Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸುಪ್ರೀಂ ಆದೇಶ ನೀಡಿದರೂ ಮಾಹಿತಿ...

ಸುಪ್ರೀಂ ಆದೇಶ ನೀಡಿದರೂ ಮಾಹಿತಿ ಆಯೋಗಕ್ಕೆ ಆಯುಕ್ತರ ನೇಮಿಸದ ಕೇಂದ್ರ ಸರಕಾರ

ಬಾಕಿ ಪ್ರಕರಣಗಳಲ್ಲಿ ಏರಿಕೆ: ವರದಿ

ವಾರ್ತಾಭಾರತಿವಾರ್ತಾಭಾರತಿ12 Oct 2019 11:01 PM IST
share
ಸುಪ್ರೀಂ ಆದೇಶ ನೀಡಿದರೂ ಮಾಹಿತಿ ಆಯೋಗಕ್ಕೆ ಆಯುಕ್ತರ ನೇಮಿಸದ ಕೇಂದ್ರ ಸರಕಾರ

ಹೊಸದಿಲ್ಲಿ, ಅ.12: ಸರ್ವೋಚ್ಚ ನ್ಯಾಯಾಲಯದ ಆದೇಶದ ಹೊರತಾಗಿಯೂ ಕೇಂದ್ರ ಸರಕಾರ ಕೇಂದ್ರ ಮಾಹಿತಿ ಆಯೋಗಕ್ಕೆ ಆಯುಕ್ತರನ್ನು ನೇಮಿಸಿಲ್ಲ. ಇದರ ಪರಿಣಾಮವಾಗಿ ವಿವಿಧ ರಾಜ್ಯಗಳಲ್ಲಿ ಬಾಕಿಯುಳಿದ ದೂರುಗಳ ಸಂಖ್ಯೆಯಲ್ಲಿ ಬಹಳಷ್ಟು ಏರಿಕೆಯಾಗಿದೆ ಎಂದು ಭಾರತದ ಮಾಹಿತಿ ಆಯೋಗಗಳ ನಿರ್ವಹಣೆಯ ವರದಿ 2018-19ರಲ್ಲಿ ತಿಳಿಸಲಾಗಿದೆ.

ಸತರ್ಕ್ ನಾಗರಿಕ್ ಸಂಘಟನ್ (ಎಸ್‌ಎನ್‌ಎಸ್) ಮತ್ತು ಸೆಂಟರ್ ಫಾರ್ ಈಕ್ವಿಟಿ ಸ್ಟಡೀಸ್ (ಸಿಇಎಸ್) ಸಿದ್ಧಪಡಿಸಿರುವ ವರದಿಯಲ್ಲಿ ಆರ್‌ಟಿಐ ಕಾಯ್ದೆ, 2005ರಡಿ ರಚಿಸಲಾಗಿರುವ ಎಲ್ಲ 29 ಮಾಹಿತಿ ಆಯೋಗಗಳನ್ನು ಒಳಪಡಿಸಲಾಗಿದೆ. ಈ ವರದಿಯನ್ನು ಸಿದ್ಧಪಡಿಸಲು ಮಾಹಿತಿ ಹಕ್ಕಿನಡಿ ಒಟ್ಟು 129 ಅರ್ಜಿಗಳನ್ನು ಹಾಕಲಾಗಿದೆ. ಈ ಕಾಯ್ದೆಯನ್ನು ದೇಶಾದ್ಯಂತ ಬಳಸಲಾಗುತ್ತಿದ್ದು ವಾರ್ಷಿಕ 40ರಿಂದ 60 ಲಕ್ಷ ಅರ್ಜಿಗಳನ್ನು ದಾಖಲಿಸಲಾಗುತ್ತದೆ.

