Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಟರ್ಕಿ ದಾಳಿಯಿಂದ 4 ಲಕ್ಷ ಜನರು...

ಟರ್ಕಿ ದಾಳಿಯಿಂದ 4 ಲಕ್ಷ ಜನರು ನಿರ್ವಸಿತ: ವಿಶ್ವಸಂಸ್ಥೆ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ13 Oct 2019 10:55 PM IST
share
ಟರ್ಕಿ ದಾಳಿಯಿಂದ 4 ಲಕ್ಷ ಜನರು ನಿರ್ವಸಿತ: ವಿಶ್ವಸಂಸ್ಥೆ ಎಚ್ಚರಿಕೆ

ಜಿನೀವ (ಸ್ವಿಟ್ಸರ್‌ಲ್ಯಾಂಡ್), ಅ. 13: ಉತ್ತರ ಸಿರಿಯದಲ್ಲಿರುವ ಕುರ್ದಿಶ್ ನೆಲೆಗಳ ಮೇಲೆ ಟರ್ಕಿ ನಡೆಸಿರುವ ಭೀಕರ ದಾಳಿಯ ಹಿನ್ನೆಲೆಯಲ್ಲಿ ಸುಮಾರು 1,30,000 ಮಂದಿ ತಮ್ಮ ಮನೆಗಳನ್ನು ತೊರೆದು ಪಲಾಯನಗೈದಿದ್ದಾರೆ ಎಂದು ವಿಶ್ವಸಂಸ್ಥೆ ರವಿವಾರ ಹೇಳಿದೆ. ಅದೇ ವೇಳೆ, ಈ ಸಂಖ್ಯೆ ಮೂರು ಪಟ್ಟಿಗಿಂತಲೂ ಹೆಚ್ಚಾಗುವ ಭೀತಿಯನ್ನು ಅದು ವ್ಯಕ್ತಪಡಿಸಿದೆ.

‘‘ಸುಮಾರು 4,00,000 ಜನರು ನಿರ್ವಸಿತರಾಗಬಹುದಾದ ಪರಿಸ್ಥಿತಿಯ ಬಗ್ಗೆ ನಾವು ಯೋಚಿಸುತ್ತಿದ್ದೇವೆ’’ ಎಂದು ವಿಶ್ವಸಂಸ್ಥೆಯ ಮಾನವೀಯ ಸಂಸ್ಥೆ ಒಸಿಎಚ್‌ಎನ ವಕ್ತಾರ ಜೆನ್ಸ್ ಲೇರ್ಕ್ ಎಎಫ್‌ಪಿ ಸುದ್ದಿ ಸಂಸ್ಥೆಗೆ ಹೇಳಿದ್ದಾರೆ. ‘‘ಈ ಜನರಿಗೆ ನೆರವು ಮತ್ತು ರಕ್ಷಣೆಯ ಅಗತ್ಯವಿದೆ’’ ಎಂಬುದಾಗಿಯೂ ಅವರು ಹೇಳಿದ್ದಾರೆ.

ಟರ್ಕಿಯ ಸೇನಾ ದಾಳಿ ಬುಧವಾರ ಆರಂಭಗೊಂಡ ಬಳಿಕ, ಸುಮಾರು ಒಂದು ಲಕ್ಷ ಮಂದಿ ಮನೆಬಿಟ್ಟು ಪಲಾಯನಗೈಯುವ ಅನಿವಾರ್ಯತೆಗೆ ಒಳಗಾಗಿದ್ದಾರೆ ಎಂದು ವಿಶ್ವಸಂಸ್ಥೆ ಶುಕ್ರವಾರ ಹೇಳಿತ್ತು. ಆದರೆ, ತೆಲ್‌ಲ್ ಅಬಿಯಾದ್ ಮತ್ತು ರಾಸ್ ಅಲ್ ಐನ್ ಪಟ್ಟಣಗಳ ಸುತ್ತಲಿನ ಗ್ರಾಮೀಣ ಪ್ರದೇಶಗಳಿಂದಲೂ ಜನರು ಪಲಾಯನಗೈಯುತ್ತಿದ್ದು, ನಿರ್ವಸಿತರ ಸಂಖ್ಯೆ 1,30,000ವನ್ನೂ ದಾಟಿದೆ ಎಂದು ರವಿವಾರ ಅದು ಹೇಳಿದೆ.

ಟರ್ಕಿಗೆ ಶಸ್ತ್ರಾಸ್ತ್ರಗಳ ರಫ್ತನ್ನು ನಿಲ್ಲಿಸಿದ ಜರ್ಮನಿ, ಫ್ರಾನ್ಸ್

ಸಿರಿಯದಲ್ಲಿರುವ ಕುರ್ದಿಶ್ ಬಂಡುಕೋರರ ವಿರುದ್ಧ ಟರ್ಕಿ ಸೇನಾ ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ, ಟರ್ಕಿಗೆ ಮಾಡುತ್ತಿರುವ ಶಸ್ತ್ರಾಸ್ತ್ರಗಳ ರಫ್ತನ್ನು ಅಮಾನತಿನಲ್ಲಿಡಲು ಫ್ರಾನ್ಸ್ ಮತ್ತು ಜರ್ಮನಿ ಶನಿವಾರ ನಿರ್ಧರಿಸಿವೆ.

