Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸ್ಪಿಟ್ ಮುಂಬೈ ತಂಡಕ್ಕೆ ಮಣಿಪಾಲ...

ಸ್ಪಿಟ್ ಮುಂಬೈ ತಂಡಕ್ಕೆ ಮಣಿಪಾಲ ಹ್ಯಾಕಥಾನ್ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ15 Oct 2019 7:40 PM IST
share
ಸ್ಪಿಟ್ ಮುಂಬೈ ತಂಡಕ್ಕೆ ಮಣಿಪಾಲ ಹ್ಯಾಕಥಾನ್ ಪ್ರಶಸ್ತಿ

ಮಣಿಪಾಲ, ಅ.15: ಮುಂಬೈಯ ಸರ್ದಾರ್ ಪಟೇಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಟೀಮ್ ಹ್ಯಾಕಿಂಗ್ ಬ್ಯಾಡ್ ತಂಡ, ಸ್ಥಳೀಯ ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ)ಯ ವಿದ್ಯಾರ್ಥಿ ಸಂಘದ ವತಿ ಯಿಂದ ನಡೆದ ಪ್ರಥಮ 36 ಗಂಟೆಗಳ ಮಣಿಪಾಲ ಹ್ಯಾಕಥಾನ್‌ನಲ್ಲಿ ಅಗ್ರ ಪ್ರಶಸ್ತಿಯನ್ನು ಗೆದ್ದುಕೊಂಡಿತು.

ಎಂಐಟಿಯ ಕೆಇಎಫ್ ಸಭಾಂಗಣದಲ್ಲಿ ಸತತ 36 ಗಂಟೆಗಳ ಕಾಲ ನಡೆದ ಮಣಿಪಾಲ ಹ್ಯಾಕಥಾನ್ ರವಿವಾರ ಮುಕ್ತಾಯಗೊಂಡಿತು. ಸ್ಪಿಟ್ ತಂಡ ಅಗ್ರಪ್ರಶಸ್ತಿಯೊಂದಿಗೆ ಒಂದು ಲಕ್ಷ ರೂ.ನಗದು ಪುರಸ್ಕಾರವನ್ನೂ ಗೆದ್ದುಕೊಂಡಿತು.

ಎಂಐಟಿಯ ವಿದ್ಯಾರ್ಥಿ ಸಂಘ ತಾನು ಸಂಘಟಿಸುವ ವಾರ್ಷಿಕ ತಂತ್ರಜ್ಞಾನ ಮೇಳ ‘ಟೆಕ್‌ತತ್ವ’ದ ಭಾಗವಾಗಿ ಮಣಿಪಾಲ ಹ್ಯಾಕಥಾನ್‌ನ್ನು ಮೊದಲ ಬಾರಿ ಆಯೋಜಿಸಿದ್ದು, ಇದರಲ್ಲಿ ಮುಂಬೈ ವಿವಿಯ ಟೀಮ್ ಕೋಡ್‌ಲಯನ್ ರನ್ನರ್ ಅಪ್ ಸ್ಥಾನದೊಂದಿಗೆ 50,000ರೂ. ನಗದು ಬಹುಮಾನ ಗೆದ್ದುಕೊಂಡಿತು.

ಬೆಂಗಳೂರಿನ ರಾಮಯ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಟೀಮ್ ಕುಬೇರ್ ಟೆಕ್ಕಿ, ಪುಣೆ ಇನ್‌ಸ್ಟಿಟ್ಯೂಟ್ ಆಫ್ ಕಂಪ್ಯೂಟರ್ ಟೆಕ್ನಾಲಜಿಯ ಟೀಮ್ ಡಿಫಾಲ್ಟ್, ಅದೇ ಸಂಸ್ಥೆಯ ಇನ್ನೊಂದು ತಂಡ ಟೀಮ್ ಕೋಡ್ ಓ ಹಾಲಿಕ್ ಹಾಗೂ ಪಿಳ್ಳೈ ಕಾಲೇಜ್ ಆಫ್ ಇಂಜಿನಿಯರಿಂಗ್‌ನ ಟೀಮ್ ಕೋಲ್ಡ್‌ಬ್ಲಡೆಡ್ ವಿಶೇಷ ಮೆಚ್ಚುಗೆಗೆ ಪಾತ್ರವಾದವು.

ಈ ಬಾರಿಯ ಹ್ಯಾಕಥಾನ್‌ನ ವಿಷಯ ‘ಸಾಮಾಜಿಕ ಆವಿಷ್ಕಾರ’. ಪ್ರತಿ ತಂಡವೂ ತನಗೆ ನೀಡಿದ ಐದು ಸಮಸ್ಯೆಗಳಲ್ಲಿ ಒಂದಕ್ಕೆ ಸೂಕ್ತ ಪರಿಹಾರವನ್ನು ಹುಡುಕಬೇಕಿತ್ತು. ಆರೋಗ್ಯ ವ್ಯವಸ್ಥೆ, ಮಹಿಳೆಯರ ವಿರುದ್ಧದ ಅಪರಾಧ ಕಡಿಮೆ ಮಾಡುವುದು, ಸ್ಮಾರ್ಟ್ ಸಿಟಿ ಯೋಜನೆಯ ಅಭಿವೃದ್ಧಿ, ವೈದ್ಯರು ನೀಡುವ ಚೀಟಿವ್ಯವಸ್ಥೆಯನ್ನು ಸುಲಲಿತಗೊಳಿಸುವುದು ವಿದ್ಯಾರ್ಥಿಗಳಿಗೆ ನೀಡಿದ ವಿಷಯಗಳಾಗಿದ್ದವು.

ಪ್ರಥಮ ಬಹುಮಾನ ಪಡೆದ ಸ್ಪಿಟ್‌ನ ಟೀಮ್ ಹ್ಯಾಕಿಂಗ್‌ಬ್ಯಾಡ್, ಮಹಿಳೆಯರ ರಕ್ಷಣೆಯ ಸುಧಾರಣೆಗೆ ಸಹಾಯಕವಾಗುವ ಆ್ಯಪ್‌ನ್ನು ಅಭಿವೃದ್ಧಿ ಪಡಿಸಿತು. ಮಹಿಳೆಯೊಬ್ಬಳು ಹೊರಗೆ ಹೋದಾಗ, ಅಸುರಕ್ಷಿತ ವಲಯ ಪ್ರವೇಶಿಸಿದಾಗ ಇದು ಆಕೆಯ ನೆರವಿಗೆ ಬರುವಂತೆ ರೂಪಿಸಲಾಗಿದೆ. ರನ್ನರ್ ಅಫ್ ಮುಂಬೈ ವಿವಿ ತಂಡ, ಟ್ರಾಫಿಕ್ ಲೈಟ್‌ನಲ್ಲಿ ಸುಧಾರಿತ ಹಾಗೂ ಸರಳ ವ್ಯವಸ್ಥೆಯನ್ನು ರೂಪಿಸಿತ್ತು.

ಸಮಾರೋಪ ಸಮಾರಂಭದಲ್ಲಿ ಬೆಂಗಳೂರು ಎಂಇಎಂಜಿಯ ಗ್ರೂಪ್ ಅಧ್ಯಕ್ಷ ರಾಜನ್ ಪಡುಕೋಣೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಎಂಐಟಿಯ ಜಂಟಿ ನಿರ್ದೇಶಕ ಡಾ.ಬಿ.ಎಚ್.ವಿ.ಪೈ, ಸಹ ನಿರ್ದೇಶಕ ಡಾ.ನಾರಾಯಣ ಶೆಣೈ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X