Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಈರುಳ್ಳಿ ಮತ್ತು ಬೆಳ್ಳುಳ್ಳಿ...

ಈರುಳ್ಳಿ ಮತ್ತು ಬೆಳ್ಳುಳ್ಳಿ ಸಿಪ್ಪೆಗಳನ್ನು ಎಸೆಯಬೇಡಿ, ಅವುಗಳನ್ನು ಹೀಗೆ ಬಳಸಿ

ವಾರ್ತಾಭಾರತಿವಾರ್ತಾಭಾರತಿ12 Oct 2019 9:25 PM IST
share
ಈರುಳ್ಳಿ ಮತ್ತು ಬೆಳ್ಳುಳ್ಳಿ ಸಿಪ್ಪೆಗಳನ್ನು ಎಸೆಯಬೇಡಿ, ಅವುಗಳನ್ನು ಹೀಗೆ ಬಳಸಿ

ತರಕಾರಿಗಳ ಸಿಪ್ಪೆಗಳು ಮತ್ತು ಕಾಂಡಗಳನ್ನು ನಾವು ಎಸೆದುಬಿಡುತ್ತೇವೆ. ಆದರೆ ಅವುಗಳನ್ನೂ ಬಳಸಬಹುದು ಎನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ. ಇವು ವಿಟಾಮಿನ್ ಎ,ಸಿ ಮತ್ತು ಇ,ಉತ್ಕರ್ಷಣ ನಿರೋಧಕಗಳು, ಫ್ಲಾವನಾಯ್ಡ್ ಗಳು ಇತ್ಯಾದಿ ಪೋಷಕಾಂಶಗಳ ಅತ್ಯುತ್ತಮ ಮೂಲಗಳಾಗಿವೆ.

ಈರುಳ್ಳಿ ಮತ್ತು ಬೆಳ್ಳುಳ್ಳಿ ಸಿಪ್ಪೆಗಳು ಫಿನೈಲ್‌ಪ್ರಾಪನಾಯ್ಡ್ ಉತ್ಕರ್ಷಣ ನಿರೋಧಕಗಳನ್ನು ಒಳಗೊಂಡಿರುತ್ತವೆ. ಇವು ನಮ್ಮ ಒಟ್ಟಾರೆ ಆರೋಗ್ಯಕ್ಕೆ ಅತ್ಯಂತ ಲಾಭದಾಯಕವಾಗಿದ್ದು,ವಯಸ್ಸಾಗುವುದನ್ನು ನಿಧಾನಗೊಳಿಸುವ ಜೊತೆಗೆ ಕೊಲೆಸ್ಟ್ರಾಲ್ ಮಟ್ಟವನ್ನು ತಗ್ಗಿಸುತ್ತವೆ,ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ ಮತ್ತು ಹೃದಯನಾಳಗಳ ಆರೋಗ್ಯವನ್ನು ಕಾಯ್ದುಕೊಳ್ಳುತ್ತವೆ. ಈ ಸಿಪ್ಪೆಗಳನ್ನು ಎಸೆಯುವ ಬದಲು ಹೀಗೆ ಬಳಸಬಹುದು......

► ಸ್ವಾದಿಷ್ಟ ಅನ್ನವನ್ನು ತಯಾರಿಸಿ

ಅನ್ನವನ್ನು ಬೇಯಿಸುವಾಗ ಈರುಳ್ಳಿ ಮತ್ತು ಬೆಳ್ಳುಳ್ಳಿ ಸಿಪ್ಪೆಗಳನ್ನು ಅದಕ್ಕೆ ಸೇರಿಸಿ. ಇವು ಸಮಾನ ಪ್ರಮಾಣದಲ್ಲಿ ವಿಟಾಮಿನ್‌ಗಳು ಮತ್ತು ಪೋಷಕಾಂಶಗಳನ್ನು ಒಳಗೊಂಡಿರುವುದರಿಂದ ಅನ್ನದ ಪೌಷ್ಟಿಕತೆಯನ್ನು ಹೆಚ್ಚಿಸುತ್ತವೆ. ನೀವು ಸಿಪ್ಪೆಯನ್ನು ತಿನ್ನಲು ಬಯಸುವುದಿಲ್ಲವಾದರೆ ಅನ್ನ ಬೇಯಿಸುವಾಗ ಸಿಪ್ಪೆಗಳನ್ನು ಸೇರಿಸಿ ಬಳಿಕ ಅದನ್ನು ತೆಗೆದುಬಿಡಿ. ಇದು ಅನ್ನಕ್ಕೆ ಸ್ವಾದವನ್ನು ನೀಡುತ್ತದೆ.

