Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉಗ್ರಚಟುವಟಿಕೆಗಳಿಗೆ ಅರ್ಥಿಕ ನೆರವು...

ಉಗ್ರಚಟುವಟಿಕೆಗಳಿಗೆ ಅರ್ಥಿಕ ನೆರವು ಶಂಕೆ: ನಾಲ್ವರು ಆರೋಪಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ11 Oct 2019 10:46 PM IST
share
ಉಗ್ರಚಟುವಟಿಕೆಗಳಿಗೆ ಅರ್ಥಿಕ ನೆರವು ಶಂಕೆ: ನಾಲ್ವರು ಆರೋಪಿಗಳ ಬಂಧನ

ಲಕ್ನೋ, ಅ.11: ದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳಿಗೆ ಧನಸಹಾಯ ಒದಗಿಸುತ್ತಿದ್ದರೆಂಬ ಆರೋಪದಲ್ಲಿ ನಾಲ್ಕು ಮಂದಿಯನ್ನು ಉತ್ತರಪ್ರದೇಶ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

 ಬಂಧಿತ ಆರೋಪಿಗಳನ್ನು ಉಮ್ಮೆದ್ ಅಲಿ, ಸಂಜಯ್ ಅಗರ್‌ವಾಲ್, ಸಮೀರ್ ಸಲ್ಮಾನಿ ಹಾಗೂ ಐರಾಜ್ ಅಲಿ ಎಂದು ಗುರುತಿಸಲಾಗಿದ್ದು ಅವರನ್ನು ಲಖೀಂಪುರ ಜಿಲ್ಲೆಯ ನಿಘಾಸಾನ್ ಪ್ರದೇಶದಿಂದ ಗುರುವಾರ ಬಂಧಿಸಲಾಯಿತೆಂದು ಉತ್ತರಪ್ರದೇಶ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಓ.ಪಿ.ಸಿಂಗ್ ಶುಕ್ರವಾರ ತಿಳಿಸಿದ್ದಾರೆ.

ಈ ನಾಲ್ವರು ಆರೋಪಿಗಳು ನೇಪಾಳದ ಮಾರ್ಗವಾಗಿ ಭಾರತಕ್ಕೆ ಹಣವನ್ನು ತರುತ್ತಿದ್ದರು ಹಾಗೂ ಅದನ್ನು ದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳಿಗೆ ಧನಸಹಾಯ ನೀಡಲು ಬಳಸಿಕೊಳ್ಳುತ್ತಿದ್ದರೆಂದು ಡಿಜಿಪಿಯವರು ಆರೋಪಿಸಿದ್ದಾರೆ.

ಆರೋಪಿಗಳಿಂದ ಭಾರತೀಯ ಹಾಗೂ ನೇಪಾಳಿ ಕರೆನ್ಸಿಗಳು ಹಾಗೂ ಹಲವಾರು ಮೊಬೈಲ್ ಫೋನ್‌ಗಳನ್ನು ಪೊಲೀಸರು, ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ವಿಚಾರಣೆಗೊಳಪಡಿಸಿದಾಗ ಅವರು ಖೇರಿ ಹಾಗೂ ಬರೇಲಿ ನಗರದ ನಿವಾಸಿಗಳಾದ ಮುಮ್ತಾಝ್, ಫಾಹೀಮ್, ಸಿರಾಜುದ್ದೀನ್ ಹಾಗೂ ಸದಾಕತ್ ಅಲಿ ಅವರನ್ನು ತಮ್ಮ ಸಹಚರರೆಂದು ಗುರುತಿಸಿದ್ದಾರೆ. ಇತರ ದೇಶಗಳ ಬ್ಯಾಂಕ್ ಖಾತೆಗಳಿಂದ ಹಣವನ್ನು ನೇಪಾಳದ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸುತ್ತಿದ್ದುದಾಗಿ ಹಾಗೂ ಇದಕ್ಕಾಗಿ ಖಾತೆದಾರರಿಗೆ ಶೇ.5ರಷ್ಟು ಕಮೀಶನ್ ನೀಡುತ್ತಿದ್ದುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ.

ಆನಂತರ ಈ ಹಣವನ್ನು ನೇಪಾಳದ ಬ್ಯಾಂಕ್ ಖಾತೆಗಳಿಂದ ಹಿಂತೆಗೆದು ಅದನ್ನು ಭಾರತಕ್ಕೆ ತಂದು, ಭಾರತೀಯ ಕರೆನ್ಸಿಯಾಗಿ ಮಾರ್ಪಡಿಸುತ್ತಿದ್ದುದಾಗಿ ಅವರು ಹೇಳಿದ್ದಾರೆ. ತಮ್ಮ ಕೆಲಸಗಳಿಗಾಗಿ ಬಂಧಿತರು ಆರು ಶೇಕಡ ಕಮಿಶನ್ ಪಡೆಯುತ್ತಿದ್ದರೆಂದು ಡಿಜಿಪಿ ಓ.ಪಿ.ಸಿಂಗ್ ತಿಳಿಸಿದ್ದಾರೆ. ಆರೋಪಿಗಳು ತಮ್ಮ ಕಮಿಶನ್ ಹಣವನ್ನು ಪಡೆದ ಬಳಿಕ ಫಾಹೀಮ್ ಹಾಗೂ ಸದಾಕತ್ ಅವರಿಗೆ ಈ ಹಣವನ್ನು ನೀಡುತ್ತಿದ್ದರು. ಅವರು ಈ ಹಣವನ್ನು ದಿಲ್ಲಿಗೆ ಒಯ್ದು, ಅದನ್ನು ಭಾರತ ವಿರೋಧಿ ಚಟುವಟಿಕೆಗಳಿಗೆ ಬಳಸುತ್ತಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚೆಗೆ ನೇಪಾಳದ ಜನಕಪುರದಲ್ಲಿ ರಾಷ್ಟ್ರ ಬ್ಯಾಂಕ್‌ನ ಖಾತೆಯನ್ನು ಹ್ಯಾಕ್ ಮಾಡಲಾಗಿದ್ದು ಸುಮಾರು 49 ಲಕ್ಷ ರೂ. ವೌಲ್ಯದ ಕರೆನ್ಸಿಯನ್ನು ಭಾರತಕ್ಕೆ ವರ್ಗಾಯಿಸಲಾಗಿತ್ತೆಂಬುದು ಕೂಡಾ ತನಿಖೆಯಿಂದ ತಿಳಿದುಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಭಯೋತ್ಪಾದನೆಗೆ ಧನಸಹಾಯಕ್ಕೆ ಸಂಬಂಧಿಸಿದ ಪ್ರಕರಣವಾಗಿರುವುದರಿಂದ ಇನ್ನು ತಾನು ಭಯೋತ್ಪಾದಕ ನಿಗ್ರಹ ದಳಕ್ಕೆ ಹಸ್ತಾಂತರಿಸುವುದಾಗಿಯೂ ಡಿಜಿಪಿ ಒ.ಪಿ.ಸಿಂಗ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X