Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಅಪಧಮನಿಗಳಲ್ಲಿ ಕೊಲೆಸ್ಟ್ರಾಲ್...

ಅಪಧಮನಿಗಳಲ್ಲಿ ಕೊಲೆಸ್ಟ್ರಾಲ್ ಸಂಗ್ರಹವನ್ನು ತಡೆಯಲು ಈ ಆಹಾರಗಳನ್ನು ಸೇವಿಸಿ

ವಾರ್ತಾಭಾರತಿವಾರ್ತಾಭಾರತಿ14 Oct 2019 9:18 PM IST
share
ಅಪಧಮನಿಗಳಲ್ಲಿ ಕೊಲೆಸ್ಟ್ರಾಲ್ ಸಂಗ್ರಹವನ್ನು ತಡೆಯಲು ಈ ಆಹಾರಗಳನ್ನು ಸೇವಿಸಿ

ಕೊಲೆಸ್ಟ್ರಾಲ್ ನಮ್ಮ ರಕ್ತದಲ್ಲಿರುವ ಒಂದು ವಿಧದ ಕೊಬ್ಬು ಆಗಿದ್ದು,ಅಪಧಮನಿಗಳಲ್ಲಿ ಸಂಗ್ರಹಗೊಳ್ಳುವ ಮೂಲಕ ಹೃದಯಾಘಾತ ಮತ್ತು ಪಾರ್ಶ್ವವಾಯುವಿಗೆ ಗುರಿಯಾಗುವ ಅಪಾಯವನ್ನು ಹೆಚ್ಚಿಸುತ್ತದೆ. ಹೃದಯಾಘಾತ ಇಂದು ವಿಶ್ವದಲ್ಲಿ ಅತ್ಯಂತ ಹೆಚ್ಚಿನ ಸಾವುಗಳಿಗೆ ಕಾರಣವಾಗಿದೆ. ಜಗತ್ತಿನ ಪ್ರತಿ ಐವರಲ್ಲಿ ಓರ್ವ ವ್ಯಕ್ತಿ ಒಂದಲ್ಲ ಒಂದು ವಿಧದ ಹೃದ್ರೋಗದಿಂದ ಸಾವನ್ನಪ್ಪುತ್ತಾನೆ.

ಪೋಷಕಾಂಶಗಳ ಕೊರತೆಯಿಂದ ಕೂಡಿದ ಅನಾರೋಗ್ಯಕರ ಆಹಾರ ಶರೀರದಲ್ಲಿ ಕೊಲೆಸ್ಟ್ರಾಲ್ ಹೆಚ್ಚಲು ಪ್ರಮುಖ ಕಾರಣವಾಗಿದೆ. ಸಾಮಾನ್ಯವಾಗಿ ಕೊಲೆಸ್ಟ್ರಾಲ್,ಕ್ಯಾಲ್ಸಿಯಂ ಮತ್ತು ಫ್ಯಾಟಿ ಆ್ಯಸಿಡ್‌ಗಳು ಅಪಧಮನಿಗಳಲ್ಲಿ ಸಂಗ್ರಹಗೊಳ್ಳುತ್ತವೆ. ಇದರಿಂದಾಗಿ ಅಪಧಮನಿಗಳು ಸಂಕುಚಿತಗೊಂಡು ಹೃದಯಕ್ಕೆ ರಕ್ತಪೂರೈಕೆಗೆ ವ್ಯತ್ಯಯವುಂಟಾಗುತ್ತದೆ ಮತ್ತು ಇದು ಹೃದ್ರೋಗಗಳು ಹಾಗೂ ಹೃದಯಾಘಾತಕ್ಕೆ ಕಾರಣವಾಗುತ್ತದೆ.

 ಅಪಧಮನಿಗಳಲ್ಲಿ ಉಂಟಾಗಿರುವ ತಡೆಗಳನ್ನು ಸಂಪೂರ್ಣವಾಗಿ ನಿವಾರಿಸುವ ಯಾವುದೇ ಜಾದೂ ಆಹಾರವಿಲ್ಲ. ಆದರೆ ಕೆಲವು ಆಹಾರಗಳು ಅವುಗಳನ್ನು ಕ್ರಮೇಣ ಕಡಿಮೆ ಮಾಡುತ್ತವೆ. ಇದರ ಜೊತೆಗೆ ದೈನಂದಿನ ವ್ಯಾಯಾಮ ಮತ್ತು ಶರೀರದ ತೂಕ ಇಳಿಸಿಕೊಳ್ಳುವ ಮೂಲಕ ಕೊಲೆಸ್ಟ್ರಾಲ್ ಮಟ್ಟವನ್ನು ತಗ್ಗಿಸಿಕೊಳ್ಳಬಹುದು. ಇಂತಹ ಕೆಲವು ಆಹಾರಗಳ ಕುರಿತು ಮಾಹಿತಿಯಿಲ್ಲಿದೆ......

