Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಂಡೀಪುರ: ಇಬ್ಬರು ರೈತರು, ಆನೆ ಮರಿಯನ್ನು...

ಬಂಡೀಪುರ: ಇಬ್ಬರು ರೈತರು, ಆನೆ ಮರಿಯನ್ನು ಬಲಿ ಪಡೆದಿದ್ದ ನರಭಕ್ಷಕ ಹುಲಿ ಕೊನೆಗೂ ಬಲೆಗೆ

ವಾರ್ತಾಭಾರತಿವಾರ್ತಾಭಾರತಿ13 Oct 2019 9:48 PM IST
share
ಬಂಡೀಪುರ: ಇಬ್ಬರು ರೈತರು, ಆನೆ ಮರಿಯನ್ನು ಬಲಿ ಪಡೆದಿದ್ದ ನರಭಕ್ಷಕ ಹುಲಿ ಕೊನೆಗೂ ಬಲೆಗೆ

ಚಾಮರಾಜನಗರ, ಅ.13: ಇಬ್ಬರು ಅನ್ನದಾತರನ್ನು ಬಲಿ ತೆಗೆದುಕೊಂಡ ನರಭಕ್ಷಕ ಹಸಿದ ಹೆಬ್ಬುಲಿ ಸತತ ಐದು ದಿನಗಳ ನಿರಂತರ ಕೂಂಬಿಂಗ್ ಕಾರ್ಯಾಚರಣೆ ನಂತರ ಸೆರೆ ಸಿಕ್ಕಿದೆ.‌ ಇದರಿಂದಾಗಿ ಕಾಡಂಚಿನ ಗ್ರಾಮದ ನಿವಾಸಿಗಳು ನಿಟ್ಟುಸಿರು ಬಿಡುವಂತಾಗಿದೆ. 

ಕಳೆದ ನಲವತ್ತು ದಿನಗಳ ಅಂತರದಲ್ಲಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ನ್ಯಾಷನಲ್ ಪಾರ್ಕಿನ ವ್ಯಾಪ್ತಿಯ ಕಾಡಂಚಿನ ಗ್ರಾಮಗಳಾದ ಚೌಡಳ್ಳಿ ಮತ್ತು ಹುಂಡೀಪುರ ಗ್ರಾಮದ ಅನ್ನದಾತರಿಬ್ಬರನ್ನು ಹಾಡುಹಗಲೇ ಹುಲಿ ಬಲಿ ತೆಗೆದುಕೊಂಡಿತ್ತು. 

ಚೌಡಳ್ಳಿ ಗ್ರಾಮದ ಶಿವಮಾದಯ್ಯ ಹಾಗು ಶಿವಲಿಂಗಪ್ಪರವರು ಹಸಿದ ಹೆಬ್ಬಲಿಗೆ ಬಲಿಯಾಗಿದ್ದರು. ಈ ದುರ್ಘಟನೆಯಿಂದ ಬಂಡಿಪುರದ ಅರಣ್ಯ ಅಧಿಕಾರಿಗಳು ಮತ್ತು ಕಾಡಂಚಿನ ಗ್ರಾಮಸ್ಥರಿಗೆ ಸಂಘರ್ಷ ಏರ್ಪಟಿತ್ತು. ಈ ನಡುವೆ ನರಹಂತಕ ಹುಲಿಯನ್ನು ಜೀವಂತವಾಗಿ ಅಥವಾ ಕೊಂದಾದರೂ ಸೆರೆ ಹಿಡಿಯಲು ಅರಣ್ಯ ಇಲಾಖೆಯ ಅಧಿಕಾರಿ ಜಗತ್ ರಾಂ ಆದೇಶಿಸಿದ್ದರು. ಅರಣ್ಯಾಧಿಕಾರಿಗಳ ಆದೇಶದಂತೆ ಕಳೆದ ಐದು ದಿನಗಳಿಂದ ನಿರಂತರವಾಗಿ ಕೂಂಬಿಂಗ್ ಕಾರ್ಯಾಚರಣೆ ನಡೆಯುತ್ತಿತ್ತು. ಕೂಂಬಿಂಗ್ ಸ್ಪೆಷಲಿಸ್ಟ್ ಅಭಿಮನ್ಯು ನೇತೃತ್ವದಲ್ಲಿ ಗಣೇಶ, ಗೋಪಾಲಸ್ವಾಮಿ, ಪಾರ್ಥಸಾರಥಿ, ಜಯಪ್ರಕಾಶ, ರೋಹಿತ್, ಗಣೇಶ ಆನೆ ಕೂಂಬಿಂಗ್ ಕಾರ್ಯಾಚರಣೆಗೆ ಇಳಿದಿತ್ತು.

