Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮೊದಲ ಏಕದಿನ: ಭಾರತಕ್ಕೆ 8 ವಿಕೆಟ್ ಜಯ

ಮೊದಲ ಏಕದಿನ: ಭಾರತಕ್ಕೆ 8 ವಿಕೆಟ್ ಜಯ

ಚೊಚ್ಚಲ ಪಂದ್ಯದಲ್ಲಿ ಮಿಂಚಿದ ಪ್ರಿಯಾ ಪೂನಿಯಾ

ವಾರ್ತಾಭಾರತಿವಾರ್ತಾಭಾರತಿ9 Oct 2019 11:58 PM IST
share
ಮೊದಲ ಏಕದಿನ: ಭಾರತಕ್ಕೆ 8 ವಿಕೆಟ್ ಜಯ

ವಡೋದರ, ಅ.9: ಗಾಯಗೊಂಡಿರುವ ಅನುಭವಿ ಆಟಗಾರ್ತಿ ಸ್ಮತಿ ಮಂಧಾನ ಅನುಪಸ್ಥಿತಿಯಲ್ಲಿ ಮೊದಲ ಬಾರಿ ಆಡುವ ಅವಕಾಶ ಪಡೆದ ಪ್ರಿಯಾ ಪೂನಿಯಾ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನದ ಮೂಲಕ ಭಾರತ ಮಹಿಳಾ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಬುಧವಾರ ನಡೆದ ಮೊದಲ ಏಕದಿನ ಪಂದ್ಯದಲ್ಲಿ 8 ವಿಕೆಟ್‌ಗಳ ಅಂತರದ ಜಯ ದಾಖಲಿಸಲು ನೆರವಾಗಿದ್ದಾರೆ. ಈ ಮೂಲಕ ತನ್ನ ಚೊಚ್ಚಲ ಪಂದ್ಯದಲ್ಲಿ ಮಿಂಚುಹರಿಸಿದ್ದಾರೆ.

 ಟಾಸ್ ಜಯಿಸಿ ಮೊದಲು ಬ್ಯಾಟಿಂಗ್ ಆಯ್ದುಕೊಂಡ ದಕ್ಷಿಣ ಆಫ್ರಿಕಾ ತಂಡ 45.1 ಓವರ್‌ಗಳಲ್ಲಿ ಕೇವಲ 164 ರನ್ ಗಳಿಸಿ ಆಲೌಟಾಯಿತು. ಆಲ್‌ರೌಂಡ್ ಪ್ರದರ್ಶನ ನೀಡಿದ ಭಾರತದ ಜುಲನ್ ಗೋಸ್ವಾಮಿ(3-33), ಶಿಖಾ ಪಾಂಡೆ(2-38), ಎಕ್ತಾ ಬಿಶ್ತ್(2-8) ಹಾಗೂ ಪೂನಂ ಯಾದವ್(2-33)ಸಂಘಟಿತ ಬೌಲಿಂಗ್ ದಾಳಿ ನಡೆಸಿ ಹರಿಣಪಡೆಯನ್ನು ಕಾಡಿದರು.

ಆರಂಭಿಕ ಆಟಗಾರ್ತಿಯರಾದ ಪೂನಿಯಾ(ಔಟಾಗದೆ 75, 124 ಎಸೆತ)ಹಾಗೂ ಜೆಮಿಮ್ಹಾ ರೋಡ್ರಿಗಸ್(55 ರನ್, 65 ಎಸೆತ)ಭಾರತದ ಭರ್ಜರಿ ಗೆಲುವಿಗೆ ಭದ್ರ ಬುನಾದಿ ಹಾಕಿಕೊಟ್ಟರು. ಈ ತನಕ ಮೂರು ಟ್ವೆಂಟಿ-20 ಅಂತರ್‌ರಾಷ್ಟ್ರೀಯ ಪಂದ್ಯವನ್ನಾಡಿದ್ದ ಪೂನಿಯಾ ಸ್ಟಾರ್ ಆಟಗಾರ್ತಿ ಮಂಧಾನ ಅನುಪಸ್ಥಿತಿಯಲ್ಲಿ ಚೊಚ್ಚಲ ಏಕದಿನ ಪಂದ್ಯ ಆಡುವ ಅವಕಾಶ ಗಿಟ್ಟಿಸಿಕೊಂಡರು. ತನಗೆ ಲಭಿಸಿದ ಅವಕಾಶವನ್ನು ಎರಡೂ ಕೈಗಳಿಂದ ಬಾಚಿಕೊಂಡ ಜೈಪುರದ 23ರ ಹರೆಯದ ಮಂಧಾನ 8 ಬೌಂಡರಿಗಳನ್ನು ಬಾರಿಸಿದರು.

