Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಹು ಸಂಸ್ಕೃತಿ, ಬಹು ಭಾಷೆಯ ಭಾರತವನ್ನು...

ಬಹು ಸಂಸ್ಕೃತಿ, ಬಹು ಭಾಷೆಯ ಭಾರತವನ್ನು ದಿವಾಳಿ ಎಬ್ಬಿಸಿದ್ದಾರೆ: ಕನ್ಹಯ್ಯ ಕುಮಾರ್

ವಾರ್ತಾಭಾರತಿವಾರ್ತಾಭಾರತಿ15 Oct 2019 8:26 PM IST
share
ಬಹು ಸಂಸ್ಕೃತಿ, ಬಹು ಭಾಷೆಯ ಭಾರತವನ್ನು ದಿವಾಳಿ ಎಬ್ಬಿಸಿದ್ದಾರೆ: ಕನ್ಹಯ್ಯ ಕುಮಾರ್

ಕಲಬುರಗಿ, ಅ.15: ಬಹು ಸಂಸ್ಕೃತಿ, ಬಹು ಭಾಷೆಯ ಈ ದೇಶವನ್ನು ದಿವಾಳಿ ಎಬ್ಬಿಸಿದ್ದಾರೆ. ಅಣ್ಣಾ ಹಜಾರೆ ಹಿಂದೆ ಬಿದ್ದಿದ್ದ ಜನರನ್ನು ಪ್ರಚಾರದಿಂದ ಮೋದಿಯ ಹಿಂದೆ ಬೀಳುವಂತೆ ಮಾಡಿದರು ಎಂದು ಜೆಎನ್‌ಯು ವಿದ್ಯಾರ್ಥಿ ಸಂಘಟನೆಯ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಹೇಳಿದ್ದಾರೆ.

ಕಲಬುರಗಿ ಶ್ರೀನಿವಾಸಗುಡಿ ಮೆಮೋರಿಯಲ್ ಟ್ರಸ್ಟ್ ಹಾಗೂ ಸಂವಿಧಾನ ಪರ ಸಂಘಟನೆಗಳ ಒಕ್ಕೂಟ ಇಂದು ಸಂಜೆ ನಗರದ ಡಾ. ಅಂಬೇಡ್ಕರ್ ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಂವಿಧಾನದ ರಕ್ಷಣೆ ಮತ್ತು ಯುವ ಜನತೆಯ ಹೊಣೆ ವಿಷಯ ಕುರಿತು ವಿಶೇಷ ಉಪನ್ಯಾಸ ನೀಡಿದ ಅವರು, ಮಂಗಳ, ಚಂದ್ರನ ಅಂಗಳದಲ್ಲಿ ಕಾಲಿಡುವ ಈ ದೇಶದಲ್ಲಿ ಗಟಾರದಲ್ಲಿ ಇಳಿದು ಸ್ವಚ್ಛ ಮಾಡಿ ಬದುಕುವ ಜನರಿದ್ದಾರೆ ಎಂಬುದನ್ನು ಆಡಳಿತ ನಡೆಸುವರು ನೆನಪಿಡಬೇಕು ಎಂದು ತಿಳಿಸಿದರು.

ಹಿಂದೂ ಮುಸ್ಲಿಮರು ಮಾತ್ರ ಇಂದು ಸಂಕಷ್ಟದಲ್ಲಿ ಇಲ್ಲ. ಇಡೀ ಹಿಂದೂಸ್ತಾನ ಸಂಕಷ್ಟದಲ್ಲಿದೆ. ಈ ಹಿಂದೆ ಭಾರತ ಬ್ರಿಟಿಷ್ ಆಡಳಿತಕ್ಕೆ ಒಳಪಟ್ಟಿತ್ತು. ಇದೀಗ ವಿವಿ ಕುಲಪತಿಗಳು ಸಹ ಅದೇ ರೀತಿ ಸರ್ಕಾರದ ಪರವಾಗಿ ಕೆಲಸ ಮಾಡಿ ನಮ್ಮ ಕಾರ್ಯಕ್ರಮವನ್ನು ರದ್ದು ಮಾಡಿದ್ದಾರೆ ಎಂದು ಆರೋಪಿಸಿದರು.

2014ಕ್ಕಿಂತ ಮೊದಲು ರಿಲಯನ್ಸ್ ಪೆಟ್ರೋಲ್ ಬಂದ್ ಆಗಿದ್ದವು. ಆದರೆ ಈಗ ಏನಾಗಿದೆ ನೀವೆ ಯೋಚಿಸಿ. ದೇಶದಾದ್ಯಂತ ನಿರುದ್ಯೋಗ ತಾಂಡವಾಡುತ್ತಿದೆ. ರೈತರ ಆತ್ಮಹತ್ಯೆ ಹೆಚ್ಚುತ್ತಿವೆ. ಇದೆಲ್ಲದಕ್ಕೆ ನಿಮ್ಮಲ್ಲಿ ಉತ್ತರವೇನಿದೆ ಎಂದು ಪ್ರಶ್ನಿಸಿದರು.

