Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ತೆರಿಗೆ ಮೂಲಕ ಭಾರತ ನಮ್ಮನ್ನು...

ತೆರಿಗೆ ಮೂಲಕ ಭಾರತ ನಮ್ಮನ್ನು ಹೆದರಿಸಬಾರದು: ರಫೇಲ್ ತಯಾರಕ ಸಂಸ್ಥೆ

ವಾರ್ತಾಭಾರತಿವಾರ್ತಾಭಾರತಿ9 Oct 2019 10:36 PM IST
share
ತೆರಿಗೆ ಮೂಲಕ ಭಾರತ ನಮ್ಮನ್ನು ಹೆದರಿಸಬಾರದು: ರಫೇಲ್ ತಯಾರಕ ಸಂಸ್ಥೆ

ಪ್ಯಾರಿಸ್, ಅ. 9: ಭಾರತವು ಆಹ್ಲಾದಕರ ವ್ಯಾಪಾರ ವಾತಾವರಣವನ್ನು ಒದಗಿಸಬೇಕು ಹಾಗೂ ತನ್ನ ತೆರಿಗೆ ಮತ್ತು ಸುಂಕ ನೀತಿಗಳಿಂದ ‘‘ನಮ್ಮನ್ನು ಹೆದರಿಸಬಾರದು’’ ಎಂದು ರಫೇಲ್ ಯುದ್ಧ ವಿಮಾನಗಳ ಇಂಜಿನ್ ತಯಾರಿಕಾ ಸಂಸ್ಥೆ ಫ್ರಾನ್ಸ್‌ನ ಸಫ್ರಾನ್ ಏರ್‌ಕ್ರಾಫ್ಟ್ ಇಂಜಿನ್ಸ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಒಲಿವಿಯರ್ ಆ್ಯಂಡ್ರೀಸ್ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್‌ಗೆ ಹೇಳಿದ್ದಾರೆ.

ಭಾರತದಲ್ಲಿ ಸುಮಾರು 150 ಮಿಲಿಯ ಡಾಲರ್ (ಸುಮಾರು 1066 ಕೋಟಿ ರೂಪಾಯಿ) ಹೂಡಿಕೆ ಮಾಡಲು ಕಂಪೆನಿಯು ಮುಂದಾಗಿದೆ ಎಂದು ಘೋಷಿಸಿದ ವೇಳೆ ಅವರು ಈ ಮನವಿ ಮಾಡಿದ್ದಾರೆ.

 ಭಾರತಕ್ಕೆ ಪೂರೈಸಲಾಗುವ ರಫೇಲ್ ಯುದ್ಧ ವಿಮಾನಗಳಲ್ಲಿ ಅಳವಡಿಸಲಾಗುವ ಅತ್ಯಾಧುನಿಕ ಎಂ88 ಇಂಜಿನ್‌ಗಳನ್ನು ಫ್ರಾನ್ಸ್‌ನ ಈ ಬಹುರಾಷ್ಟ್ರೀಯ ಕಂಪೆನಿ ನಿರ್ಮಿಸುತ್ತದೆ.

ಫ್ರಾನ್ಸ್ ರಾಜಧಾನಿ ಪ್ಯಾರಿಸ್‌ಗೆ ಸಮೀಪದಲ್ಲಿರುವ ಕಂಪೆನಿಯ ನಿರ್ಮಾಣ ಘಟಕಕ್ಕೆ ರಾಜ್‌ನಾಥ್ ಸಿಂಗ್ ನೀಡಿದ ಭೇಟಿಯ ವೇಳೆ, ಅವರಿಗೆ ಸಿಇಒ ಒಲಿವಿಯರ್ ಆ್ಯಂಡ್ರೀಸ್ ಕಂಪೆನಿಯ ಪರಿಚಯ ಮಾಡಿಕೊಟ್ಟರು.

ಈ ಸಂದರ್ಭದಲ್ಲಿ, ತರಬೇತಿ ಮತ್ತು ನಿರ್ವಹಣೆಗಾಗಿ ಭಾರತದಲ್ಲಿ ಸುಮಾರು 150 ಮಿಲಿಯ ಡಾಲರ್ ಹೂಡಿಕೆ ಮಾಡುವ ಕಂಪೆನಿಯ ಯೋಜನೆಯನ್ನು ಘೋಷಿಸಿದರು.

ಆದರೆ, ತೆರಿಗೆ ವ್ಯವಸ್ಥೆಯಲ್ಲಿ ಹೆಚ್ಚಿನ ಬೆಂಬಲ ನೀಡುವಂತೆ ಅವರು ಭಾರತಕ್ಕೆ ಕರೆ ನೀಡಿದರು.

‘‘ಭಾರತವು ವಿಮಾನಯಾನ ಕ್ಷೇತ್ರದ ಮೂರನೇ ಅತಿ ದೊಡ್ಡ ವಾಣಿಜ್ಯ ಮಾರುಕಟ್ಟೆಯಾಗಲು ತಯಾರಾಗಿದೆ ಹಾಗೂ ಗ್ರಾಹಕರಿಗೆ ಸೇವೆ ನೀಡುವುದಕ್ಕಾಗಿ ಭಾರತದಲ್ಲಿ ಸದೃಢ ನಿರ್ವಹಣೆ ಮತ್ತು ದುರಸ್ತಿ ನೆಲೆಯೊಂದನ್ನು ನಿರ್ಮಿಸಲು ನಾವು ಉತ್ಸುಕರಾಗಿದ್ದೇವೆ’’ ಎಂದು ಆ್ಯಂಡ್ರೀಸ್ ಹೇಳಿದರು.

‘‘ಆದರೆ, ಭಾರತದ ತೆರಿಗೆ ಮತ್ತು ಸುಂಕ ವ್ಯವಸ್ಥೆಗಳು ನಮ್ಮನ್ನು ಹೆದರಿಸುವುದಿಲ್ಲ ಎನ್ನುವುದನ್ನು ನಾವು ಮೊದಲು ಖಾತರಿಪಡಿಸಬೇಕಾಗಿದೆ’’ ಎಂದರು.

ರಾಜ್‌ನಾಥ್ ಭರವಸೆ

ಸಫ್ರಾನ್ ಏರ್‌ಕ್ರಾಫ್ಟ್ ಇಂಜಿನ್ಸ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವ್ಯಕ್ತಪಡಿಸಿದ ಕಳವಳಕ್ಕೆ ಪ್ರತಿಕ್ರಿಯಿಸಿದ ರಾಜ್‌ನಾಥ್ ಸಿಂಗ್, ‘ಮೇಕ್ ಇನ್ ಇಂಡಿಯ’ ಯೋಜನೆಯಡಿಯಲ್ಲಿ ಹೂಡಲಾಗುವ ಹೂಡಿಕೆಗಳಿಗೆ ‘‘ಸರಿಯಾದ ವಾತಾವರಣ’’ವನ್ನು ಒದಗಿಸಲು ಭಾರತ ಬದ್ಧವಾಗಿದೆ ಎಂದು ಹೇಳಿದರು.

ಮುಂದಿನ ವರ್ಷದ ಫೆಬ್ರವರಿಯಲ್ಲಿ ಲಕ್ನೋದಲ್ಲಿ ನಡೆಯಲಿರುವ ‘ಡೆಫ್‌ಎಕ್ಸ್‌ಪೋ’ದಲ್ಲಿ ಭಾಗವಹಿಸುವಂತೆಯೂ ಸಫ್ರಾನ್‌ಗೆ ಸಿಂಗ್ ಆಹ್ವಾನ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X