Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಾಟೆಕಲ್-ಉರುಮಣೆ: ಗ್ರಾಮಕ್ಕೆ...

ನಾಟೆಕಲ್-ಉರುಮಣೆ: ಗ್ರಾಮಕ್ಕೆ ಕಳಂಕವಾಗುತ್ತಿರುವ ತ್ಯಾಜ್ಯಗಳ ರಾಶಿ

ವಾರ್ತಾಭಾರತಿವಾರ್ತಾಭಾರತಿ14 Oct 2019 8:06 PM IST
share
ನಾಟೆಕಲ್-ಉರುಮಣೆ: ಗ್ರಾಮಕ್ಕೆ ಕಳಂಕವಾಗುತ್ತಿರುವ ತ್ಯಾಜ್ಯಗಳ ರಾಶಿ

ಮಂಗಳೂರು, ಅ.14: ಮಂಜನಾಡಿ ಗ್ರಾಪಂ ವ್ಯಾಪ್ತಿಯ ನಾಟೆಕಲ್-ಉರುಮಣೆ ಕ್ರಾಸ್‌ನ ರಸ್ತೆಯುದ್ದಕ್ಕೂ ತ್ಯಾಜ್ಯಗಳ ರಾಶಿ ಕಂಡು ಬಂದಿದ್ದು, ಪರಿಸರ ಗಬ್ಬೆದ್ದು ನಾರುತ್ತಿದೆ. ಮಂಜನಾಡಿ ಗ್ರಾಮಕ್ಕೇ ಕಳಂಕ ಎಂಬಂತಿರುವ ಈ ತ್ಯಾಜ್ಯಗಳ ರಾಶಿಯಿಂದ ಸಾರ್ವಜನಿಕರು ಅತ್ತಿಂದಿತ್ತ ಓಡಾಡಲು ಹರಸಾಹಸಪಡಬೇಕಾಗಿದೆ.

ದೇರಳಕಟ್ಟೆ ಸಮೀಪದಲ್ಲೇ ಇರುವ ನಾಟೆಕಲ್ ಜಂಕ್ಷನ್ ಇದೀಗ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿವೆ. ಈ ರಸ್ತೆಗೆ ಸಂಪರ್ಕ ಕಲ್ಪಿಸುವ ಉರುಮಣೆ ಕ್ರಾಸ್ ಬಳಿ ದಿನನಿತ್ಯ ಹಸಿ ಮತ್ತು ಒಣ ತ್ಯಾಜ್ಯಗಳ ರಾಶಿಯೇ ಕಾಣಲು ಸಿಗುತ್ತಿದೆ. ಇದು ಸ್ಥಳೀಯರ ಆರೋಗ್ಯದ ಮೇಲೆ ದುಷ್ಪರಿಣಾಮ ಮತ್ತು ಜನರಿಂದ ವ್ಯಾಪಕ ದೂರು ಕೇಳಿ ಬಂದ ಹಿನ್ನಲೆಯಲ್ಲಿ ಗ್ರಾಪಂ ಆಡಳಿತವು ಮೂರು ತಿಂಗಳ ಹಿಂದೆ ಖಾಸಗಿ ವ್ಯಕ್ತಿಯೊಬ್ಬರಿಗೆ ಕಸ ವಿಲೇವಾರಿಯ ಗುತ್ತಿಗೆ ವಹಿಸಿಕೊಟ್ಟಿದ್ದರು. ಅಲ್ಲದೆ ಈ ಗುತ್ತಿಗೆದಾರರು ಪ್ರತಿಯೊಂದು ಮನೆಯಿಂದ ಮಾಸಿಕ 100 ರೂ. ವಸೂಲಿ ಮಾಡುತ್ತಿದ್ದರು. ಆದರೆ ಕಳೆದೊಂದು ವಾರದಿಂದ ಈ ಗುತ್ತಿಗೆದಾರರು ಕಸ ವಿಲೇವಾರಿ ಮಾಡದ ಕಾರಣ ಈ ರಸ್ತೆ ಮೂಲಕ ಹಾದು ಹೋಗುವ ಗ್ರಾಮಸ್ಥರು ಕಸವನ್ನು ಇಲ್ಲೇ ಎಸೆದು ಹೋಗುತ್ತಾರೆ. ಕಳೆದ ಎರಡು ವಾರದಿಂದ ಕಸ ವಿಲೇವಾರಿಯಾಗದೆ ರಸ್ತೆಯಲ್ಲೇ ರಾಶಿ ಬಿದ್ದಿರುವ ಕಾರಣ ಗಬ್ಬು ವಾಸನೆ ಬರುತ್ತಿದೆ. ಸಾರ್ವಜನಿಕರು, ವಾಹನ ಸವಾರರು ಮೂಗು ಮುಚ್ಚಿ ನಡೆದಾಡುವ ಪರಿಸ್ಥಿತಿ ಎದುರಾಗಿದೆ. ಇದು ಸ್ವಚ್ಛ ಭಾರತವನ್ನೇ ಅಣಕಿಸುವಂತಾಗಿದೆ.

