Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗುರುಪುರ-ಕೈಕಂಬ: ಆರ್ಥಿಕ ಬಿಕ್ಕಟ್ಟು...

ಗುರುಪುರ-ಕೈಕಂಬ: ಆರ್ಥಿಕ ಬಿಕ್ಕಟ್ಟು ವಿರುದ್ಧ ಸಾರ್ವಜನಿಕ ಸಭೆ

ವಾರ್ತಾಭಾರತಿವಾರ್ತಾಭಾರತಿ15 Oct 2019 9:18 PM IST
share

ಕೈಕಂಬ, ಅ.15: ದೇಶದಲ್ಲಿ ಈಗ ಹೆಚ್ಚಿರುವ ಆರ್ಥಿಕ ಬಿಕ್ಕಟ್ಟು ಮತ್ತು ಜನರ ಸಂಕಷ್ಟದ ವಿರುದ್ಧ ಎಡಪಕ್ಷಗಳ ಅಖಿಲ ಭಾರತ ಪ್ರತಿಭಟನಾರ್ಥವಾಗಿ ಸಿಪಿಎಂ ಗುರುಪುರ ವಲಯ ಸಮಿತಿ ವತಿಯಿಂದ ಗುರುಪುರ ಕೈಕಂಬ ಜಂಕ್ಷನ್‌ನಲ್ಲಿ ‘ಸಾರ್ವಜನಿಕ ಸಭೆ’ ನಡೆಯಿತು.

ಸಿಪಿಎಂ ದ.ಕ. ಜಿಲ್ಲಾ ಸಮಿತಿ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಮಾತನಾಡಿ ಹಿಂದಿನ ಐದು ವರ್ಷದ ಆಡಳಿತಾವಧಿಯಲ್ಲಿ ಏನೂ ಸಾಧಿಸಲಾಗಿಲ್ಲ ಎಂದಿರುವ ಪ್ರಧಾನಿ ಮೋದಿ 2019ರ ಮಹಾಚುನಾವಣೆ ಹೊತ್ತಿಗೆ ಎನ್‌ಡಿಎಗೆ ಇನ್ನು ಐದು ವರ್ಷಗಳ ಅವಕಾಶ ಕೊಡಿ ಎಂದು ಪ್ರಚಾರ ನಡೆಸಿದ್ದರು. ಆದರೆ ಎರಡನೇ ಅವಧಿಗೆ ಅಧಿಕಾರ ಹಿಡಿದ ಎನ್‌ಡಿಎ ದುರಾಡಳಿತಕ್ಕೆ ಹೆಸರಾಗಿದ್ದು, ದೇಶದಲ್ಲಿ ಸಣ್ಣ ಕೈಗಾರಿಕೆಗಳು ಮುಚ್ಚಲ್ಪಟ್ಟು, ನಿರುದ್ಯೋಗ ಸಮಸ್ಯೆ ದುಪ್ಪಟ್ಟಾಗಿದೆ. ದೇಶ ಆರ್ಥಿಕವಾಗಿ ದಿವಾಳಿಯಾಗಿದ್ದು, ಸರಕಾರ ರಿಸರ್ವ್ ಬ್ಯಾಂಕ್‌ನ ‘ಭದ್ರತಾ ಹಣ’ ಪಡೆದುಕೊಂಡಿದೆ. ದೇಶದ ರಾಜಕೀಯ ಇತಿಹಾಸದಲ್ಲಿ ಇದೇ ಪ್ರಥಮ ಬಾರಿಗೆ ಇಂತಹ ಪ್ರಸಂಗ ನಡೆದಿದೆ. ಜಿಡಿಪಿ ಕಡಿಮೆಯಾಗಿದೆ ಎಂದರು.

ಜಿಡಿಪಿ ಕುಸಿಯುತ್ತಲೇ ಇದೆ. ಜವುಳಿ, ಕಟ್ಟಡ ನಿರ್ಮಾಣ ಉದ್ದಿಮೆ ಕುಸಿದಿದೆ. ರೈತಾಪಿ ವರ್ಗ ಕಂಗಾಲಾಗಿದೆ. ಬಡತನ ಹೆಚ್ಚಾಗುತ್ತಿದೆ. ಇಂತಹ ಸಂದರ್ಭದಲ್ಲಿ ಕೇಂದ್ರ ಸರಕಾರ ದೇಶದ ಜನರ ದೃಷ್ಟಿ ಬೇರೆಡೆಗೆ ಹರಿಸುವ ನಿಟ್ಟಿನಲ್ಲಿ ‘ಹಿಂದೂವಾದ’ ಅಸ್ತ್ರ ಪ್ರಯೋಗಿಸುತ್ತಿದೆ. ಜನಸಾಮಾನ್ಯರಿಗೆ ಸಂದಾಯವಾಗಬೇಕಿರುವ ಕೆಲವು ಮಹತ್ವದ ನಿಧಿ ಕಬಳಿಸಲು ಸರಕಾರ ಹೊಂಚು ಹಾಕಿದ್ದು, ತನ್ನ ಗೆಲುವಿಗೆ ಕೋಟ್ಯಂತರ ಹಣ ಒದಗಿಸಿದ ಅಂಬಾನಿ, ರಿಲಯನ್ಸ್, ಬಿರ್ಲಾರಂತಹವರ ಕಂಪೆನಿಗಳಿಗೆ ಲಾಭ ತಂದುಕೊಡುವಂತಹ ನೀತಿ ರೂಪಿಸುತ್ತಿದೆ. ಬಿಎಸ್ಸೆನ್ನೆಲ್, ಶಸ್ತ್ರಾಸ್ತ್ರ ಕಾರ್ಖಾನೆ, ಭಾರತೀಯ ರೈಲ್ವೇ, ಏರ್ ಇಂಡಿಯಾ ಸಂಸ್ಥೆಗಳ ಖಾಸಗೀಕರಣಕ್ಕೆ ಮೋದಿ ಸರಕಾರ ಹುನ್ನಾರ ನಡೆಸುತ್ತಿದೆ ಎಂದು ಬಾಲಕೃಷ್ಣ ಶೆಟ್ಟಿ ಟೀಕಿಸಿದರು.

ಸಿಪಿಎಂ ಗುರುಪುರ ವಲಯ ಸಮಿತಿಯ ಸದಸ್ಯ ಯುಬಿ ಲೋಕಯ್ಯ ಮಾತನಾಡಿದರು.ಸಿಪಿಎಂ ಗುರುಪುರ ವಲಯ ಸಮಿತಿ ಕಾರ್ಯದರ್ಶಿ ಕೆ.ಸದಾಶಿವ ದಾಸ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ವೇದಿಕೆಯಲ್ಲಿ ಸಿಪಿಎಂ ಗುರುಪುರ ವಲಯ ಸಮಿತಿಯ ಸದಸ್ಯ ಗಂಗಯ್ಯ ಅಮೀನ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X