►ಓಟ್ಸ್

  ಓಟ್ಸ್ ಅಥವಾ ತೋಕೆಗೋದಿ ಹೃದಯಕ್ಕೆ ಲಾಭಗಳನ್ನು ನೀಡುವ ಆಹಾರಗಳಲ್ಲಿ ಒಂದಾಗಿದ್ದು,ಇದೇ ಕಾರಣದಿಂದ ವಿಶ್ವಾದ್ಯಂತ ಜನಪ್ರಿಯವಾಗಿದೆ. ತನ್ನಲ್ಲಿರುವ ಸಮೃದ್ಧ ನಾರಿನಿಂದಾಗಿ ಕೊಲೆಸ್ಟ್ರಾಲ್ ಮಟ್ಟವನ್ನು ತಗ್ಗಿಸಲು ಮತ್ತು ಅಪಧಮನಿಗಳಲ್ಲಿಯ ತಡೆಗಳನ್ನು ನಿವಾರಿಸಲು ಅತ್ಯುತ್ತಮ ಆಹಾರವಾಗಿದೆ. ಹೃದ್ರೋಗಗಳಿಂದ ಬಳಲುತ್ತಿರುವವರು ಪ್ರತಿ ದಿನ ಬೆಳಿಗ್ಗೆ ಬ್ರೇಕ್‌ಫಾಸ್ಟ್‌ನಲ್ಲಿ ಒಂದು ಬೌಲ್‌ನಷ್ಟು ಓಟ್ಸ್ ಸೇವಿಸುವ ಮೂಲಕ ಆರೋಗ್ಯವನ್ನು ಹೆಚ್ಚಿಸಿಕೊಳ್ಳಲು ಸಾಧ್ಯ.

►ಬೇಳೆಗಳು

 ಭಾರತೀಯರ ಪಾಲಿಗೆ ಬೇಳೆಗಳು ಪ್ರಧಾನ ಆಹಾರವಾಗಿವೆ. ತೊಗರಿ,ಹೆಸರು,ಉದ್ದು,ಮಸೂರ,ಕಡಲೆ ಇತ್ಯಾದಿ ಬೇಳೆಗಳು ಪ್ರೋಟಿನ್‌ನ ಗಣಿಗಳಾಗಿವೆ. ಬೇಳೆಗಳಲ್ಲಿರುವ ನಾರು ಕೊಲೆಸ್ಟ್ರಾಲ್ ಮಟ್ಟವನ್ನು ತಗ್ಗಿಸುತ್ತದೆ,ಹೀಗಾಗಿ ಅವುಗಳ ಸೇವನೆ ಆರೋಗ್ಯಕ್ಕೆ ಒಳ್ಳೆಯದು. ಬೇಳೆಗಳು ಕಡಿಮೆ ಕೊಬ್ಬನ್ನು ಹೊಂದಿದ್ದು,ಕ್ಯಾಲ್ಸಿಯಂ,ಪೊಟ್ಯಾಷಿಯಂ ಮತ್ತು ಮ್ಯಾಗ್ನೀಷಿಯಂ ಇತ್ಯಾದಿಗಳಂತಹ ಪೋಷಕಾಂಶಗಳನ್ನು ಸಾಕಷ್ಟು ಪ್ರಮಾಣದಲ್ಲಿ ಒಳಗೊಂಡಿರುತ್ತವೆ. ಹೀಗಾಗಿ ಬೇಳೆ ಹೃದ್ರೋಗ ಮತ್ತು ಅಧಿಕ ರಕ್ತದೊತ್ತಡ ಹೊಂದಿರುವ ರೋಗಿಗಳಿಗೆ ಅತ್ಯುತ್ತಮ ಆಹಾರವಾಗಿದೆ.

►ಅರಿಷಿಣ

ಆಯುರ್ವೇದದಲ್ಲಿ ಸಾವಿರಾರು ವರ್ಷಗಳಿಂದಲೂ ಅರಿಷಿಣವು ಔಷಧಿಯಾಗಿ ಬಳಕೆಯಾಗುತ್ತಿದೆ. ಅರಿಷಿಣದಲ್ಲಿರುವ ಕರ್ಕುಮಿನ್ ಎಂಬ ವಿಶೇಷ ಉತ್ಕರ್ಷಣ ನಿರೋಧಕವು ಅಪಧಮನಿಗಳಲ್ಲಿ ಕೊಬ್ಬು ಸಂಗ್ರಹಗೊಳ್ಳಲು ಅವಕಾಶ ನೀಡುವುದಿಲ್ಲ. ಹೀಗಾಗಿ ನಮ್ಮ ಆಹಾರದಲ್ಲಿ ಅರಿಷಿಣ ಅತ್ಯಗತ್ಯವಾಗಿ ಇರಲೇಬೇಕು. ಅಡಿಗೆಯಲ್ಲಿ ಬಳಸುವ ಜೊತೆಗೆ ಅರಿಷಿಣವನ್ನು ಹಾಲಿಗೆ ಬೆರೆಸಿಕೊಂಡೂ ಸೇವಿಸಬಹುದು. ಇದು ಹಲವಾರು ಆರೋಗ್ಯಲಾಭಗಳನ್ನು ನೀಡುತ್ತದೆ.

