Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೂಲ ರಾಮಾಯಣ ಕುರಿತು ಚಿಂತನೆ ಅಗತ್ಯ:...

ಮೂಲ ರಾಮಾಯಣ ಕುರಿತು ಚಿಂತನೆ ಅಗತ್ಯ: ಸತೀಶ್ ಜಾರಕಿಹೊಳಿ

ವಾರ್ತಾಭಾರತಿವಾರ್ತಾಭಾರತಿ14 Oct 2019 7:50 PM IST
share
ಮೂಲ ರಾಮಾಯಣ ಕುರಿತು ಚಿಂತನೆ ಅಗತ್ಯ: ಸತೀಶ್ ಜಾರಕಿಹೊಳಿ

ಬೆಳಗಾವಿ, ಅ.13: ಇತ್ತೀಚಿನ ದಿನಗಳಲ್ಲಿ ಬಹಳಷ್ಟು ರಾಮಾಯಣಗಳು ಬರುತ್ತಿವೆ. ಇದರಿಂದ ಗೊಂದಲ ಮೂಡುತ್ತಿರುವುದರಿಂದ ಮೂಲ ವಾಲ್ಮೀಕಿ ರಾಮಾಯಣ ಹಾಗೂ ನಂತರ ಬಂದ ರಾಮಾಯಣಗಳ ಬಗ್ಗೆ ಚಿಂತನೆ ನಡೆಸುವ ಅಗತ್ಯವಿದೆ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಪಾದಿಸಿದರು.

ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ದಯೆ, ಮಾನವೀಯತೆ ಇಲ್ಲದ ಧರ್ಮ ನಮ್ಮದಾಗುವುದು ಸಾಧ್ಯವಿಲ್ಲ. ಮಾನವೀಯತೆಯೇ ನಮ್ಮ ಧರ್ಮವಾಗಬೇಕು. ದೇವರುಗಳಲ್ಲೂ ತಾರತಮ್ಯ ಮಾಡಲಾಗುತ್ತಿದ್ದು, ಕೆಲವು ಉಗ್ರ ದೇವರುಗಳು, ಇನ್ನುಳಿದವು ಶಾಂತ ದೇವರುಗಳಿದ್ದು, ಶಾಂತ ದೇವರುಗಳು ಬೆಳ್ಳಿ-ಬಂಗಾರ ಮಾತ್ರ ಬೇಡುತ್ತವೆ ಎಂದು ಅವರು ಮಾರ್ಮಿಕವಾಗಿ ಹೇಳಿದರು.

ಆಹಾರ ಪದ್ಧತಿ, ವ್ಯಕ್ತಿಯ ಬಣ್ಣ-ರೂಪಗಳ ಮೇಲೆ ತಾರತಮ್ಯ ನಡೆಯುತ್ತಿದ್ದು, ಈ ಬಗ್ಗೆ ಸಮಾಜದ ಜನರು ಜಾಗೃತರಾಗಬೇಕಿದೆ. ವಾಲ್ಮೀಕಿ ಸಮಾಜಕ್ಕೆ ಉದ್ಯೋಗ-ಶಿಕ್ಷಣದಲ್ಲಿ ಶೇ.7.5ರಷ್ಟು ಮೀಸಲಾತಿ ಅಗತ್ಯವಾಗಿದೆ. ಇದನ್ನು ಪಡೆಯುವ ನಿಟ್ಟಿನಲ್ಲಿ ವಾಲ್ಮೀಕಿ ಗುರುಪೀಠದ ನೇತೃತ್ವದಲ್ಲಿ ಹೋರಾಟ ಮುಂದುವರಿಸಲಾಗುವುದು ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ಶಿಕ್ಷಣ, ಸಂಘಟನೆ, ಹೋರಾಟ ಎಂದು ಡಾ.ಅಂಬೇಡ್ಕರ್ ಹೇಳಿದರು. ಅದಕ್ಕೆ ಈಗ ‘ಉದ್ಯೋಗ’ ಎಂಬ ಪದವನ್ನೂ ಸೇರಿಸಬೇಕಿದೆ. ಸಮಾಜದಲ್ಲಿ ಶಿಕ್ಷಣ ಪ್ರಮಾಣ ಈಗ ಹೆಚ್ಚುತ್ತಿದ್ದು, ಅದಕ್ಕೆ ತಕ್ಕಂತಹ ಉದ್ಯೋಗಗಳನ್ನು ಸೃಷ್ಟಿಸಿಕೊಳ್ಳಬೇಕಿದೆ. ತಂತ್ರಜ್ಞಾನದ ಈ ಯುಗದಲ್ಲಿ ಉದ್ಯೋಗಗಳನ್ನು ನಾವೇ ಸೃಷ್ಟಿಸಿಕೊಳ್ಳಬೇಕಿದೆ ಎಂದು ಅವರು ತಿಳಿಸಿದರು.

