Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಜಮ್ಮು ಕಾಶ್ಮೀರದಲ್ಲಿ ಸಹಜತೆ ಇದೆ’ ಎಂಬ...

‘ಜಮ್ಮು ಕಾಶ್ಮೀರದಲ್ಲಿ ಸಹಜತೆ ಇದೆ’ ಎಂಬ ವಾದವನ್ನು ಸುಳ್ಳಾಗಿಸಿದ ಸರಕಾರದ ಜಾಹೀರಾತು

ವಾರ್ತಾಭಾರತಿವಾರ್ತಾಭಾರತಿ11 Oct 2019 10:38 PM IST
share
‘ಜಮ್ಮು ಕಾಶ್ಮೀರದಲ್ಲಿ ಸಹಜತೆ ಇದೆ’ ಎಂಬ ವಾದವನ್ನು ಸುಳ್ಳಾಗಿಸಿದ ಸರಕಾರದ ಜಾಹೀರಾತು

ಶ್ರೀನಗರ,ಅ.11: ಕಾಶ್ಮೀರವು ಶುಕ್ರವಾರ ಅನಿಶ್ಚಿತತೆಯ 68ನೇ ದಿನಕ್ಕೆ ಕಾಲಿರಿಸಿದೆ. ಇನ್ನೂ ಮಾರುಕಟ್ಟೆಗಳು ಮುಚ್ಚಿಯೇ ಇವೆ,ಸಾರ್ವಜನಿಕ ಸಾರಿಗೆ ವಾಹನಗಳೂ ರಸ್ತೆಗಿಳಿದಿಲ್ಲ. ಸದ್ಯೋಭವಿಷ್ಯದಲ್ಲಿ ಕಾಶ್ಮೀರ ಕಣಿವೆಯಲ್ಲಿ ಸಹಜತೆ ಮರಳುತ್ತದೆ ಎನ್ನುವುದಕ್ಕೆ ಹೇಳಿಕೊಳ್ಳುವಂತಹ ಲಕ್ಷಣಗಳೂ ಕಂಡು ಬರುತ್ತಿಲ್ಲ.

ತನ್ಮಧ್ಯೆ ರಾಜ್ಯ ಸರಕಾರವು ಶುಕ್ರವಾರ ಸ್ಥಳೀಯ ದೈನಿಕಗಳ ಮುಖಪುಟದಲ್ಲ್ಲಿ ಜಾಹೀರಾತೊಂದನ್ನು ಪ್ರಕಟಿಸಿ,ತಮ್ಮ ಸಹಜ ಬದುಕುಗಳನ್ನು ಪುನರಾರಂಭಿಸುವಂತೆ ಜನರನ್ನು ಆಗ್ರಹಿಸಿದೆ.

‘ಮುಚ್ಚಿದ ಅಂಗಡಿಗಳು,ಆರಂಭಗೊಳ್ಳದ ಸಾರ್ವಜನಿಕ ಸಾರಿಗೆ ’ಎಂಬ ಒಕ್ಕಣೆಯನ್ನು ಹೊಂದಿರುವ ಜಾಹೀರಾತು ‘ಇದರ ಲಾಭ ಯಾರಿಗೆ ’ಎಂದು ಪ್ರಶ್ನಿಸಿದೆ.

ಕಾಶ್ಮೀರದಲ್ಲಿ ಸಹಜ ಸ್ಥಿತಿ ನಿರ್ಮಾಣಗೊಂಡಿದೆ ಎಂದು ಕೇಂದ್ರ ಮತ್ತು ರಾಜ್ಯ ಸರಕಾರಗಳು ಹೇಳಿಕೊಳ್ಳುತ್ತಿರುವ ಸಂದರ್ಭದಲ್ಲಿಯೇ ‘ಸಹಜತೆಯ ಬಲೂನನ್ನು’ ಠುಸ್ಸೆನಿಸಿರುವ ಈ ಮನವಿ ರೂಪದ ಜಾಹೀರಾತು ಹೊರಬಿದ್ದಿದೆ.