ಸಿರಿಯದಲ್ಲಿ ನಡೆಸುತ್ತಿರುವ ಯುದ್ಧದಲ್ಲಿ ಬಳಸಬಹುದಾದ ಎಲ್ಲ ಯುದ್ಧ ಸಾಮಗ್ರಿಗಳ ರಫ್ತನ್ನು ನಿಲ್ಲಿಸಲು ಫ್ರಾನ್ಸ್ ನಿರ್ಧರಿಸಿದೆ ಎಂದು ಫ್ರಾನ್ಸ್‌ನ ರಕ್ಷಣಾ ಮತ್ತು ವಿದೇಶ ಸಚಿವಾಲಯಗಳು ಹೊರಡಿಸಿರುವ ಜಂಟಿ ಹೇಳಿಕೆಯೊಂದು ತಿಳಿಸಿದೆ.

ಇದಕ್ಕೂ ಕೆಲವು ಗಂಟೆಗಳ ಮೊದಲು ಜರ್ಮನಿಯು ಹೇಳಿಕೆಯೊಂದನ್ನು ನೀಡಿ, ಟರ್ಕಿಗೆ ಮಾಡಲಾಗುತ್ತಿರುವ ಯುದ್ಧ ಸಾಮಗ್ರಿಗಳ ರಫ್ತನ್ನು ತಡೆಹಿಡಿಯಲಾಗಿದೆ ಎಂದು ಹೇಳಿದೆ. ಜರ್ಮನಿಯು ಟರ್ಕಿಯ ಪ್ರಮುಖ ಶಸ್ತ್ರಾಸ್ತ್ರ ಪೂರೈಕೆ ದೇಶವಾಗಿದೆ.

ಟರ್ಕಿಯ ಆಕ್ರಮಣವನ್ನು ಹಲವಾರು ದೇಶಗಳು ಖಂಡಿಸಿವೆ. ಟರ್ಕಿಗೆ ಶಸ್ತ್ರಾಸ್ತ್ರಗಳ ರಫ್ತನ್ನು ನಿಲ್ಲಿಸುವುದಾಗಿ ಫಿನ್‌ಲ್ಯಾಂಡ್, ನಾರ್ವೆ ಮತ್ತು ನೆದರ್‌ಲ್ಯಾಂಡ್ಸ್ ದೇಶಗಳು ಈಗಾಗಲೇ ಘೋಷಿಸಿವೆ.

ಸಂಘರ್ಷ ನಿಲ್ಲಿಸಲು ಟರ್ಕಿ ಅಧ್ಯಕ್ಷಗೆ ಬ್ರಿಟನ್ ಪ್ರಧಾನಿ ಒತ್ತಾಯ

ಉತ್ತರ ಸಿರಿಯದಲ್ಲಿ ಟರ್ಕಿ ನಡೆಸುತ್ತಿರುವ ಸೇನಾ ಕಾರ್ಯಾಚರಣೆ ಬಗ್ಗೆ ಬ್ರಿಟನ್ ತೀವ್ರ ಕಳವಳ ಹೊಂದಿದೆ ಎಂದು ಬ್ರಿಟನ್ ಪ್ರಧಾನಿ ಬೊರಿಸ್ ಜಾನ್ಸನ್ ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ದೊಗಾನ್‌ಗೆ ಹೇಳಿದ್ದಾರೆ ಹಾಗೂ ಸಂಘರ್ಷವನ್ನು ನಿಲ್ಲಿಸಿ ಮಾತುಕತೆಗೆ ಮುಂದಾಗುವಂತೆ ಒತ್ತಾಯಿಸಿದ್ದಾರೆ.

‘‘ಟರ್ಕಿಯ ಕೃತ್ಯವು ಅಲ್ಲಿ ನೆಲೆಸಿರುವ ಮಾನವೀಯ ಪರಿಸ್ಥಿತಿಯನ್ನು ಇನ್ನಷ್ಟು ಬಿಗಡಾಯಿಸಬಹುದು ಹಾಗೂ ಐಸಿಸ್ ಉಗ್ರರ ವಿರುದ್ಧ ಸಾಧಿಸಲಾಗಿರುವ ಪ್ರಗತಿಯನ್ನು ದುರ್ಬಲಗೊಳಿಸಬಹುದು ಎಂಬ ಕಳವಳವನ್ನು ಜಾನ್ಸನ್ ವ್ಯಕ್ತಪಡಿಸಿದ್ದಾರೆ’’ ಎಂದು ಅವರ ವಕ್ತಾರರೊಬ್ಬರು ತಿಳಿಸಿದರು.

ಉಭಯ ನಾಯಕರು ಶನಿವಾರ ಸಂಜೆ ಟೆಲಿಫೋನ್‌ನಲ್ಲಿ ಮಾತನಾಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X