ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಹಲ್ಲೆ
ಬೆಂಗಳೂರು, ಅ.13: ಹಣದ ವಿಚಾರಕ್ಕಾಗಿ ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿರುವ ಘಟನೆ ಇಲ್ಲಿನ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆನೇಕಲ್ನ ಮುತ್ತಗಟ್ಟಿ ನಿವಾಸಿ ಸಂತೋಷ್ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಶನಿವಾರ ಸಂತೋಷ್ ಸ್ನೇಹಿತರ ಜೊತೆ ಹುಳಿಮಾವು ಬಳಿ ಸಿನಿಮಾ ನೋಡಲು ಹೋಗುತ್ತಿದ್ದ. ಈ ವೇಳೆ ಹಣದ ವಿಚಾರಕ್ಕಾಗಿ ಗಲಾಟೆ ನಡೆದು, ಸಂತೋಷ್ ಮೇಲೆ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ. ಈ ಸಂಬಂಧ ದೂರು ದಾಖಲಿಸಿ ಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Next Story