Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಮೆರಿಕದಲ್ಲಿ ನಡೆದ ಕೌಟುಂಬಿಕ ಹಿಂಸೆ...

ಅಮೆರಿಕದಲ್ಲಿ ನಡೆದ ಕೌಟುಂಬಿಕ ಹಿಂಸೆ ಪ್ರಕರಣಗಳ ವಿಚಾರಣೆ ಮುಂಬೈನಲ್ಲಿ ನಡೆಸಬಹುದು: ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ14 Oct 2019 8:42 PM IST
share
ಅಮೆರಿಕದಲ್ಲಿ ನಡೆದ ಕೌಟುಂಬಿಕ ಹಿಂಸೆ ಪ್ರಕರಣಗಳ ವಿಚಾರಣೆ ಮುಂಬೈನಲ್ಲಿ ನಡೆಸಬಹುದು: ಹೈಕೋರ್ಟ್

ಮುಂಬೈ,ಅ.14: ಅಮೆರಿಕದಲ್ಲಿ ನಡೆದ ಕೌಟುಂಬಿಕ ಹಿಂಸೆಯ ಪ್ರಕರಣಗಳ ವಿಚಾರಣೆಯನ್ನು ಮುಂಬೈನಲ್ಲಿ ದಂಡಾಧಿಕಾರಿಯೋರ್ವರು ನಡೆಸಬಹುದು ಎಂದು ಬಾಂಬೆ ಉಚ್ಚ ನ್ಯಾಯಾಲಯವು ಎತ್ತಿ ಹಿಡಿದಿದೆ. ಈ ಪ್ರಕರಣಗಳು ಯಾವುದೇ ಕಾಲಮಿತಿಯನ್ನು ಹೊಂದಿಲ್ಲ ಎಂದು ಹೇಳಿರುವ ನ್ಯಾಯಾಲಯವು,ಅಮೆರಿಕದಲ್ಲಿ ನೆಲೆಸಿರುವ ಐಟಿ ವೃತ್ತಿಪರ ಮುಹಮ್ಮದ್ ಝುಬೇರ್ ಫಾರೂಕಿ ಎನ್ನುವವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.

 2008ರಲ್ಲಿ ವಿವಾಹದ ಬಳಿಕ ಫಾರೂಕಿ ದಂಪತಿ ಅಮೆರಿಕಕ್ಕೆ ಸ್ಥಳಾಂತರಗೊಂಡಿದ್ದರು. ಎರಡು ವರ್ಷಗಳ ಬಳಿಕ ಕ್ಯಾಲಿಫೋರ್ನಿಯಾದ ಸುಪೀರಿಯರ್ ಕೋರ್ಟ್‌ನಲ್ಲಿ ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ಫಾರೂಕಿ,ಮಗುವನ್ನು ತನ್ನ ವಶಕ್ಕೆ ನೀಡುವಂತೆ ಕೋರಿದ್ದರು. ಫಾರೂಕಿಯವರ ಪತ್ನಿ ಭಾರತದಲ್ಲಿ ಅವರ ವಿರುದ್ಧ ಕೌಟುಂಬಿಕ ಹಿಂಸೆ ಪ್ರಕರಣವನ್ನು ದಾಖಲಿಸಿದ್ದರು.

ಇಲ್ಲಿಯ ಮುಲುಂಡ್ ದಂಡಾಧಿಕಾರಿಗಳ ನ್ಯಾಯಾಲಯವು ಪತ್ನಿಗೆ 30,000 ರೂ. ಮತ್ತು ಮಗನಿಗೆ 15,000 ರೂ.ಗಳ ಮಧ್ಯಂತರ ಜೀವನಾಂಶಗಳನ್ನು ಪಾವತಿಸುವಂತೆ ಫಾರೂಕಿಗೆ ಆದೇಶಿಸಿತ್ತು. ಫಾರೂಕಿ ಇದನ್ನು ಸೆಷನ್ಸ್ ಮತ್ತು ಬಾಂಬೆ ಉಚ್ಚ ನ್ಯಾಯಾಲಯಗಳಲ್ಲಿ ಪ್ರಶ್ನಿಸಿದ್ದರು.

ದೂರು ಸಲ್ಲಿಸುವಲ್ಲಿ ಎರಡು ವರ್ಷಗಳ ವಿಳಂಬವಾಗಿದೆ ಮತ್ತು ಇದೊಂದೇ ಕಾರಣದಲ್ಲಿ ನ್ಯಾಯಾಲಯವು ದೂರನ್ನು ವಜಾಗೊಳಿಸಬೇಕು ಎಂದು ಫಾರೂಕಿ ಪರ ನ್ಯಾಯವಾದಿ ವಾದಿಸಿದ್ದರು. ಅಲ್ಲದೆ ಆರೋಪಿಸಲಾಗಿರುವ ಕೌಟುಂಬಿಕ ಹಿಂಸೆಯು ಅಮರಿಕದಲ್ಲಿ ನಡೆದಿರುವುದರಿಂದ ಪ್ರಕರಣದ ವಿಚಾರಣೆೆಯನ್ನು ನಡೆಸಲು ದಂಡಾಧಿಕಾರಿಗಳ ನ್ಯಾಯಾಲಯಕ್ಕೆ ಅಧಿಕಾರ ವ್ಯಾಪ್ತಿಯಿಲ್ಲ ಎಂದೂ ಅವರೂ ಹೇಳಿದ್ದರು.

ಅರ್ಜಿಯನ್ನು ವಜಾಗೊಳಿಸಿದ ನ್ಯಾ.ಸಂಭಾಜಿ ಶಿಂಧೆ ಅವರು,ಆದೇಶವನ್ನು ಪಾಲಿಸಲು ಮತ್ತು ಜೀವನಾಂಶ ಪಾವತಿಸಲು ನಾಲ್ಕು ವಾರಗಳ ಕಾಲಾವಕಾಶ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X