ದಿವಾಹಿನಿಯ ಪ್ರವರ್ತಕ ಸಂಸ್ಥೆ ಅಸೋಸಿಯೇಟೆಡ್ ಬ್ರಾಡ್‌ಕಾಸ್ಟಿಂಗ್ ಕಂಪೆನಿಯ (ಎಬಿಸಿಎಲ್)ನಿಂದ ವಂಚನೆಯ ವಿಧಾನಗಳ ಮೂಲಕ 18 ಕೋಟಿ ರೂ.ಗಳನ್ನು ಹಿಂಪಡೆದುಕೊಂಡಿದ್ದರೆಂದು ಸಂಸ್ಥೆಯ ಹಾಲಿ ನಿರ್ದೇಶಕರಾದ ಜಿ.ರಂಗಾರಾವ್ ಅವರು ಹೈದರಾಬಾದ್‌ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದರು.

  ಈ ವರ್ಷದ ಆರಂಭದಲ್ಲಿ ಎಬಿಸಿಎಲ್ ನಿರ್ಣಯವೊಂದನ್ನು ಅಂಗೀಕರಿಸಿ,ರವಿಪ್ರಕಾಶ್ ಅವರನ್ನು ಬಲವಂತವಾಗಿ ಸಿಇಓ ಹುದ್ದೆಯಿಂದ ಕೆಳಗಿಳಿಸಲಾಗಿತ್ತೆಂದು ನ್ಯೂಸ್ ಮಿನಿಟ್ ವರದಿ ಮಾಡಿದೆ.

    ಆದರೆ ರವಿಪ್ರಕಾಶ್ ಅವರು ತೆಲಂಗಾಣ ಮುಖ್ಯಮಂತ್ರಿಕೆ.ಸಿ.ಚಂದ್ರಶೇಖರ್ ಹಾಗೂ ಉದ್ಯಮಿಯ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ಹೊರಿಸಲಾದ ಎರಡು ಸಂದರ್ಶನಗಳನ್ನು ಪ್ರಸಾರ ಮಾಡದೆ ಇರಲು ನಿರಾಕರಿಸಿದ್ದಕ್ಕಾಗಿ ಪ್ರಕಾಶ್ ಅವರ ಮೇಲೆ ಸುಳ್ಳು ಮೊಕದ್ದಮೆ ಹೊರಿಸಿ ಬಂಧಿಸಲಾಗಿದೆಯೆಂದು ಟಿವಿ9 ಸುದ್ದಿವಾಹಿನಿಯ ವರದಿಗಾರರು ತಿಳಿಸಿದ್ದಾರೆಂದು ಸಿಪಿಜೆ ಆರೋಪಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X