ಸರಕಾರ ಅನೇಕ ಸೌಲಭ್ಯಗಳನ್ನು ನೀಡುತ್ತಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಂಡು ಸ್ವಾವಲಂಬನೆ ಸಾಧಿಸಿದಾಗ ಜಯಂತಿ ಸಾರ್ಥಕವಾಗುತ್ತದೆ. ಸರಕಾರ ಒಂದು ಹಂತದವರೆಗೆ ಸಹಾಯ-ಸಹಕಾರ ನೀಡುತ್ತದೆ. ನಮ್ಮ ಬದುಕು ರೂಪಿಸುವ ಕೆಲಸ ನಾವು ಮಾಡಬೇಕಿದೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ರಾಮಾಯಣ-ಮಹಾಭಾರತ ಭಾರತೀಯ ಸಂಸ್ಕೃತಿಯ ಕಣ್ಣುಗಳು: ಇದೇ ಸಂದರ್ಭದಲ್ಲಿ ವಿಶೇಷ ಉಪನ್ಯಾಸ ನೀಡಿದ ಧಾರವಾಡ ಕರ್ನಾಟಕ ಕಾಲೇಜಿನ ಡಾ.ಶರಣು ಮುಷ್ಠಿಗೇರಿ, ಜಗತ್ತಿನ ಮಹಾನ್ ಆದರ್ಶ ಗ್ರಂಥಗಳಾಗಿರುವ ರಾಮಾಯಣ-ಮಹಾಭಾರತಗಳು ಭಾರತೀಯ ಸಂಸ್ಕೃತಿಯ ಎರಡು ಕಣ್ಣುಗಳು. ಆದ್ದರಿಂದ ನಾವು ಭಾರತೀಯರು ಎಂದು ಹೇಳಿಕೊಳ್ಳಬೇಕಾದರೆ ಈ ಎರಡೂ ಮಹಾನ್ ಗ್ರಂಥಗಳನ್ನು ಓದಲೇಬೇಕು ಎಂದರು.

ವಾಲ್ಮೀಕಿ ಈ ದೇಶದ ಆದರ್ಶ. ಆದ್ದರಿಂದ ಅವರ ಆದರ್ಶಗಳು ಮತ್ತು ಬದುಕು ಇಂದು ಅರಿವಿನ ಮಾರ್ಗಗಳಾಗಿವೆ. ಒಂದು ವಾಲ್ಮೀಕಿ ರಾಮಾಯಣ ಇಂದು ಅರವತ್ತು ಸಾವಿರ ರಾಮಾಯಣಗಳಾದರೂ ಮೂಲ ಗ್ರಂಥ ವಾಲ್ಮೀಕಿ ರಾಮಾಯಣವೇ ಆಗಿ ಉಳಿದಿರುವುದಕ್ಕೆ ಅದರ ಸತ್ವವೇ ಕಾರಣವಾಗಿದೆ ಎಂದು ಅವರು ಹೇಳಿದರು.

ರಾಮಾಯಣ, ಮಹಾಭಾರತ, ಗಾಯತ್ರಿ ಮಂತ್ರ ಸೇರಿದಂತೆ ಮಹಾನ್ ಗ್ರಂಥ, ಮಂತ್ರ ರಚಿಸಿದವರು ತಳ ಸಮುದಾಯದವರು. ಪ್ರಸ್ತುತ ಸನ್ನಿವೇಶದಲ್ಲಿ ಇದನ್ನು ಪ್ರಶ್ನಿಸುವ ಪ್ರವೃತ್ತಿ ಬೆಳೆಯುತ್ತಿರುವುದು ವಿಷಾದಕರ. ಗಂಡ-ಹೆಂಡತಿ, ಅಣ್ಣ-ತಮ್ಮ, ರಾಜ-ಮಹಾರಾಜರು, ಋಷಿಮುನಿಗಳು, ಆಡಳಿತ ವ್ಯವಸ್ಥೆ ಪ್ರತಿಯೊಂದು ಹೇಗಿರಬೇಕು ಎಂಬುದನ್ನು ತಿಳಿಸಿಕೊಟ್ಟ ಆದರ್ಶ ಕೃತಿ ರಾಮಾಯಣ. ಅಂತಹ ರಾಮಾಯಣ ಜಗತ್ತಿಗೆ ಕೊಟ್ಟ ವಾಲ್ಮೀಕಿ ನಮಗೆಲ್ಲ ಆದರ್ಶಪ್ರಾಯರಾಗಿದ್ದಾರೆ ಎಂದು ಅವರು ತಿಳಿಸಿದರು.

ವಾಲ್ಮೀಕಿಯ ಆದರ್ಶ ರಾಮಾಯಣ ವಿದ್ಯಾರ್ಥಿಗಳಿಗೆ ಪಠ್ಯವಾಗಬೇಕಿದ್ದು, ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಪೀಠ ಆರಂಭಿಸುವ ಮೂಲಕ ಮಹಾನ್ ಗ್ರಂಥ ಮತ್ತು ವಾಲ್ಮೀಕಿಯ ಬಗ್ಗೆ ಯುವಪೀಳಿಗೆಗೆ ತಿಳಿಸಿಕೊಡಬೇಕಿದೆ ಎಂದು ಶರಣು ಮುಷ್ಠಿಗೇರಿ ಅಭಿಪ್ರಾಯಪಟ್ಟರು.

ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಅನಿಲ್ ಬೆನಕೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆಶಾ ಐಹೊಳೆ, ಉಪಾಧ್ಯಕ್ಷ ಅರುಣ ಕಟಾಂಬಳೆ, ತಾಲೂಕು ಪಂಚಾಯತ್ ಅಧ್ಯಕ್ಷ ಶಂಕರಗೌಡ ಪಾಟೀಲ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಮಹಾನಗರ ಪಾಲಿಕೆ ಆಯುಕ್ತರಾದ ಜಗದೀಶ ಕೆ.ಎಚ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X