ಆಡಳಿತ ನಿಮ್ಮ ಕೈಯಲ್ಲಿ ಇದೆ ಎಂದು ನೀವು ಏನು ಮಾಡಿದರೂ ನಡೆಯುತ್ತದೆ. ಪರಂಪರೆ ಹೆಸರಿನಲ್ಲಿ ನೀವು ಮಾಡ ಹೊರಟಿರುವುದು ಏನು ? ಸತ್ಯ ಮತ್ತು ಸತ್ಯದ ಮಾತುಗಳನ್ನು ಯಾರಿಂದಲೂ ಮುಚ್ಚಿಡಲು, ಬಚ್ಚಿಡಲು ಸಾಧ್ಯವಿಲ್ಲ. ಒಂದಲ್ಲ ಒಂದು ದಿನ ಅದು ಮತ್ತೆ ಚಿಗುರೊಡೆದು ಬೆಳೆದೇ ಬೆಳೆಯುತ್ತದೆ. ನಾವು ಸುಳ್ಳು ಮೊಕದ್ದಮೆಗಳಿಗೆ ಹೆದರುವುದಿಲ್ಲ ಎಂದು ಹೇಳಿದರು.

ಮೋದಿ ಗರೀಬ್ ಎಂದು ಕೋಟ್ಯಂತರ ರೂ. ಮೌಲ್ಯದ ಜಾಹಿರಾತು ನೀಡಲಾಗುತ್ತಿದೆ. ಆದರೆ ಬಡವರಿಗಾಗಿ ನೀವು ಏನು ಮಾಡಿದಿರಿ? ದೇಶದ ಆರ್ಥಿಕ ಪರಿಸ್ಥಿತಿ ಕುಂಟಿತಕ್ಕೆ ಯಾರು ಕಾರಣ? ದಿನ ಬೆಳಗಾದರೆ ಯುದ್ಧದ ಬಗ್ಗೆ ಮಾತನಾಡುವ ನೀವು ಬುದ್ಧನ ಶಾಂತಿ ಸಂದೇಶ ಎಲ್ಲಿ ಪಾಲಿಸುತ್ತೀದ್ದೀರಿ? ಎಂದು ಪ್ರಧಾನಿ ಮೋದಿಯನ್ನು ಟೀಕಿಸಿದರು. 

ಎಪಿಜೆ ಅಬ್ದುಲ್ ಕಲಾಂ ಜನ್ಮ ದಿನದಂದು ನಾನು ಮೋದಿಯವರನ್ನು ಪ್ರಶ್ನಿಸುತ್ತೇನೆ. ಮಾತನಾಡುವವರನ್ನು ಯಾಕೆ ತಡೆಯುತ್ತೀರಿ ? ಬಸವಣ್ಣ, ಬುದ್ಧ ಮತ್ತು ಖ್ವಾಜಾ ಬಂದೇನವಾಜ್, ಅಂಬೇಡ್ಕರ್ ಅವರ ದಾರಿಯಲ್ಲಿ ಸಾಗಬೇಕಿದೆ ಎಂದು ಕನ್ಹಯ್ಯ ಹೇಳಿದರು.

ಎಲ್ಲರಿಗೂ ನಮಸ್ಕಾರ ಎಂದು ಕನ್ನಡದಲ್ಲಿ ತಮ್ಮ ಭಾಷಣ ಶುರುಮಾಡಿದ ಡಾ.ಕನ್ಹಯ್ಯ ಕುಮಾರ್, ಕನ್ನಡ ಬಾರದ್ದಕ್ಕೆ ಕ್ಷಮೆ ಕೇಳಿದರು. ಪ್ರಗತಿಪರ ಚಿಂತಕ ಪ್ರೊ.ಆರ್.ಕೆ. ಹುಡಗಿ ಪ್ರಾಸ್ತಾವಿಕ ಭಾಷಣ ಮಾಡಿದರು. 

ಕಾರ್ಯಕ್ರಮದಲ್ಲಿ ಚಿಂತಕಿ ಕೆ.ನೀಲಾ, ಬಸಣ್ಣ ಸಿಂಗೆ, ಮಾರುತಿ ಗೋಕಲೆ, ಪಿ.ವಿಲಾಸಕುಮಾರ, ಲಕ್ಷ್ಮೀಕಾಂತ ಹುಬ್ಬಳ್ಳಿ, ಮೆಹರಾಜ್ ಪಟೇಲ್, ಮೌಲಾ ಮುಲ್ಲಾ, ದತ್ತಾತ್ರೇಯ ಇಕ್ಕಳಕಿ, ಭೀಮಾಶಂಕರ ಮಾಡ್ಯಾಳ ಸೇರಿ ಅನೇಕರು ಹಾಜರಿದ್ದರು.

ಸ್ವಾಗತ ಸಮಿತಿ ಅಧ್ಯಕ್ಷ ಬಿ.ಬಿ.ರಾಂಪುರೆ ಸ್ವಾಗತಿಸಿದರು. ಮಹೇಶ ರಾಠೋಡ ನಿರೂಪಿಸಿದರು.

ಅನ್ನ, ಆಹಾರ, ನೀರಿಗೆ ಬರ ಬಂದಿದ್ದರೆ ಏನಾದರೂ ಪರಿಹಾರ ನೀಡಬಹುದು. ಆದರೆ ಇದೀಗ ಮನುಷ್ಯತ್ವಕ್ಕೆ ಬರ ಬಂದಿದೆ. ಸಂವಿಧಾನದ ರಕ್ಷಣೆಯಿಂದ ಭಾರತದ ಬದುಕು ಬದಲಾಗಬಹುದು. ಸಂವಿಧಾನದ ಮೂಲಕ ಚುನಾಯಿತರಾದ ಜನರು ಸಂವಿಧಾನದ ಕೊಲೆ ನಡೆಸಿದ್ದಾರೆ. ಕಲಬುರಗಿಯಿಂದ ಶಾಂತಿ, ಸೌಹಾರ್ದತೆಯ ಸಂದೇಶ ನೀಡಬೇಕು.
-ಪ್ರೊ. ಆರ್.ಕೆ. ಹುಡಗಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X