Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಮಾಲ್‌ ನಲ್ಲಿ ವಿದ್ಯಾರ್ಥಿನಿ...

ಮಂಗಳೂರು: ಮಾಲ್‌ ನಲ್ಲಿ ವಿದ್ಯಾರ್ಥಿನಿ ಜೊತೆಗಿದ್ದ ಯುವಕನಿಗೆ ಹಲ್ಲೆ ಪ್ರಕರಣ; ಐವರು ಆರೋಪಿಗಳಿಗೆ ಶಿಕ್ಷೆ

ವಾರ್ತಾಭಾರತಿವಾರ್ತಾಭಾರತಿ11 Oct 2019 7:55 PM IST
share
ಮಂಗಳೂರು: ಮಾಲ್‌ ನಲ್ಲಿ ವಿದ್ಯಾರ್ಥಿನಿ ಜೊತೆಗಿದ್ದ ಯುವಕನಿಗೆ ಹಲ್ಲೆ ಪ್ರಕರಣ; ಐವರು ಆರೋಪಿಗಳಿಗೆ ಶಿಕ್ಷೆ

ಮಂಗಳೂರು, ಅ.11: ಉಡುಪಿಯ ಕಾಲೇಜು ವಿದ್ಯಾರ್ಥಿನಿ ಜತೆ ನಗರದ ಮಾಲ್‌ಗೆ ತಿರುಗಾಡಲು ಬಂದ ಯುವಕನಿಗೆ ಹಲ್ಲೆ ನಡೆಸಿದ ಪ್ರಕರಣದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಐವರು ಆರೋಪಿಗಳಿಗೆ ಶಿಕ್ಷೆ ವಿಧಿಸಿ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಕಾವೂರು ಜ್ಯೋತಿನಗರ ನಿವಾಸಿ ಚೇತನ್ (23), ಶೃಂಗೇರಿ ನೆಲ್ಲೂರು ನಿವಾಸಿ ರಕ್ಷಿತ್ ಕುಮಾರ್ (21), ಕಂದುಕ ನಿವಾಸಿ ಅಶ್ವಿನ್‌ರಾಜ್ (21), ಕಾರ್ಕಳ ಇನ್ನಾ ನಿವಾಸಿ ಸುಶಾಂತ್ ಶೆಟ್ಟಿ (23), ಕಾರ್‌ಸ್ಟ್ರೀಟ್ ನಿವಾಸಿ ಶರತ್ ಕುಮಾರ್ (28) ಶಿಕ್ಷೆಗೊಳಗಾದ ಆರೋಪಿಗಳು.