ಈ ಹಿಂದೆ ಗ್ರಾಮಾಂತರ ಪ್ರದೇಶದಲ್ಲಿ ತ್ಯಾಜ್ಯವು ಸಮಸ್ಯೆಯೇ ಆಗಿರಲಿಲ್ಲ. ಆದರೆ ಇದೀಗ ಗ್ರಾಮಾಂತರವೂ ಅಭಿವೃದ್ಧಿ ಪಥದತ್ತ ಸಾಗುತ್ತಿದ್ದು, ಫ್ಲಾಟ್‌ಗಳು ನಿರ್ಮಾಣಗೊಳ್ಳುತ್ತಲೇ ತ್ಯಾಜ್ಯದ ವಿಲೇವಾರಿಯು ಸಮಸ್ಯೆಯಾಗತೊಡಗಿದೆ. ಗ್ರಾಪಂ ಆಡಳಿತವು ತಡವಾಗಿ ಎಚ್ಚೆತ್ತುಕೊಂಡ ಕಾರಣ ಮತ್ತು ಈ ಬಗ್ಗೆ ಜನಜಾಗೃತಿಯೂ ಮೂಡದ ಕಾರಣ ಆಡಳಿತ ವ್ಯವಸ್ಥೆಗೆ ಇದು ಸವಾಲಾಗಿ ಪರಿಣಮಿಸಿದೆ.

ಅಂದಹಾಗೆ ಮಂಜನಾಡಿ ಗ್ರಾಪಂ ವ್ಯಾಪ್ತಿಯಲ್ಲಿ 2,369 ಮನೆಗಳಿದ್ದು, 10,401 ಜನರಿದ್ದಾರೆ. ಆ ಪೈಕಿ 550 ಮನೆಗಳಿಂದ ಮಂಗಳೂರಿನ ವ್ಯಕ್ತಿಯೊಬ್ಬರು ಸ್ವ ಆಸಕ್ತಿಯಿಂದ ಪ್ರತೀ ದಿನ ತ್ಯಾಜ್ಯವನ್ನು ಸಂಗ್ರಹಿಸುತ್ತಿದ್ದರು. ಇದೀಗ ಈ ಗುತ್ತಿಗೆದಾರರಿಗೆ ಕೆಲವು ಮನೆಯವರು ಮಾಸಿಕ ಹಣವನ್ನು ಸರಿಯಾಗಿ ನೀಡದ ಕಾರಣ ಅವರು ನಷ್ಟಕ್ಕೀಡಾಗಿ ತ್ಯಾಜ್ಯ ಸಂಗ್ರಹಿಸುವುದನ್ನು ಕೈ ಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇದರಿಂದ ದಿನದಿಂದ ದಿನಕ್ಕೆ ನಾಟೆಕಲ್-ಉರುಮಣೆ ಕ್ರಾಸ್ ರಸ್ತೆ ಬದಿಯಲ್ಲಿ ಶೇಖರಣೆಗೊಂಡಿರುವ ತ್ಯಾಜ್ಯವು ಸಾರ್ವಜನಿಕರ ಓಡಾಟಕ್ಕೆ ಅಡ್ಡಿಯಾಗಿವೆ ಎಂಬ ಆರೋಪ ಕೇಳಿ ಬಂದಿದೆ.

