Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನೆರೆ ಸಂತ್ರಸ್ತರ ಖಾತೆಗಳಿಗೆ...

ನೆರೆ ಸಂತ್ರಸ್ತರ ಖಾತೆಗಳಿಗೆ ಆರ್‌ಟಿಜಿಎಸ್ ಮೂಲಕ ಪರಿಹಾರ: ಸಚಿವ ಆರ್.ಅಶೋಕ್

ವಾರ್ತಾಭಾರತಿವಾರ್ತಾಭಾರತಿ11 Oct 2019 9:56 PM IST
share
ನೆರೆ ಸಂತ್ರಸ್ತರ ಖಾತೆಗಳಿಗೆ ಆರ್‌ಟಿಜಿಎಸ್ ಮೂಲಕ ಪರಿಹಾರ: ಸಚಿವ ಆರ್.ಅಶೋಕ್

ಬೆಂಗಳೂರು, ಅ.11: ನೆರೆ ಸಂತ್ರಸ್ತರಿಗೆ ಒದಗಿಸಲಾಗುವ ಪರಿಹಾರದಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರಕ್ಕೆ ಅವಕಾಶ ಕೊಡದಂತೆ, ಅತ್ಯಂತ ಪಾರದರ್ಶಕವಾಗಿ ಈ ಪ್ರಕ್ರಿಯೆ ನಡೆಸಲು ಆರ್‌ಟಿಜಿಎಸ್ ಮೂಲಕ ಅವರ ಖಾತೆಗಳಿಗೆ ಪರಿಹಾರದ ಹಣ ಜಮೆ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

ಶುಕ್ರವಾರ ವಿಧಾನಸಭೆಯಲ್ಲಿ ನೆರೆ ಪರಿಸ್ಥಿತಿಗೆ ಸಂಬಂಧಿಸಿದಂತೆ ನಡೆದ ಚರ್ಚೆಗೆ ಉತ್ತರ ನೀಡಿದ ಅವರು, 22 ಜಿಲ್ಲೆಗಳ 103 ತಾಲೂಕಿನ 2798 ಹಳ್ಳಿಗಳು ನೆರೆ ಹಾವಳಿಯಿಂದ ಬಾಧಿತವಾಗಿವೆ. ಈ 22 ಜಿಲ್ಲೆಗಳನ್ನು ಪ್ರವಾಹ ಪೀಡಿತ ಜಿಲ್ಲೆಗಳು ಎಂದು ಸರಕಾರ ಘೋಷಣೆ ಮಾಡಿದೆ ಎಂದರು.

1465 ‘ಕಾಳಜಿ ಕೇಂದ್ರ’ಗಳನ್ನು ತೆರೆದು ಸಂತ್ರಸ್ತರಿಗೆ ಆಶ್ರಯ ಒದಗಿಸಲಾಗಿತ್ತು. 4415 ವೈದ್ಯಕೀಯ ಶಿಬಿರಗಳನ್ನು ಆಯೋಜಿಸಲಾಗಿದ್ದು, 10,326 ಆರೋಗ್ಯ ಸಿಬ್ಬಂದಿಗಳು ಈ ಕಾಯಕದಲ್ಲಿ ತೊಡಗಿದ್ದರು. 91 ಮಂದಿ ನೆರೆ ಹಾವಳಿಯಲ್ಲಿ ಮೃತಪಟ್ಟಿದ್ದು, ಮಡಿಕೇರಿಯಲ್ಲಿ ಭೂ ಕುಸಿತದಿಂದ ನಾಲ್ವರು ನಾಪತ್ತೆಯಾಗಿದ್ದಾರೆ. ಮೃತರು ಹಾಗೂ ನಾಪತ್ತೆಯಾಗಿರುವ ಕುಟುಂಬದವರಿಗೆ ತಲಾ 5 ಲಕ್ಷ ರೂ.ಪರಿಹಾರ ಒದಗಿಸಲಾಗಿದೆ ಎಂದು ಅಶೋಕ್ ಹೇಳಿದರು.

3400 ಜಾನುವಾರುಗಳ ಜೀವ ಹಾನಿಯಾಗಿದ್ದು, ಅದರ ಮಾಲಕರಿಗೆ 6.17 ಕೋಟಿ ರೂ.ಪರಿಹಾರ ಒದಗಿಸಲಾಗಿದೆ. ನೆರೆ ಸಂತ್ರಸ್ತರಿಗೆ ಸರಕಾರದ ವತಿಯಿಂದ 2.65 ಲಕ್ಷ ಆಹಾರ ಕಿಟ್(ಅಕ್ಕಿ, ಅಡುಗೆ ಎಣ್ಣೆ, ಉಪ್ಪು, ಸಕ್ಕರೆ ಒಳಗೊಂಡಂತೆ)ಗಳನ್ನು ಉಚಿತವಾಗಿ ವಿತರಣೆ ಮಾಡಲಾಗಿದೆ. ಮನೆಗಳನ್ನು ಕಳೆದುಕೊಂಡಿರುವವರಿಗೆ ಹೊಸ ಮನೆ ನಿರ್ಮಾಣಕ್ಕಾಗಿ ಆರಂಭಿಕವಾಗಿ ಒಂದು ಲಕ್ಷ ರೂ.ಪರಿಹಾರ ನೀಡಲು ಉದ್ದೇಶಿಸಿದ್ದು, ಈ ಪೈಕಿ ಶೇ.50ರಷ್ಟು ಮಂದಿಗೆ ಈಗಾಗಲೇ ಹಣ ಪಾವತಿಯಾಗಿದೆ ಎಂದು ಅವರು ತಿಳಿಸಿದರು.