► ಸೂಪ್‌ಗೆ ಸೇರಿಸಿ

ಹೆಚ್ಚುವರಿ ಪೋಷಕಾಂಶಗಳನ್ನು ಪಡೆಯಲು ಈ ಸಿಪ್ಪೆಗಳನ್ನು ಸೂಪ್ ತಯಾರಿಸುವಾಗ ಸೇರಿಸಿ ಬಳಿಕ ಅವುಗಳನ್ನು ಸೋಸಿ ತೆಗೆಯಿರಿ. ಇದರಿಂದ ಅವುಗಳಲ್ಲಿರುವ ಪೋಷಕಾಂಶಗಳು ವ್ಯರ್ಥವಾಗುವುದಿಲ್ಲ.

► ಆಹಾರಕ್ಕೆ ಸ್ವಾದ ನೀಡಲು ಬಳಸಿ

ಈರುಳ್ಳಿ ಮತ್ತು ಬೆಳ್ಳುಳ್ಳಿ ಸಿಪ್ಪೆಗಳನ್ನು ಹುರಿದು ಪುಡಿ ಮಾಡಿಟ್ಟುಕೊಂಡರೆ ಅದನ್ನು ನಿಮ್ಮ ಆಹಾರದಲ್ಲಿ ಫ್ಲೇವರಿಂಗ್ ಏಜೆಂಟ್ ಆಗಿ ಬಳಸಬಹುದು. ಇದು ನಿಮ್ಮ ಆಹಾರಕ್ಕೆ ಸೌಮ್ಯ ಪರಿಮಳವನ್ನು ನೀಡುತ್ತದೆ.

► ಸ್ನಾಯು ಸೆಳೆತಕ್ಕೆ ಪರಿಹಾರ

ಈರುಳ್ಳಿ ಸಿಪ್ಪೆಯು ಸ್ನಾಯುಗಳ ಸೆಳೆತಕ್ಕೆ ಪರಿಣಾಮಕಾರಿ ಪರಿಹಾರವಾಗಿದೆ. ಒಂದು ಕಪ್ ನೀರಿಗೆ ಈ ಸಿಪ್ಪೆಗಳನ್ನು ಸೇರಿಸಿ ಕುದಿಸಿದ ಬಳಿಕ ಅದನ್ನು ಸೋಸಿ ಕುಡಿದರೆ ಸ್ನಾಯುಗಳ ನೋವು ತಕ್ಷಣ ಶಮನಗೊಳ್ಳುತ್ತದೆ. ಇದು ಕೋಲೊರೆಕ್ಟಲ್ ಅಥವಾ ಕರುಳಿನ ಮತ್ತು ಗುದನಾಳದ ಕ್ಯಾನ್ಸರ್‌ನ್ನೂ ತಡೆಯುತ್ತದೆ ಎನ್ನುವುದನ್ನು ಅಧ್ಯಯನಗಳು ತೋರಿಸಿವೆ.

► ಕೂದಲಿಗೆ ಹೊಳಪು ನೀಡುತ್ತದೆ

ಈರುಳ್ಳಿ ಸಿಪ್ಪೆಯು ನೈಸರ್ಗಿಕ ಹೇರ್ ಡೈ ಆಗಿದ್ದು,ತಲೆಗೂದಲಿನ ನೈಸರ್ಗಿಕ ಬಣ್ಣವನ್ನು ಹೆಚ್ಚಿಸುವ ಜೊತೆಗೆ ಅದರ ಕಳೆದು ಹೋದ ಹೊಳಪನ್ನೂ ಮರಳಿಸುತ್ತದೆ. 4-5 ಕಪ್ ನೀರಿನಲ್ಲಿ ಕೆಲವು ಈರುಳ್ಳಿ ಸಿಪ್ಪೆಗಳನ್ನು ಹಾಕಿ ಕುದಿಸಿ. ಕೂದಲಿಗೆ ಶಾಂಪೂ ಮಾಡಿದ ಬಳಿಕ ಈ ನೀರಿನಿಂದ ತೊಳೆದುಕೊಳ್ಳಿ.

► ಒಳ್ಳೆಯ ನಿದ್ರೆಗೆ ಪೂರಕ

ಸುಖನಿದ್ರೆಯಿಂದ ವಂಚಿತರಾಗಿರುವವರಿಗೆ ಈರುಳ್ಳಿ ಸಿಪ್ಪೆಯ ಕಷಾಯ ದಿವ್ಯೌಷಧಿಯಾಗಿದೆ. ನೀರಿನಲ್ಲಿ ಈರುಳ್ಳಿ ಸಿಪ್ಪೆಯನ್ನು ಸೇರಿಸಿ ಕುದಿಸಿ ಮತ್ತು ಹಾಸಿಗೆ ಸೇರುವ ಮುನ್ನ ಈ ನೀರನ್ನು ಸೇವಿಸಿದರೆ ಅದು ಮನಸ್ಸಿಗೆ ನೆಮ್ಮದಿಯನ್ನು ನೀಡುತ್ತದೆ ಮತ್ತು ಶಾಂತಿಯುತ ನಿದ್ರೆ ಮಾಡಲು ನೆರವಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X