Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಎಚ್ಚರಿಕೆ,ಆನ್‌ಲೈನ್‌ ಬ್ಯಾಂಕ್ ಹೆಸರಲ್ಲಿ...

ಎಚ್ಚರಿಕೆ,ಆನ್‌ಲೈನ್‌ ಬ್ಯಾಂಕ್ ಹೆಸರಲ್ಲಿ ನಡೆಯುತ್ತಿದೆ ಭಾರೀ ವಂಚನೆ

ಈ ಕರೆ ಬಂದರೆ ಎಚ್ಚರ ವಹಿಸಿ

ವಾರ್ತಾಭಾರತಿವಾರ್ತಾಭಾರತಿ9 Oct 2019 9:54 PM IST
share
ಎಚ್ಚರಿಕೆ,ಆನ್‌ಲೈನ್‌ ಬ್ಯಾಂಕ್ ಹೆಸರಲ್ಲಿ ನಡೆಯುತ್ತಿದೆ ಭಾರೀ ವಂಚನೆ

ಕಳೆದ ಕೆಲವು ತಿಂಗಳುಗಳಿಂದ ಆನ್‌ಲೈನ್‌ನಲ್ಲಿ ಇನ್ನೊಂದು ವಂಚನೆ ತಂತ್ರವು ಹರಿದಾಡುತ್ತಿದೆ. ಬ್ಯಾಂಕ್ ಅಧಿಕಾರಿಗಳ ಸೋಗಿನಲ್ಲಿ ವಂಚಕರು ತಾವು ಕುಳಿತಲ್ಲಿಂದಲೇ ಆ್ಯಪ್‌ವೊಂದರ ಮೂಲಕ ಜನರ ಮೊಬೈಲ್ ಫೋನ್ ಸ್ಕ್ರೀನ್‌ಗಳನ್ನು ಪ್ರವೇಶಿಸಿ ಅವರನ್ನು ವಂಚಿಸುತ್ತಿದ್ದಾರೆ. ಅವರು ತಮ್ಮ ಬಲಿಪಶುವಿಗೆ ಕರೆಯನ್ನು ಮಾಡಿ ಆತನ/ಆಕೆಯ ಕೆವೈಸಿಯನ್ನು ದೃಢೀಕರಿಸುವ ಅಗತ್ಯವಿದೆ ಎಂದು ನಂಬಿಸುತ್ತಾರೆ,ಆನ್‌ಲೈನ್‌ನಲ್ಲಿ ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ನೆರವಾಗುವುದಾಗಿ ಹೇಳಿ ಬಳಿಕ ಆತನ/ಆಕೆಯ ಬ್ಯಾಂಕ್ ಖಾತೆಗೆ ಕನ್ನ ಹಾಕುತ್ತಾರೆ.

ಕಳೆದ ಜುಲೈನಲ್ಲಿ ಇಂದೋರಿನ ಸಂದೀಪ್ ಚೌಬೆ ಎನ್ನುವವರಿಗೆ ಕರೆಯೊಂದು ಬಂದಿದ್ದು,ಕರೆ ಮಾಡಿದ್ದ ವ್ಯಕ್ತಿ ತಾನು ಆನ್‌ಲೈನ್ ಫುಡ್ ಆರ್ಡರಿಂಗ್ ಕಂಪನಿಯೊಂದರ ಕಸ್ಟಮರ್ ಕೇರ್ ಎಕ್ಸಿಕ್ಯೂಟಿವ್ ಎಂದು ಪರಿಚಯಿಸಿಕೊಂಡಿದ್ದ. ಇಲ್ಲಿ ವಂಚನೆಗೆ ಸಿಲುಕಿದ ಚೌಬೆ 2.28ಲ.ರೂಗಳನ್ನು ಕಳೆದುಕೊಂಡಿದ್ದರೆ,ಮುಂಬೈನ ಧನಂಜಯ ಜೋಶಿ ಎನ್ನುವವರು ತನ್ನ ಕೆವೈಸಿಯನ್ನು ಪೂರ್ಣಗೊಳಿಸಲು ವಂಚಕ ತಿಳಿಸಿದಂತೆ ಆ್ಯಪ್‌ವೊಂದನ್ನು ಡೌನ್‌ಲೋಡ್‌ ಮಾಡಿಕೊಂಡು 1.6 ಲ.ರೂ.ಗಳಿಗೆ ಪಂಗನಾಮ ಹಾಕಿಸಿಕೊಂಡಿದ್ದಾರೆ. ಪೊಲೀಸರು ಇವೆರಡೂ ಪ್ರಕರಣಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

