ಉಪ್ಪಳ: ಮುಸ್ಲಿಂ ಲೀಗ್ ಪಕ್ಷದ ಕಚೇರಿಯಲ್ಲಿ ಉಪಚುನಾವಣಾ ಪ್ರಚಾರ

ಬಂಟ್ವಾಳ, ಅ. 12: ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕದ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಎಐಸಿಸಿ ಕಾರ್ಯದರ್ಶಿ, ಮೈಸೂರು ವಿಭಾಗದ ಉಸ್ತುವಾರಿ ಪಿ.ಸಿ ವಿಷ್ಣುನಾಥನ್ ಅವರ ನೇತೃತ್ವದಲ್ಲಿ ಉಪ್ಪಳ ಬಸ್ ನಿಲ್ದಾಣದಲ್ಲಿರುವ ಮುಸ್ಲಿಂ ಲೀಗ್ ಪಕ್ಷದ ಕಚೇರಿಯಲ್ಲಿ ಮಂಜೇಶ್ವರ ಉಪಚುನಾವಣಾ ಪ್ರಚಾರ ನಡೆಯಿತು.
ಈ ಸಂದರ್ಭದಲ್ಲಿ ಲೋಕಸಭಾ ಸದ್ಯಸ್ಯ ರಾಜಮೋಹನ್ ಉನಿತ್ತನ್, ಮಾಜಿ ಸಚಿವ ಬಿ. ರಮಾನಾಥ ರೈ, ಶಾಸಕ ಯುಟಿ ಖಾದರ್, ಶಾಸಕರು, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಮತ್ತು ನಗರ ಪಂಚಾಯತ್ ಸದಸ್ಯರು, ಮ.ನ.ಪಾ, ಪುರಸಭೆ ಮತ್ತು ನಗರಸಭೆ ಸದಸ್ಯರು, ಯುವ ಕಾಂಗ್ರೆಸ್ ಮುಖಂಡರು, ಬ್ಲಾಕ್ ಅಧ್ಯಕ್ಷರು, ಮುಂಚೂಣಿ ಘಟಕದ ಜಿಲ್ಲಾಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಪಕ್ಷದ ಹಿರಿಯ ನಾಯಕರು ಉಪಸ್ಥಿತರಿದ್ದರು.











