Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ನೇಪಾಳದ ವಿರುದ್ಧ ಭಾರತಕ್ಕೆ 4-1 ಭರ್ಜರಿ...

ನೇಪಾಳದ ವಿರುದ್ಧ ಭಾರತಕ್ಕೆ 4-1 ಭರ್ಜರಿ ಜಯ

‘ಸ್ಯಾಫ್’ ಮಹಿಳಾ ಫುಟ್ಬಾಲ್ ಟೂರ್ನಿ

ವಾರ್ತಾಭಾರತಿವಾರ್ತಾಭಾರತಿ9 Oct 2019 11:56 PM IST
share
ನೇಪಾಳದ ವಿರುದ್ಧ ಭಾರತಕ್ಕೆ 4-1 ಭರ್ಜರಿ ಜಯ

ಥಿಂಪು, ಅ.9: ಭೂತಾನ್‌ನ ಥಿಂಪು ನಗರದಲ್ಲಿ ಆರಂಭವಾಗಿರುವ 15ರ ಕೆಳಹರೆಯದ ಮಹಿಳೆಯರ ದಕ್ಷಿಣ ಏಶ್ಯಾ ಫುಟ್ಬಾಲ್ ಚಾಂಪಿಯನ್‌ಶಿಪ್(ಸ್ಯಾಫ್)ನ ಆರಂಭಿಕ ಪಂದ್ಯದಲ್ಲಿ ಬುಧವಾರ ಭಾರತದ ಮಹಿಳೆಯರು ನೇಪಾಳದ ವಿರುದ್ಧ 4-1 ಗೋಲುಗಳ ಭರ್ಜರಿ ಗೆಲುವು ಸಾಧಿಸಿದ್ದಾರೆ. ಭಾರತದ ಪರ ಲಿಂಡಾ ಕೋಮ್ ಸೆರ್ತೊ (38 ಮತ್ತು 56ನೇ ನಿಮಿಷ) ಅವಳಿ ಗೋಲು, ಸುಮತಿ ಕುಮಾರಿ (7ನೇ ನಿಮಿಷ) ಮತ್ತು ಪ್ರಿಯಾಂಕಾ ಸುಜೇಷ್ (66ನೇ ನಿಮಿಷ)ತಲಾ1 ಗೋಲು ದಾಖಲಿಸಿದರು. ನೇಪಾಳದ ಮನ್‌ಮಾಯಾ ದಮಾಯಿ 62ನೇ ನಿಮಿಷದಲ್ಲಿ ಏಕೈಕ ಗೋಲು ದಾಖಲಿಸಿ ಸೋಲಿನ ಅಂತರವನ್ನು ಕುಗ್ಗಿಸಿದರು. ಪಂದ್ಯದ ಆರನೇ ನಿಮಿಷದಲ್ಲಿ ದೊರೆತ ಅವಕಾಶವನ್ನು ಬಳಸಿಕೊಂಡ ಸುಮತಿ ಕುಮಾರಿ ನೇಪಾಳದ ರಕ್ಷಣಾ ಪಂಕ್ತಿಯನ್ನು ವಂಚಿಸಿ ಗೋಲು ದಾಖಲಿಸಲು ಸಫಲರಾದರು. 38ನೇ ನಿಮಿಷದಲ್ಲಿ ಮತ್ತೆ ನೇಪಾಳದ ರಕ್ಷಣಾ ಪಂಕ್ತಿಯನ್ನು ದಾಟಿ ಮುನ್ನಡೆದ ಸುಮತಿ ಕುಮಾರಿ ಈ ಬಾರಿ ಲಿಂಡಾಗೆ ಪಾಸ್ ನೀಡಿದ್ದು ಲಿಂಡಾ ಗುರಿ ತಪ್ಪಲಿಲ್ಲ. ಪ್ರಥಮಾರ್ಧದಲ್ಲಿ ಭಾರತ 2-0 ಗೋಲುಗಳ ಮುನ್ನಡೆ ಪಡೆಯಿತು.

ದ್ವಿತೀಯಾರ್ಧದಲ್ಲಿ ಮತ್ತೆ ಸುಮತಿಯಿಂದ ದೊರೆತ ಉತ್ತಮ ಪಾಸ್ ಅನ್ನು ಸದುಪಯೋಗಪಡಿಸಿಕೊಂಡ ಲಿಂಡಾ ನೇಪಾಳದ ಗೋಲ್‌ಕೀಪರ್ ಅನ್ನು ವಂಚಿಸಿ ಗುರಿ ಮುಟ್ಟಿಸಿದರು. ಇದಾದ ಕೆಲವೇ ನಿಮಿಷಗಳಲ್ಲಿ ಮನ್‌ಮಾಯಾ ದಮಾಯಿ ನೇಪಾಳದ ಪರ ಗೋಲು ದಾಖಲಿಸಿದರು. ಬದಲಿ ಆಟಗಾರ್ತಿಯಾಗಿ ಕಣಕ್ಕಿಳಿದ ಪ್ರಿಯಾಂಕಾ 66ನೇ ನಿಮಿಷದಲ್ಲಿ ಭಾರತದ ಪರ ನಾಲ್ಕನೇ ಗೋಲು ದಾಖಲಿಸಿದರು. ‘‘ಪ್ರಥಮ ಪಂದ್ಯ ಯಾವಾಗಲೂ ಕಠಿಣವಾಗಿರುತ್ತದೆ. 4-1 ಅಂತರದ ಗೆಲುವು ಉತ್ತಮ ಫಲಿತಾಂಶವಾಗಿದ್ದರೂ ನಾವು ಇನ್ನಷ್ಟು ಉತ್ತಮವಾಗಿ ಆಡಬಹುದಿತ್ತು’’ ಎಂದು ಪಂದ್ಯದ ಬಳಿಕ ಭಾರತದ ಪ್ರಧಾನ ಕೋಚ್ ಅಲೆಕ್ಸ್ ಆ್ಯಂಬ್ರೋಸ್ ಹೇಳಿದರು. ಮುಂದಿನ ಪಂದ್ಯದಲ್ಲಿ ಶುಕ್ರವಾರ ಭಾರತ ಆತಿಥೇಯ ಭೂತಾನ್ ಎದುರು ಸೆಣಸಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X