ಐದು ಪಂದ್ಯಗಳ ಟ್ವೆಂಟಿ-20 ಸರಣಿಯಲ್ಲಿ ರನ್ ಬರ ಎದುರಿಸಿದ್ದ ರೋಡ್ರಿಗಸ್ ಮೊದಲ ವಿಕೆಟ್ ಜೊತೆಯಾಟದಲ್ಲಿ ಪೂನಿಯಾ ಜೊತೆ 83 ರನ್ ಸೇರಿಸಿದರು. 19ರ ಹರೆಯದ ಪ್ರತಿಭಾವಂತ ಆಟಗಾರ್ತಿ ಏಳು ಬೌಂಡರಿಗಳ ನೆರವಿನಿಂದ ಎರಡನೇ ಅರ್ಧಶತಕ ದಾಖಲಿಸಿದರು.

ನಾಯಕಿ ಮಿಥಾಲಿ ರಾಜ್ ಮಾರ್ಚ್ ಬಳಿಕ ಮೊದಲ ಬಾರಿ ಭಾರತದ ಪರ ಮೊದಲ ಪಂದ್ಯ ಆಡಿದರು. 1999ರ ಜೂನ್‌ನಲ್ಲಿ ಅಂತರ್‌ರಾಷ್ಟ್ರೀಯ ಕ್ರಿಕೆಟ್‌ಗೆ ಕಾಲಿಟ್ಟಿರುವ ಮಿಥಾಲಿ ಕಳೆದ 20 ವರ್ಷಗಳಿಂದ ಕ್ರಿಕೆಟ್‌ನಲ್ಲಿ ಸಕ್ರಿಯವಾಗಿರುವ ಮೊತ್ತ ಮೊದಲ ಮಹಿಳಾ ಆಟಗಾರ್ತಿಯಾಗಿದ್ದಾರೆ. ರಾಜ್ ಕಳೆದ ತಿಂಗಳು ಟಿ-20 ಪಂದ್ಯದಿಂದ ನಿವೃತ್ತಿಯಾಗಿದ್ದರು.

ಹಿರಿಯ ವೇಗದ ಬೌಲರ್ ದಿನದ ಮೊದಲ ಎಸೆತದಲ್ಲಿ ಆಫ್ರಿಕಾಕ್ಕೆ ಆಘಾತ ನೀಡಿದರು. ಆರಂಭಿಕ ಆಟಗಾರ್ತಿ ಲೌರಾ ವೋಲ್ವಾರ್ಟ್(39) ಹಾಗೂ ತ್ರಿಶಾ ಚೆಟ್ಟಿ(14)ಇನಿಂಗ್ಸ್ ಆಧರಿಸಲು ಯತ್ನಿಸಿದರು. ದಕ್ಷಿಣ ಆಫ್ರಿಕಾ ಒಂದು ಹಂತದಲ್ಲಿ 89 ರನ್‌ಗೆ 3 ವಿಕೆಟ್‌ಗಳನ್ನು ಕಳೆದುಕೊಂಡಿದ್ದ ಭಾರತ 115 ರನ್‌ಗೆ ಏಳು ವಿಕೆಟ್‌ಗಳನ್ನು ಕಳೆದುಕೊಂಡು ಕುಸಿತ ಕಂಡಿತು. ಅಂತಿಮವಾಗಿ 164 ರನ್ ಗಳಿಸಲು ಶಕ್ತವಾಯಿತು. ಮರಿಝಾನ್ ಕಾಪ್(54, 64 ಎಸೆತ)ದಕ್ಷಿಣ ಆಫ್ರಿಕಾ ಪರ ಗರಿಷ್ಠ ಸ್ಕೋರ್ ಗಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X