 ಆರ್‌ಟಿಐ ಸಹಾಯದಿಂದ ಜನರು ಸ್ಥಳೀಯ ಸರಕಾರ ಮತ್ತು ಪ್ರತಿನಿಧಿಗಳ ಕಾರ್ಯವೈಖರಿ ಬಗ್ಗೆ ತಿಳಿದು ಅವರನ್ನು ಹೊಣೆಗಾರರನ್ನಾಗಿ ಮಾಡಬಹುದಾಗಿದೆ. ಜೊತೆಗೆ ಮೂಲಭೂತ ಹಕ್ಕುಗಳು ಮತ್ತು ಪಾಲನ್ನು ಪಡೆಯಲು ಸಾಧ್ಯವಾಗುತ್ತದೆ. ಆರ್‌ಟಿಐ ಕಾಯ್ದೆ ಅನುಷ್ಟಾನಗೊಂಡ 14 ವರ್ಷಗಳ ನಂತರವೂ ಮಾಹಿತಿ ಆಯುಕ್ತರ ಹುದ್ದೆಗಳು ಖಾಲಿಯಾಗಿರುವ ಕಾರಣ ಅರ್ಜಿಗಳ ವಿಲೇವಾರಿಯಲ್ಲಿ ವಿಳಂಬವಾಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸರಕಾರಗಳು ಮಾಹಿತಿ ಆಯುಕ್ತರನ್ನು ನೇಮಿಸುವಲ್ಲಿ ವಿಫಲವಾಗಿವೆ ಎಂದು ವರದಿ ತಿಳಿಸಿದೆ. ಫೆಬ್ರವರಿ 2019ರಲ್ಲಿ ಸಾರ್ವಜನಿಕ ಹಿತಾಸಕ್ತಿ ದಾವೆಯ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯ ಆರ್‌ಟಿಐ ಕಾಯ್ದೆಯ ಪರಿಣಾಮಕಾರಿ ಅನುಷ್ಟಾನಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ಮಾಹಿತಿ ಆಯುಕ್ತರನ್ನು ನೇಮಿಸುವುದು ಮತ್ತು ಆಯೋಗ ಸೂಕ್ತ ಕಾರ್ಯಾಚರಿಸುವಂತೆ ನೋಡಿಕೊಳ್ಳುವುದು ಬಹಳ ಮುಖ್ಯವಾಗುತ್ತದೆ ಎಂದು ತಿಳಿಸಿತ್ತು.

ಮಾಹಿತಿ ಆಯೋಗಗಳು ಓರ್ವ ಮುಖ್ಯಸ್ಥ ಮತ್ತು ಕೆಲಸದ ಒತ್ತಡಕ್ಕೆ ಅನುಗುಣವಾಗಿ ಗರಿಷ್ಠ ಹತ್ತು ಆಯುಕ್ತರನ್ನು ಹೊಂದಿರಬೇಕು ಎಂದು ಶ್ರೇಷ್ಠ ನ್ಯಾಯಾಲಯ ಸೂಚಿಸಿತ್ತು. ಸರ್ವೋಚ್ಚ ನ್ಯಾಯಾಲಯದ ಆದೇಶದ ಹೊರತಾಗಿಯೂ ಕೇಂದ್ರ ಮಾಹಿತಿ ಆಯೋಗದಲ್ಲಿ ಇನ್ನೂ ನಾಲ್ಕು ಆಯುಕ್ತರ ಹುದ್ದೆಗಳು ಖಾಲಿ ಬಿದ್ದಿದೆ ಎಂದು ವರದಿ ತಿಳಿಸಿದೆ.