ನದಿ ಪಾತ್ರದಲ್ಲಿ ಅನಧಿಕೃತವಾಗಿ ಮನೆಗಳನ್ನು ನಿರ್ಮಿಸಿಕೊಂಡಿದ್ದವರಿಗೂ ಪರಿಹಾರ ನೀಡುತ್ತಿದ್ದೇವೆ. ಮನೆ ಕಳೆದುಕೊಂಡಿರುವವ ಸಂತ್ರಸ್ತರಿಗೆ 30/40 ವಿಸ್ತೀರ್ಣದ ನಿವೇಶನ ಕೊಡುತ್ತೇವೆ. ಚಿಕ್ಕಮಗಳೂರಿನಲ್ಲಿ ಭೂ ಕುಸಿತವಾಗುವ ಸ್ಥಳವನ್ನು ಸರಕಾರ ವಶಕ್ಕೆ ಪಡೆದುಕೊಂಡು, ಬದಲಿ ಜಾಗ ನೀಡಲು 380 ಎಕರೆ ಜಾಗವನ್ನು ಗುರುತಿಸಲಾಗಿದೆ ಎಂದು ಅಶೋಕ್ ಹೇಳಿದರು.

ರಾಜ್ಯ ಹಾಗೂ ಜಿಲ್ಲಾ ರಸ್ತೆಗಳು 4119 ಕಿ.ಮೀ, ಗ್ರಾಮೀಣ ರಸ್ತೆ 14,921 ಕಿ.ಮೀ, ನಗರ ಪ್ರದೇಶದ ರಸ್ತೆ 2778 ಕಿ.ಮೀ, 2913 ಸೇತುವೆಗಳು, 11,063 ಸರಕಾರಿ ಕಟ್ಟಡಗಳು ಹಾಗೂ ಸಣ್ಣ ನೀರಾವರಿ ಇಲಾಖೆಯ 1500 ಕೆರೆಗಳಿಗೆ ಹಾನಿಯಾಗಿದೆ ಎಂದು ಅವರು ವಿವರಣೆ ನೀಡಿದರು.

ಕಂದಾಯ ಇಲಾಖೆಯ ವಿಪತ್ತು ನಿರ್ವಹಣಾ ವಿಭಾಗದಿಂದ 417.93 ಕೋಟಿ ರೂ. ಹಾಗೂ ಮೂಲಭೂತ ಸೌಕರ್ಯಕ್ಕಾಗಿ 500 ಕೋಟಿ ರೂ., ವಸತಿ ಇಲಾಖೆಯಿಂದ ಮನೆಗಳ ನಿರ್ಮಾಣಕ್ಕಾಗಿ 1000 ಕೋಟಿ ರೂ., ಮನೆಗಳ ದುರಸ್ತಿಗಾಗಿ 231 ಕೋಟಿ ರೂ., ಲೋಕೋಪಯೋಗಿ ಇಲಾಖೆಯಿಂದ ರಸ್ತೆಗಳ ದುರಸ್ತಿಗಾಗಿ 500 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಅಶೋಕ್ ಹೇಳಿದರು.

 ನೆರೆ ಪರಿಸ್ಥಿತಿಯಿಂದಾಗಿ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಗಳನ್ನು ಕಳೆದುಕೊಂಡಿದ್ದರೆ, ಹೊಸದಾಗಿ ಆ ದಾಖಲೆಗಳನ್ನು ಒದಗಿಸಲು ಜಿಲ್ಲಾಧಿಕಾರಿ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. 49 ತಾಲೂಕುಗಳನ್ನು ಬರಪೀಡಿತ ಎಂದು ಗುರುತಿಸಲಾಗಿದ್ದು, 2-3 ದಿನಗಳಲ್ಲಿ ಆದೇಶ ಹೊರಡಿಸಲಾಗುವುದು ಎಂದು ಅವರು ತಿಳಿಸಿದರು.

ಕೇಂದ್ರ ಸರಕಾರದಿಂದ 1200 ಕೋಟಿ ರೂ.ಬಂದಿದೆ. 1035 ಕೋಟಿ ರೂ.ಗಳನ್ನು ಬೆಳೆ ಪರಿಹಾರಕ್ಕೆ ಒದಗಿಸಲಾಗುವುದು. ಅದನ್ನು ಆರ್‌ಟಿಜಿಎಸ್ ಮೂಲಕ ರೈತರ ಖಾತೆಗಳಿಗೆ ಜವೆು ಮಾಡಲಾಗುವುದು. 2018ರ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ 1029.39 ಕೋಟಿ ರೂ.ಇನ್‌ಪುಟ್ ಸಬ್ಸಿಡಿ ಬಂದಿದೆ. 4.51 ಲಕ್ಷ ರೈತರಿಗೆ 246 ಕೋಟಿ ರೂ.ಗಳನ್ನು ಈವರೆಗೆ ರೈತರಿಗೆ ನೀಡಲಾಗಿದೆ ಎಂದು ಅಶೋಕ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X