ಆರೋಪಿಗಳಿಗೆ ಐಪಿಸಿ 143 (ಅಕ್ರಮ ಕೂಟ)ರಡಿ 3ಸಾವಿರ ರೂ., ಐಪಿಸಿ 147(ಅಕ್ರಮ ಕೂಟದ ಹಲ್ಲೆ) 3ಸಾವಿರ ರೂ., ಐಪಿಸಿ 148ರಡಿ (ಮಾರಣಾಂತಿಕ ಆಯಧ ಬಳಕೆ) 3ಸಾವಿರ ರೂ., ಐಪಿಸಿ 342(ಅಕ್ರಮ ಬಂಧನ) 1ಸಾವಿರ ರೂ., ಐಪಿಸಿ 323ರಡಿ 1ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಪ್ರತಿಯೊಬ್ಬ ಅಪರಾಧಿಯು 21 ಸಾವಿರ ರೂ. ದಂಡ ಕಟ್ಟಬೇಕು, ತಪ್ಪಿದಲ್ಲಿ 8 ತಿಂಗಳ ಸಜೆ ಅನುಭವಿಸಬೇಕಾಗಿದೆ. ದಂಡದ ಮೊತ್ತದಲ್ಲಿ 50 ಸಾವಿರ ರೂ. ಯುವಕನಿಗೆ ಪರಿಹಾರ ನೀಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರಕರಣದ ವಿವರ: ಉಡುಪಿಯ ಯುವಕನು ಮಣಿಪಾಲದಲ್ಲಿ ವ್ಯಾಸಂಗ ಮಾಡುತ್ತಿದ್ದ ಮಹಾರಾಷ್ಟ್ರ ಮೂಲದ ಯುವತಿಯೊಬ್ಬಳನ್ನು ನಗರದ ಪಾಂಡೇಶ್ವರದ ಮಾಲ್‌ಗೆ ಕರೆದುಕೊಂಡು ಹೋಗಿದ್ದ. ಸಿನೆಮಾ ನೋಡಿದ ಬಳಿಕ ಮರಳಿ ಹೋಗಲು ರಿಕ್ಷಾ ಸ್ಟ್ಯಾಂಡ್‌ಗೆ ಹೋದಾಗ 5ಮಂದಿ ಯುವಕರ ತಂಡ ತಡೆದು ಯುವಕನನ್ನು ದೇವಸ್ಥಾನ ಸಮೀಪ ಕರೆದೊಯ್ಯುತ್ತಾರೆ. ಬಳಿಕ ಅಕ್ರಮ ಬಂಧನವಿರಿಸಿ ದೊಣ್ಣೆ, ರಾಡ್‌ನಿಂದ ಹಲ್ಲೆ ಮಾಡುತ್ತಾರೆ. ಇದರಿಂದ ಗಾಬರಿಗೊಂದ ಯುವತಿ ಪಾಂಡೇಶ್ವರ ಠಾಣೆಗೆ ದೂರು ನೀಡುತ್ತಾಳೆ. ಘಟನೆಯ ಬಳಿಕ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಾನೆ. ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತದೆ.

ಪ್ರಕರಣದ ಬಗ್ಗೆ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸಯಿದುನ್ನೀಸಾ ವಿಚಾರಣೆ ನಡೆಸಿ, ಆರೋಪ ಸಾಬೀತುಪಡಿಸಿ ತೀರ್ಪು ನೀಡುತ್ತಾರೆ. ಪ್ರಕರಣದಲ್ಲಿ 11 ಮಂದಿ ಸಾಕ್ಷಿದಾರರು, 17 ದಾಖಲೆ ಪರಿಗಣಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡ ಬಳಿಕ ಅನಂತಪದ್ಮನಾಭ ವಿಚಾರಣೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಕೋರ್ಟ್ ವಿಚಾರಣೆ ಹಂತದಲ್ಲಿ ಯುವತಿ ಮಾತ್ರ ಸಾಕ್ಷಿ ಹೇಳಲು ಹಿಂದೇಟು ಹಾಕಿದ್ದಾಳೆ.

ಶಿಕ್ಷೆಗೊಳಗಾದ 2ನೇ ಪ್ರಕರಣ
ಮಂಗಳೂರು ನಗರದಲ್ಲಿ ಅನೈತಿಕ ಪೊಲೀಸ್‌ಗಿರಿ ಸಂಬಂಧಿಸಿ ಶಿಕ್ಷೆಯಾದ ಪ್ರಕರಣದಲ್ಲಿ ಇದು 2ನೇ ಘಟನೆಯಾಗಿದೆ. 2011ರಲ್ಲಿ ಯುವತಿಯೊಬ್ಬಳು ತನ್ನ ಪರಿಚಯದ ಯುವಕನೊಂದಿಗೆ ಕೊಣಾಜೆ ಕಾಲೇಜೊಂದಕ್ಕೆ ಹೋಗುತ್ತಿರುವಾಗ ಯುವಕರು ಅಡ್ಡಗಟ್ಟಿ ಹಲ್ಲೆ ಮಾಡಿದ್ದರು. ಈ ಪ್ರಕರಣದಲ್ಲೂ ಅಪರಾಧಿಗಳಿಗೆ ಶಿಕ್ಷೆಯಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X