Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದ ಆರ್ಥಿಕ ಬೆಳವಣಿಗೆಯನ್ನು 7.3ರಿಂದ...

ಭಾರತದ ಆರ್ಥಿಕ ಬೆಳವಣಿಗೆಯನ್ನು 7.3ರಿಂದ 6.1 ಶೇ.ಕ್ಕಿಳಿಸಿದ ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ

ವಾರ್ತಾಭಾರತಿವಾರ್ತಾಭಾರತಿ15 Oct 2019 8:41 PM IST
share
ಭಾರತದ ಆರ್ಥಿಕ ಬೆಳವಣಿಗೆಯನ್ನು 7.3ರಿಂದ 6.1 ಶೇ.ಕ್ಕಿಳಿಸಿದ ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ

 ಹೊಸದಿಲ್ಲಿ,ಅ.15: ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್)ಯು ಭಾರತದ ಜಿಡಿಪಿ ಬೆಳವಣಿಗೆ ದರದ 2019ನೇ ಸಾಲಿನ ಮುನ್ನಂದಾಜನ್ನು ಮಂಗಳವಾರ ಶೇ.6.1ಕ್ಕೆ ತಗ್ಗಿಸಿದೆ. ಇದು ಎಪ್ರಿಲ್‌ನಲ್ಲಿ ಅದು ಮುನ್ನಂದಾಜಿಸಿದ್ದ ಜಿಡಿಪಿ ಬೆಳವಣಿಗೆ ದರಕ್ಕಿಂತ ಶೇ.1.2ರಷ್ಟು ಕಡಿಮೆಯಾಗಿದೆ. ರವಿವಾರವಷ್ಟೇ ವಿಶ್ವಬ್ಯಾಂಕ್ ತನ್ನ ಸೌಥ್ ಏಷ್ಯಾ ಇಕನಾಮಿಕ್ ಫೋಕಸ್‌ನ ಇತ್ತೀಚಿನ ಆವೃತ್ತಿಯಲ್ಲಿ ಭಾರತದ ಜಿಡಿಪಿ ಬೆಳವಣಿಗೆಯು 2018ನೇ ಸಾಲಿನ ಶೇ.6.9ರಿಂದ 2019ನೇ ಸಾಲಿಗೆ ಶೇ.6ಕ್ಕೆ ಕುಸಿಯಲಿದೆ ಎಂದು ಹೇಳಿತ್ತು.

ಐಎಂಎಫ್ ಎಪ್ರಿಲ್‌ನಲ್ಲಿ 2019ರಲ್ಲಿ ಭಾರತದ ಜಿಡಿಪಿ ಬೆಳವಣಿಗೆ ದರವು ಶೇ.7.3ರಷ್ಟಾಗಲಿದೆ ಎಂದು ಹೇಳಿತ್ತು.

 2018ರಲ್ಲಿಯ ಭಾರತದ ನೈಜ ಜಿಡಿಪಿ ಬೆಳವಣಿಗೆ ದರ ಶೇ.6.8ಕ್ಕೆ ಹೋಲಿಸಿದರೆ 2019ರಲ್ಲಿ ಅದು ಶೇ.6.1ರಷ್ಟು ಮತ್ತು 2020ರಲ್ಲಿ ಚೇತರಿಸಿಕೊಂಡು ಶೇ.7ರಷ್ಟಾಗುವ ನಿರೀಕ್ಷೆಯಿದೆ ಎಂದು ಐಎಂಎಫ್ ತನ್ನ ಇತ್ತೀಚಿನ ವರ್ಲ್ಡ್ ಇಕನಾಮಿಕ್ ಔಟ್‌ಲುಕ್(ಡಬ್ಲುಇಒ)ನ ಇತ್ತೀಚಿನ ಆವೃತ್ತಿಯಲ್ಲಿ ಮುನ್ನಂದಾಜಿಸಿದೆ.

ಹಣಕಾಸು ನೀತಿಯ ಸಡಿಲಿಕೆಯ ವಿಳಂಬಿತ ಪರಿಣಾಮಗಳು,ಕಾರ್ಪೊರೇಟ್ ಆದಾಯ ತೆರಿಗೆ ದರಗಳಲ್ಲಿ ಕಡಿತ, ಕಾರ್ಪೊರೇಟ್ ಮತ್ತು ಪರಿಸರ ನಿಯಂತ್ರಕ ಅನಿಶ್ಚಿತತೆಯನ್ನು ಬಗೆಹರಿಸಲು ಇತ್ತೀಚಿನ ಕ್ರಮಗಳು ಮತ್ತು ಗ್ರಾಮೀಣ ಬಳಕೆಯನ್ನು ಹೆಚ್ಚಿಸಲು ಸರಕಾರದ ಕಾರ್ಯಕ್ರಮಗಳು ಜಿಡಿಪಿ ಬೆಳವಣಿಗೆಯನ್ನು ಬೆಂಬಲಿಸಲಿವೆ ಎಂದು ಐಎಂಎಫ್ ಹೇಳಿದೆ.

2018ನೇ ಸಾಲಿಗೆ ಶೇ.6.6 ಜಿಡಿಪಿ ಬೆಳವಣಿಗೆ ದರವನ್ನು ದಾಖಲಿಸಿದ್ದ ಚೀನಾದ ಜಿಡಿಪಿ 2019ನೇ ಸಾಲಿಗೆ ಶೇ.6.1 ಮತ್ತು 2020ನೇ ಸಾಲಿಗೆ ಶೇ.5.8ರಷ್ಟಾಗಲಿದೆ ಎಂದೂ ಐಎಂಎಫ್ ಅಂದಾಜಿಸಿದೆ.

ಆಟೊಮೊಬೈಲ್ ಮತ್ತು ರಿಯಲ್ ಎಸ್ಟೇಟ್ ಕ್ಷೇತ್ರಗಳಲ್ಲಿಯ ಹಿನ್ನಡೆ ಹಾಗೂ ಬ್ಯಾಂಕೇತರ ಹಣಕಾಸು ಸಂಸ್ಥೆಗಳ ಆರೋಗ್ಯದ ಕುರಿತ ಅನಿಶ್ಚಿತತೆ ಇವುಗಳಿಂದಾಗಿ ಎರಡನೇ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕತೆಯು ಇನ್ನಷ್ಟು ಕುಸಿದಿದೆ ಎಂದು ಐಎಂಎಫ್ ಮತ್ತು ವಿಶ್ವ ಬ್ಯಾಂಕ್‌ಗಳ ವಾರ್ಷಿಕ ಸಭೆಯ ಮುನ್ನ ಬಿಡುಗಡೆಗೊಂಡ ಡಬ್ಲುಇಒ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X