ಅನೇಕ ರಾಜ್ಯಗಳಲ್ಲಿ ಮುಖ್ಯ ಮಾಹಿತಿ ಆಯುಕ್ತರ ಹುದ್ದೆಯೇ ಖಾಲಿಯಿದೆ ಎಂದು ವರದಿ ಬಹಿರಂಗಪಡಿಸಿದೆ. ರಾಜಸ್ಥಾನದಲ್ಲಿ 2018ರ ಡಿಸೆಂಬರ್‌ನಿಂದ ಮಾಹಿತಿ ಆಯುಕ್ತರು ಇಲ್ಲದಿದ್ದರೆ ತಮಿಳುನಾಡಿನಲ್ಲಿ 2019ರ ಮೇಯಿಂದ ಆಯುಕ್ತರ ಸ್ಥಾನ ತೆರವುಗೊಂಡಿದೆ. ಇನ್ನು ಅನೇಕ ರಾಜ್ಯಮಾಹಿತಿ ಆಯೋಗಗಳು (ಎಸ್‌ಐಸಿ) ಕಾರ್ಯಾಚರಣೆಯನ್ನೇ ಸ್ಥಗಿತಗೊಳಿಸಿವೆ. ಇವುಗಳಲ್ಲಿ ಪ್ರಮುಖವಾಗಿ ಆಂಧ್ರ ಪ್ರದೇಶ ಮತ್ತು ತೆಲಂಗಾಣದ ಎಸ್‌ಐಸಿಯಾಗಿ ಕಾರ್ಯಾಚರಿಸುತ್ತಿದ್ದ ಆಂಧ್ರ ಪ್ರದೇಶ ಸಿಐಸಿ 2017ರ ಮೇ ನಂತರ ಸ್ತಭ್ಧಗೊಂಡಿತ್ತು. ಸದ್ಯ ಮೂವರು ಆಯುಕ್ತರೊಂದಿಗೆ ಕಾರ್ಯಾಚರಿಸುತ್ತಿದೆ.

ತ್ರಿಪುರದ ಆಯೋಗ 2019ರ ಎಪ್ರಿಲ್‌ನಿಂದ ಸ್ಥಗಿತಗೊಂಡಿದೆ. ಮಹಾರಾಷ್ಟ್ರ, ಕರ್ನಾಟಕ, ಉತ್ತರ ಪ್ರದೇಶ, ಕೇರಳ, ತೆಲಂಗಾಣ, ಒಡಿಶಾ ಮತ್ತು ಪಶ್ಚಿಮ ಬಂಗಾಳದ ಎಸ್‌ಐಸಿಗಳು ಅಗತ್ಯಕ್ಕಿಂತ ಕಡಿಮೆ ಆಯುಕ್ತರನ್ನು ಹೊಂದಿದೆ ಎಂದು ವರದಿ ತಿಳಿಸಿದೆ.

ಇದರ ಪರಿಣಾಮವಾಗಿ, ಮಹಾರಾಷ್ಟ್ರದಲ್ಲಿ ಮಾರ್ಚ್ 31,2019ರ ವೇಳೆಗೆ 46,000, ಉತ್ತರ ಪ್ರದೇಶದಲ್ಲಿ ಜನವರಿ 1, 2019ರ ವೇಳೆಗೆ 51,682, ಕೇರಳದಲ್ಲಿ ಮಾರ್ಚ್ 2018 ವೇಳೆಗೆ 15,000, ತೆಲಂಗಾಣದಲ್ಲಿ ಮಾರ್ಚ್ 31, 2019ರ ವೇಳೆಗೆ 9,000, ಒಡಿಶಾದಲ್ಲಿ ಇದೇ ವೇಳೆ 11,500 ಮತ್ತು ಪಶ್ಚಿಮ ಬಂಗಾಳದಲ್ಲಿ 8,000 ಅರ್ಜಿಗಳು ವಿಲೇವಾರಿಯಾಗದೆ ಬಾಕಿಯುಳಿದಿವೆ ಎಂದು ವರದಿ ತಿಳಿಸಿದೆ.

ವಿಭಿನ್ನ ಹಿನ್ನೆಲೆಯ ವ್ಯಕ್ತಿಗಳನ್ನು ಆಯುಕ್ತರಾಗಿ ನೇಮಿಸಬೇಕು ಎಂದು ಆರ್‌ಟಿಐ ಕಾಯ್ದೆಯಲ್ಲಿ ಸೂಚಿಸಲಾಗಿದ್ದು ಶೇ 58 ಆಯುಕ್ತರು ನಿವೃತ್ತ ಸರಕಾರಿ ಅಧಿಕಾರಿಗಳಾಗಿದ್ದಾರೆ. ಆಯುಕ್ತರ ಪೈಕಿ ಕೇವಲ ಶೇ.10 ಮಹಿಳೆಯರಾಗಿದ್ದಾರೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X