Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಗುಡೆನಫ್, ವಿಟಿಂಗ್‌ಹ್ಯಾಮ್, ಯೋಷಿನೊರಿಗೆ...

ಗುಡೆನಫ್, ವಿಟಿಂಗ್‌ಹ್ಯಾಮ್, ಯೋಷಿನೊರಿಗೆ ರಸಾಯನಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ9 Oct 2019 10:00 PM IST
share
ಗುಡೆನಫ್, ವಿಟಿಂಗ್‌ಹ್ಯಾಮ್, ಯೋಷಿನೊರಿಗೆ ರಸಾಯನಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿ

ಸ್ಟಾಕ್‌ಹೋಮ್,ಅ.9: ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್ ಲೀಥಿಯಂ-ಅಯಾನ್ ಬ್ಯಾಟರಿಯನ್ನು ಅಭಿವೃದ್ಧಿಗೊಳಿಸಿದ್ದಕ್ಕಾಗಿ ಜಾನ್ ಬಿ.ಗುಡೆನಫ್,ಎಂ.ಸ್ಟಾನ್ಲಿ ವಿಟಿಂಗ್‌ಹ್ಯಾಮ್ ಮತ್ತು ಅಕಿರಾ ಯೋಷಿನೊ ಅವರಿಗೆ ರಸಾಯನ ಶಾಸ್ತ್ರದಲ್ಲಿ 2019ನೇ ಸಾಲಿನ ನೊಬೆಲ್ ಪ್ರಶಸ್ತಿಗಳನ್ನು ಬುಧವಾರ ಘೋಷಿಸಿದೆ.

ಇದರೊಂದಿಗೆ ಗುಡೆನಫ್ (97) ಅತ್ಯಂತ ಹಿರಿಯ ನೊಬೆಲ್ ಪ್ರಶಸ್ತಿ ಪುರಸ್ಕೃತರೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

1970ರ ದಶಕದ ಆದಿಯಲ್ಲಿ ವಿಟಿಂಗ್‌ ಹ್ಯಾಮ್ ಅವರು ಮೊದಲ ಬಾರಿಗೆ ಕಾರ್ಯಸಾಧ್ಯ ಲೀಥಿಯಂ ಬ್ಯಾಟರಿಯನ್ನು ಅಭಿವೃದ್ಧಿಗೊಳಿಸಿದ್ದರೆ,ಗುಡೆನಫ್ ಅವರು ಲೀಥಿಯಂ ಬ್ಯಾಟರಿಯ ಸಾಮರ್ಥ್ಯವನ್ನು ದುಪ್ಪಟ್ಟುಗೊಳಿಸುವ ಮೂಲಕ ಹೆಚ್ಚು ಶಕ್ತಿಶಾಲಿ ಮತ್ತು ಉಪಯೋಗಿ ಬ್ಯಾಟರಿಗಾಗಿ ಸೂಕ್ತ ಸ್ಥಿತಿಯನ್ನು ಸೃಷ್ಟಿಸಿದ್ದರು. ಯೋಷಿನೊ ಅವರು ಬ್ಯಾಟರಿಯಲ್ಲಿನ ಶುದ್ಧ ಲೀಥಿಯಂ ಅನ್ನು ನಿವಾರಿಸುವಲ್ಲಿ ಯಶಸ್ವಿಯಾಗಿದ್ದರು ಎಂದು ಅಕಾಡೆಮಿಯು ತಿಳಿಸಿದೆ.

ವಿಟಿಂಗ್‌ಹ್ಯಾಮ್ ಅವರು ಅಮೆರಿಕದ ನ್ಯೂಯಾರ್ಕ್‌ನ ಬಿಂಘ್ಯಾಮ್ಟನ್ ಯುನಿವರ್ಸಿಟಿ, ಗುಡೆನಫ್ ಅವರು ಆಸ್ಟಿನ್‌ನ ಯುನಿವರ್ಸಿಟಿ ಆಫ್ ಟೆಕ್ಸಾಸ್ ಮತ್ತು ಯೋಷಿನೊ ಅವರು ಜಪಾನಿನ ಟೋಕಿಯೊದ ಅಸಾಹಿ ಕಾಸೀ ಕಾರ್ಪೊರೇಷನ್ ಮತ್ತು ನಗೋಯಾದ ಮೀಜೊ ವಿವಿಯೊಂದಿಗೆ ಗುರುತಿಸಿಕೊಂಡಿದ್ದಾರೆ.

ಇದರೊಂದಿಗೆ 1901ರಿಂದ 184 ವಿಜ್ಞಾನಿಗಳು ಮತ್ತು ಸಂಶೋಧಕರಿಗೆ ರಸಾಯನ ಶಾಸ್ತ್ರದಲ್ಲಿ 111 ನೋಬೆಲ್ ಪ್ರಶಸ್ತಿಗಳನ್ನು ನೀಡಿದಂತಾಗಿದೆ. ಮೇರಿ ಕ್ಯೂರಿ ಅವರು ರಸಾಯನ ಶಾಸ್ತ್ರದಲ್ಲಿ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಎರಡು ನೋಬೆಲ್ ಪ್ರಶಸ್ತಿಗಳಿಗೆ ಭಾಜನರಾದ ಮೊದಲ ವಿಜ್ಞಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಅವರು ಮೊದಲು ವಿಕಿರಣ ಕ್ಷೇತ್ರದಲ್ಲಿ ತನ್ನ ಕಾರ್ಯಕ್ಕಾಗಿ ಭೌತಶಾಸ್ತ್ರದಲ್ಲಿ ನೊಬೆಲ್ ಪುರಸ್ಕಾರವನ್ನು ಪಡೆದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X