“ನಾವು ಉಗ್ರರಿಗೆ ಬಲಿಯಾಗುತ್ತಿದ್ದೆವೆಯೇ? ಯೋಚಿಸಿ. ನಾವಿಂದು ಕವಲುದಾರಿಯಲ್ಲಿದ್ದೇವೆ. ಅವೇ ಹಳೆಯ ಬೆದರಿಕೆಗಳು ಮತ್ತು ಬಲವಂತಗಳು ನಮ್ಮ ಮೇಲೆ ಪ್ರಭಾವ ಬೀರಲು ನಾವು ಅವಕಾಶ ನೀಡುತ್ತಿದ್ದೇವೆಯೇ?, ಬೆದರಿಕೆ ಮತ್ತು ತಪ್ಪುಮಾಹಿತಿಗಳೇ ಆಳುತ್ತವೆಯೇ ಅಥವಾ ನಮಗೆ ಯಾವುದು ಅತ್ಯುತ್ತಮ ಎನ್ನುವುದರ ಕುರಿತು ನಾವು ಖಚಿತ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆಯೇ” ಎಂಬ ಪ್ರಶ್ನೆಗಳನ್ನು ಜಾಹೀರಾತು ಒಳಗೊಂಡಿದೆ.

ಯಾವುದೇ ಗುಂಪು ಬಂದ್‌ಗೆ ಕರೆ ನೀಡಿಲ್ಲವಾದರೂ,ಜನರು ತಮ್ಮ ಸಹಜ ಬದುಕನ್ನು ಪುನರಾರಂಭಿಸದಿರಲು ಸ್ವಯಂ ನಿರ್ಧರಿಸಿದ್ದಾರೆ ಎಂದು ಈ ಜಾಹೀರಾತು ಬಿಂಬಿಸುತ್ತಿರುವಂತಿದೆ.

ವಿಧಿ 370ನ್ನು ರದ್ದುಗೊಳಿಸಿದ್ದ ಆ.5ರಿಂದ ಮುಚ್ಚಲಾಗಿದ್ದ ಶಿಕ್ಷಣ ಸಂಸ್ಥೆಗಳನ್ನು ಮತ್ತೆ ತೆರೆಯಲಾಗಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ,ಆದರೆ ವಿದ್ಯಾರ್ಥಿಗಳು ಮಾತ್ರ ಬರುತ್ತಿಲ್ಲ.

ಕಳೆದೊಂದು ತಿಂಗಳಿನಲ್ಲಿ ನಿರ್ಬಂಧಗಳನ್ನು ಸಾಕಷ್ಟು ಸಡಿಲಿಸಲಾಗಿದೆಯಾದರೂ,ಮೊಬೈಲ್ ಫೋನ್ ಮತ್ತು ಅಂತರ್ಜಾಲ ಸೇವೆಗಳ ಮೇಲಿನ ನಿರ್ಬಂಧ ಮುಂದುವರಿದಿದೆ. ಕಳೆದ ಕೆಲವು ವಾರಗಳಲ್ಲಿ ಶ್ರೀನಗರದಲ್ಲಿ ಖಾಸಗಿ ವಾಹನಗಳ ಸಂಚಾರ ನಿಧಾನವಾಗಿ ಹೆಚ್ಚುತ್ತಿದೆ. ಮಾರುಕಟ್ಟೆಗಳು ಬೆಳಿಗ್ಗೆ ಏಳು ಗಂಟೆಯ ಸುಮಾರಿಗೆ ಎರಡು ಗಂಟೆಗಳ ಕಾಲ ತೆರೆದಿರುತ್ತವೆ.

“ಕೆಲವು ಪೋಸ್ಟರ್‌ಗಳು ಮತ್ತು ಬೆದರಿಕೆಗಳು ನಾವು ನಮ್ಮ ವ್ಯವಹಾರಗಳನ್ನು ಪುನರಾರಂಭಿಸದಂತೆ,ನಮ್ಮ ಕಾಶ್ಮೀರಕ್ಕೆ ಅಭಿವೃದ್ಧಿಯ ಫಲಗಳು ದೊರೆಯದಂತೆ ಮಾಡಲು ನಾವು ಅವಕಾಶ ನೀಡುತ್ತಿದ್ದೇವೆಯೇ” ಎಂದು ಪ್ರಶ್ನಿಸಿರುವ ಜಾಹೀರಾತು,‘ “ಇದು ನಮ್ಮ ಮನೆ. ಅದರ ಹಿತ ಮತ್ತು ಸಮೃದ್ಧಿಯ ಬಗ್ಗೆ ನಾವೇ ಚಿಂತನೆ ನಡೆಸಬೇಕು” ಎಂದು ಹೇಳಿದೆ.

‘ ಹೆದರಿಕೆ ಏಕೆ ’ಎಂದೂ ಅದು ಪ್ರಶ್ನಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X