ಅರಣ್ಯ ಇಲಾಖೆಯ ಅಪಾರಾಧಗಳ ಪತ್ತೆ ಹಚ್ಚುವ 'ರಾಣಾ' ಶ್ವಾನವನ್ನೂ ಸಹ ಹುಲಿ ಜಾಡು ಪತ್ತೆಗಾಗಿ ಬಳಸಿಕೊಳ್ಳಲಾಗಿತ್ತು. ಅಲ್ಲಲ್ಲಿ 200 ಕ್ಯಾಮಾರಾ ಅಳವಡಿಸಿಲಾಗಿತ್ತು ಮತ್ತು‌ ಡ್ರೋಣ್ ಮೂಲಕವು ಸಹ ಹುಲಿ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು.

ಶನಿವಾರ ರಾತ್ರಿ ಗೋಪಾಲಸ್ವಾಮಿ ಬೆಟ್ಟ ವಲಯದ ಮಗುವಿನಹಳ್ಳಿ ಸಮೀಪ ಜಮೀನಿನ ಬಳಿ ಹುಲಿ ಕಾಣಿಸಿಕೊಂಡಿತ್ತು. ಹುಲಿ ಕಾರ್ಯಾಚರಣೆ ಶನಿವಾರ ಆರಂಭಿಸುತ್ತಿದ್ದಂತೆಯೇ ಹುಲಿಯು ನವಜಾತ ಆನೆ ಮರಿಯನ್ನೂ ಕೊಂದಿತ್ತು. ಇಬ್ಬರು ರೈತರ ಬಳಿಕ ಆನೆ ಮರಿಯನ್ನೂ ಬಲಿ ಪಡೆದ ಘಟನೆಯಿಂದ ಕಂಗಾಲಾದ ಅರಣ್ಯ ಅಧಿಕಾರಿಗಳು ಹಸಿದ ಹೆಬ್ಬುಲಿ ಸೆರೆಗೆ ರಣತಂತ್ರ ರೂಪಿಸಿದ್ದರು. ಭಾನುವಾರ ಮುಂಜಾನೆ ಮಗುವಿನಗಳ್ಳಿ ಸಮೀಪದ ಜಮೀನಿನ ಬಳಿ ಹುಲಿ ಹೆಜ್ಜೆ ಕಂಡ ಅರಣ್ಯಾಧಿಕಾರಿಗಳು ಕೂಂಬಿಂಗ್ ಕಾರ್ಯಾಚರಣೆ ಚುರುಕುಗೊಳಿಸಿದರು. 

ಮಧ್ಯಾಹ್ನ ವೇಳೆಗೆ ಪೊದೆಯ ನಡುವೆ ಹುಲಿ ಘರ್ಜನೆ ಕೇಳಿದ ನುರಿತ ವನ್ಯಜೀವಿ ವೈದ್ಯರು ಹುಲಿಯತ್ತ‌ ಅರವಳಿಕೆ ಚುಚ್ಚುಮದ್ದು ಸಿಡಿಸಿದರು. ಸಂಜೆ 4 ಗಂಟೆ ವೇಳೆಗೆ ಅರಣ್ಯಾಧಿಕಾರಿಗಳ ತಂಡ ಪೊದೆಯಲ್ಲಿ ನಿತ್ರಾಣ ಕಳೆದುಕೊಂಡಿದ್ದ ನರಭಕ್ಷಕ ಹುಲಿಗೆ ಬಲೆ ಹಾಕಿ ಸುರಕ್ಷಿತವಾಗಿ ಹಿಡಿದರು.

ಈ ಸಂದರ್ಭದಲ್ಲಿ ಸ್ಥಳೀಯ ಶಾಸಕ ಸಿ.ಎಸ್.ನಿರಂಜನಕುಮಾರ್ ಸ್ಥಳದಲ್ಲಿದ್ದರು.

ಕಾರ್ಯನಿಮಿತ್ತ‌ ಮೈಸೂರಿಗೆ ಆಗಮಿಸಿದ್ದ ಅರಣ್ಯ ಸಚಿವ ಸಿ.ಸಿ.ಪಾಟೀಲ್ ಆಪರೇಷನ್ ಟೈಗರ್ ವಿಚಾರ ತಿಳಿಯುತ್ತಿದಂತೆಯೇ ಸ್ಥಳಕ್ಕೆ ತೆರಳಿ ಸೆರೆ ಹಿಡಿದ ಹುಲಿಯನ್ನು ವೀಕ್ಷಿಸಿದರು. ಬಳಿಕ ಹುಲಿಯನ್ನು ಮೈಸೂರಿನ ವನ್ಯಜೀವಿ ವಿಶ್ರಾಂತ ಧಾಮಕ್ಕೆ ಸ್ಥಳಾಂತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X