Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೆಜಿ ತರಗತಿಗಳ ಮಕ್ಕಳಿಗೆ ಮೌಖಿಕ, ಲಿಖಿತ...

ಕೆಜಿ ತರಗತಿಗಳ ಮಕ್ಕಳಿಗೆ ಮೌಖಿಕ, ಲಿಖಿತ ಪರೀಕ್ಷೆಗಳನ್ನು ನಡೆಸಬಾರದು: ಎನ್‌ಸಿಇಆರ್‌ಟಿ

ವಾರ್ತಾಭಾರತಿವಾರ್ತಾಭಾರತಿ14 Oct 2019 10:02 PM IST
share
ಕೆಜಿ ತರಗತಿಗಳ ಮಕ್ಕಳಿಗೆ ಮೌಖಿಕ, ಲಿಖಿತ ಪರೀಕ್ಷೆಗಳನ್ನು ನಡೆಸಬಾರದು: ಎನ್‌ಸಿಇಆರ್‌ಟಿ

ಹೊಸದಿಲ್ಲಿ,ಅ.14: ಶಾಲಾಪೂರ್ವ ಅಥವಾ ಕೆಜಿ ತರಗತಿಗಳ ಮಕ್ಕಳಿಗೆ ಲಿಖಿತ ಅಥವಾ ಮೌಖಿಕ ಪರೀಕ್ಷೆಗಳನ್ನು ನಡೆಸಕೂಡದು ಎಂದು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ(ಎನ್‌ಸಿಇಆರ್‌ಟಿ)ಯು ಸ್ಪಷ್ಟಪಡಿಸಿದೆ. ಪೋಷಕರ ಮಹತ್ವಾಕಾಂಕ್ಷೆಯಿಂದ ಹುಟ್ಟಿಕೊಳ್ಳುವ ಇಂತಹ ಪದ್ಧತಿಯು ಹಾನಿಕಾರಕ ಮತ್ತು ಅನಪೇಕ್ಷಣಿಯವಾಗಿದೆ ಎಂದು ಅದು ಬಣ್ಣಿಸಿದೆ.

ಯಾವುದೇ ಕಾರಣಕ್ಕೂ ಮಕ್ಕಳು ಯಾವದೇ ರೀತಿಯ ಮೌಖಿಕ ಹಾಗೂ ಲಿಖಿತ ಪರೀಕ್ಷೆಗೆ ಹಾಜರಾಗುವಂತೆ ಮಾಡುವಂತಿಲ್ಲ ಎಂದು ಹೇಳಿರುವ ಎನ್‌ಸಿಇಆರ್‌ಟಿ ಮಾರ್ಗಸೂಚಿಯು,ಶಾಲಾಪೂರ್ವ ಹಂತದಲ್ಲಿ ಮೌಲ್ಯಮಾಪನದ ಉದ್ದೇಶವು ಮಕ್ಕಳಿಗೆ ‘ಪಾಸ್’ ಅಥವಾ ‘ಫೇಲ್ ’ ಹಣೆಪಟ್ಟಿಯನ್ನು ಅಂಟಿಸುವುದಲ್ಲ ಎಂದು ಹೇಳಿದೆ.

ಮಕ್ಕಳ ಚಟುವಟಿಕೆಗಳು,ಆರೋಗ್ಯ ಸ್ಥಿತಿ,ದೈಹಿಕ ಮತ್ತು ಸಾಮಾಜಿಕ ಯೋಗಕ್ಷೇಮ ಇತ್ಯಾದಿ ವಿಷಯಗಳಲ್ಲಿ ವೌಲ್ಯಮಾಪನ ನಡೆಸಬೇಕು ಮತ್ತು ವ್ಯವಸ್ಥಿತ ಅಭಿಪ್ರಾಯಗಳಿಗೆ ಬರಬೇಕು ಎಂದು ಅದು ಹೇಳಿದೆ.

ಪ್ರಸಕ್ತ ದೇಶದಲ್ಲಿ ಮಕ್ಕಳನ್ನು ಜಡ ಮತ್ತು ಏಕತಾನತೆಯ ದಿನಚರಿಗೆ ತಳ್ಳುವುದರಿಂದ ಹಿಡಿದು ಮಕ್ಕಳನ್ನು,ಹೆಚ್ಚಾಗಿ ಇಂಗ್ಲಿಷ್‌ನಲ್ಲಿ ವ್ಯವಸ್ಥಿತ ಔಪಚಾರಿಕ ಕಲಿಕೆಗೆ ಒಡ್ಡುವ,ಪರೀಕ್ಷೆಗಳು ಮತ್ತು ಹೋಮ್‌ವರ್ಕ್‌ಗಳಿಗೆ ಅವರನ್ನು ಗುರಿಯಾಗಿಸುವ ಹಾಗೂ ಆಟವಾಡುವ ಅವರ ಹಕ್ಕುಗಳನ್ನು ನಿರಾಕರಿಸುವವರೆಗಿನ ಶಾಲಾಪೂರ್ವ ಶಿಕ್ಷಣ ಕಾರ್ಯಕ್ರಮಗಳಿವೆ ಎಂದು ಹೆಸರು ಹೇಳಿಕೊಳ್ಳಲು ಬಯಸದ ಅಧಿಕಾರಿಯೋರ್ವರು ತಿಳಿಸಿದರು.

ಮಗುವಿನ ಪ್ರಗತಿಯನ್ನು ಅದರ ವರ್ತನೆ,ರಚನಾತ್ಮಕತೆ,ಇತರ ಮಕ್ಕಳೊಡನೆ ಸಂವಾದ ಇತ್ಯಾದಿಗಳನ್ನು ಗಮನಿಸುವ ಮೂಲಕ ದಾಖಲಿಸಬೇಕು. ವೌಲ್ಯಮಾಪನವು ಮಕ್ಕಳು ಹೊಸ ಕೌಶಲ್ಯಗಳನ್ನು ಕಲಿಯಲು ಮತ್ತು ತಮಗೆ ಆಸಕ್ತಿಯ ವಿಷಯಗಳಲ್ಲಿ ಗಮನ ಕೇಂದ್ರೀಕರಿಸಲು ನೆರವಾಗುವಂತಿರಬೇಕು ಎಂದೂ ಎನ್‌ಸಿಇಆರ್‌ಟ್ ಮಾರ್ಗಸೂಚಿಯು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X