►ಬ್ರಾಕೊಲಿ

ಕ್ಯಾಬೇಜ್ ಕುಟುಂಬಕ್ಕೆ ಸೇರಿದ ಬ್ರಾಕೊಲಿ ಅಥವಾ ಕೋಸುಗಡ್ಡೆಯು ಹಲವಾರು ಉತ್ಕರ್ಷಣ ನಿರೋಧಕಗಳನ್ನು ಒಳಗೊಂಡಿರುವುದರಿಂದ ಶರೀರಕ್ಕೆ ಲಾಭದಾಯಕವಾಗಿದೆ. ಬ್ರಾಕೊಲಿ ಸೇವನೆಯಿಂದ ಕ್ಯಾನ್ಸರ್ ಮತ್ತು ಹೃದ್ರೋಗಗಳನ್ನು ದೂರವಿಡಬಹುದು ಎನ್ನುವುದನ್ನು ಇತ್ತೀಚಿನ ಸಂಶೋಧನೆಗಳು ತೋರಿಸಿವೆ. ಬ್ರಾಕೊಲಿಯಲ್ಲಿರುವ ಸಲ್ಫೊರಾಫೇನ್ ಎಂಬ ವಿಶೇಷ ರಾಸಾಯನಿಕವು ಶರೀರದಲ್ಲಿ ನಿರ್ದಿಷ್ಟ ವಿಧದ ಪ್ರೋಟಿನೊಂದನ್ನು ಕ್ರಿಯಾಶೀಲಗೊಳಿಸುವುದು ಇದಕ್ಕೆ ಕಾರಣವಾಗಿದೆ. ಈ ಪ್ರೋಟಿನ್ ಅಪಧಮನಿಗಳಲ್ಲಿ ಪಾಚಿ ಸಂಗ್ರಹಗೊಳ್ಳುವುದನ್ನು ತಡೆಯುತ್ತದೆ. ಇದಲ್ಲದೆ ಬ್ರಾಕೊಲಿ ಸಾಕಷ್ಟು ಪ್ರಮಾಣದಲ್ಲಿ ನಾರನ್ನೂ ಒಳಗೊಂಡಿದೆ.

►ಗ್ರೀನ್ ಟೀ

 ಗ್ರೀನ್ ಟೀ ಸೇವನೆಯು ಶರೀರದಲ್ಲಿ ಚಯಾಪಚಯವನ್ನು ಹೆಚ್ಚಿಸುತ್ತದೆ. ಹೀಗಾಗಿ ಶರೀರದ ತೂಕ ಇಳಿಸಿಕೊಳ್ಳಲು ಬಯಸುವವರಲ್ಲಿ ಇದು ಜನಪ್ರಿಯವಾಗಿದೆ. ಗ್ರೀನ್ ಟೀಯಲ್ಲಿರುವ ಎಪಿಗ್ಯಾಲೊಕ್ಯಾಟೆಚಿನ್ ಗ್ಯಾಲೇಟ್ ಅಥವಾ ಇಜಿಸಿಜಿ ಎಂಬ ಸಂಯುಕ್ತವು ಅಪಧಮನಿಗಳಲ್ಲಿ ಸಂಗ್ರಹಗೊಂಡಿರುವ ಕೊಬ್ಬಿನ ಪ್ರಮಾಣವನ್ನು ಕಡಿಮೆ ಮಾಡುತ್ತದೆ ಎನ್ನುವುದನ್ನು ಸಂಶೋಧನೆಗಳು ತೋರಿಸಿವೆ. ಈ ಸಂಯುಕ್ತವು ಅಲ್ಝೈಮರ್ಸ್ ಕಾಯಿಲೆಯನ್ನು ತಡೆಯಲೂ ನೆರವಾಗುತ್ತದೆ. ಪ್ರತಿದಿನ ಗ್ರೀನ್ ಟೀ ಸೇವನೆಯಿಂದ ಎಲ್‌ಡಿಎಲ್ (ಕೆಟ್ಟ ಕೊಲೆಸ್ಟ್ರಾಲ್) ಮತ್ತು ಟ್ರೈಗ್ಲಿಸರೈಡ್‌ಗಳ ಮಟ್ಟ ಕಡಿಮೆಯಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X