ಕಳೆದ ಮೂರು ತಿಂಗಳಿನಿಂದ ಖಾಸಗಿ ವ್ಯಕ್ತಿಯೊಬ್ಬರು ದಿನನಿತ್ಯ ತ್ಯಾಜ್ಯ ಸಂಗ್ರಹಿಸುತ್ತಿದ್ದರು. ಆದರೆ ಹೆಚ್ಚಿನವರು ಅವರಿಗೆ ಮಾಸಿಕ ಹಣ ನೀಡದ ಕಾರಣ ಅವರು ತ್ಯಾಜ್ಯ ಸಂಗ್ರಹಿಸುತ್ತಿಲ್ಲ. ಹಾಗಾಗಿ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯುತ್ತಿರುವುದು ಕಂಡು ಬಂದಿದೆ. ಇದೀಗ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪಿಸಲು ಸಿದ್ಧತೆ ನಡೆದಿದೆ. ಆವರೆಗೆ ಸ್ವಲ್ಪ ಸಮಸ್ಯೆಯಾಗಬಹುದು. ಘಟಕ ನಿರ್ಮಾಣವಾದ ಬಳಿಕ ಈ ಸಮಸ್ಯೆ ಎದುರಾಗದು.

- ಮುಹಮ್ಮದ್ ಅಸೈ, ಅಧ್ಯಕ್ಷರು, ಮಂಜನಾಡಿ ಗ್ರಾಪಂ

ಕಳೆದೊಂದು ವಾರದಿಂದ ತ್ಯಾಜ್ಯ ಸಂಗ್ರಹ ಆಗುತ್ತಿಲ್ಲ. ತ್ಯಾಜ್ಯ ಸಂಗ್ರಹಣೆಯ ಹೊಣೆ ಹೊತ್ತ ಖಾಸಗಿ ವ್ಯಕ್ತಿ ಇದೀಗ ನಮ್ಮೆ ಸಂಪರ್ಕಕ್ಕೂ ಸಿಗುತ್ತಿಲ್ಲ. ಹಾಗಾಗಿ ಅಲ್ಲಲ್ಲಿ ತ್ಯಾಜ್ಯದ ರಾಶಿ ಕಂಡು ಬಂದಿದೆ. ಶೀಘ್ರ ನಾವು ಅದನ್ನು ತೆರವುಗೊಳಿಸುತ್ತೇವೆ. ಈ ಮಧ್ಯೆ ಮಂಗಳೂರಿನ ಭರತ್ ಕಾರ್ಪೊರೇಶನ್ ಎಂಬ ಸಂಸ್ಥೆಯ ಜೊತೆ ನಾವು ತ್ಯಾಜ್ಯ ಸಂಗ್ರಹದ ಬಗ್ಗೆ ಮಾತುಕತೆ ನಡೆಸಿದ್ದೇವೆ. ಅವರು ಆಸುಪಾಸಿನ ಇತರ ಐದಾರು ಗ್ರಾಪಂನ ಆಡಳಿತದೊಂದಿಗೆ ಚರ್ಚೆ ನಡೆಸಿದ್ದಾರೆ. ಎಲ್ಲರೂ ಸಹಮತ ವ್ಯಕ್ತಪಡಿಸಿದರೆ ಭರತ್ ಕಾರ್ಪೊರೇಶನ್ ತ್ಯಾಜ್ಯ ಸಂಗ್ರಹದ ಹೊಣೆ ಹೊತ್ತುಕೊಳ್ಳಬಹುದು. ಅ.22ಕ್ಕೆ ಗ್ರಾಪಂ ಆಡಳಿತ ಸಮಿತಿಯ ಸಭೆ ಇದೆ. ಆ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಿ ಜಿಪಂ ಅನುಮೋದನೆಗೆ ಕಳುಹಿಸಲಿದ್ದೇವೆ. ಅಲ್ಲಿ ಅನುಮೋದನೆ ಆದೊಡನೆ ಈ ಸಂಸ್ಥೆಯು ತ್ಯಾಜ್ಯ ಸಂಗ್ರಹ ಮಾಡಲಿದೆ.

- ಮಂಜಪ್ಪ, ಪಿಡಿಒ, ಮಂಜನಾಡಿ ಗ್ರಾಪಂ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X