ವಂಚಕರ ಕಾರ್ಯವಿಧಾನ ಇಲ್ಲಿದೆ,ಇದು ನಿಮಗೂ ತಿಳಿದಿರಲಿ

►ನಿಮ್ಮ ವ್ಯಾಲೆಟ್ ಅಥವಾ ಬ್ಯಾಂಕ್ ಕೆವೈಸಿ ಸಿಂಧುತ್ವವನ್ನು ಕಳೆದುಕೊಂಡಿದೆ ಎಂದು ತಿಳಿಸುವ ಕರೆಯೊಂದು ನಿಮಗೆ ಬರುತ್ತದೆ.

►ನಿಮ್ಮ ಖಾತೆಯನ್ನು ಪುನಃ ಕ್ರಿಯಾಶೀಲವನ್ನಾಗಿಸಲು ಆನ್‌ಲೈನ್‌ನಲ್ಲಿಯೇ ಕೆವೈಸಿಯನ್ನು ದೃಢೀಕರಿಸಬಹುದೆಂದು ವಂಚಕ ನಿಮಗೆ ತಿಳಿಸುತ್ತಾನೆ.

►ನಿಮ್ಮ ಸೂಕ್ತ ಮಾರ್ಗದರ್ಶನಕ್ಕಾಗಿ ಆ್ಯಪ್‌ವೊಂದನ್ನು ಡೌನ್‌ಲೋಡ್ ಮಾಡಿಕೊಳ್ಳುವಂತೆ ನಿಮಗೆ ಸೂಚಿಸಲಾಗುತ್ತದೆ.

►ಈ ಆ್ಯಪ್‌ನ್ನು ನೀವು ಬಳಸಿದಾಗ ನಿಮಗೆ ಕರೆ ಮಾಡಿದ ವ್ಯಕ್ತಿ ಕುಳಿತಲ್ಲಿಂದಲೇ ನಿಮ್ಮ ಫೋನಿನ ಸ್ಕ್ರೀನ್‌ನ್ನು ವೀಕ್ಷಿಸಲು ಸಾಧ್ಯವಾಗುತ್ತದೆ.

► ಸಣ್ಣ ಸಾಂಕೇತಿಕ ಮೊತ್ತವೊಂದನ್ನು ನಿಮ್ಮ ವ್ಯಾಲೆಟ್‌ಗೆ ವರ್ಗಾಯಿಸುವಂತೆ ಆತ ನಿಮ್ಮನ್ನು ಕೇಳಿಕೊಳ್ಳುತ್ತಾನೆ.

►ನೀವು ಹಾಗೆ ಮಾಡಿದಾಗ ನಿಮ್ಮ ಪಾಸ್‌ವರ್ಡ್ ಮತ್ತು ಇತರ ವಿವರಗಳನ್ನು ಆತ ನೋಡುತ್ತಾನೆ.

►ಅದನ್ನಾತ ಏಕಕಾಲದಲ್ಲಿ ಬಳಸಿಕೊಂಡು ನಿಮ್ಮ ಬ್ಯಾಂಕ್‌ ಖಾತೆಯಿಂದ ಅಷ್ಟೂ ಹಣವನ್ನು ಎಗರಿಸುತ್ತಾನೆ.

►ನೀವು ಎಲ್ಲ ವರ್ಗಾವಣೆ ಕೋರಿಕೆಗಳಿಗೆ ಒಟಿಪಿ (ಒಂದು ಬಾರಿಯ ಪಾಸ್‌ವರ್ಡ್)ಗಳನ್ನು ಪಡೆದುಕೊಳ್ಳುತ್ತಿರುವಾಗ ವಂಚಕನೂ ಆ್ಯಪ್ ಮೂಲಕ ಅವುಗಳನ್ನು ನೋಡುತ್ತಿರುತ್ತಾನೆ.

►ಕೆಲವೇ ಕ್ಷಣಗಳಲ್ಲಿ ನಿಮ್ಮ ಬ್ಯಾಂಕ್ ಖಾತೆಯನ್ನು ವಂಚಕ ಸ್ವಚ್ಛಗೊಳಿಸಿರುತ್ತಾನೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X