ಮಂಗಳೂರು: ನೇತ್ರಾವತಿ ನದಿಗೆ ಹಾರಿದ ಬೆಂಗಳೂರು ಮೂಲದ ವ್ಯಕ್ತಿ
ಸ್ಥಳೀಯ ಮೀನುಗಾರರಿಂದ ರಕ್ಷಣೆ
ಮಂಗಳೂರು: ಬೆಂಗಳೂರು ಮೂಲದ ವ್ಯಕ್ತಿಯೋರ್ವ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಆತ್ಮ ಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಬೆಂಗಳೂರು ಮೂಲದ ಎಲ್ಡ್ರಾಂಬಾಬು ಎಂದು ಗುರುತಿಸಲಾಗಿದೆ.
ಅವರು ನೇತ್ರಾವತಿ ನದಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಸ್ಥಳೀಯ ಮೀನುಗಾರರು ಅವರನ್ನು ರಕ್ಷಣೆ ಮಾಡಿದ್ದಾರೆ.
ಮಂಗಳೂರಿನ ನೇತ್ರಾವತಿ ಸೇತುವೆಯಿಂದ ಜನರ ಎದುರೇ ನೀರಿಗೆ ಹಾರಿದ್ದ ಎನ್ನಲಾಗಿದೆ. ತಕ್ಷಣ ದೋಣಿಯಲ್ಲಿ ತೆರಳಿದ ಮೀನುಗಾರರು ಅವರನ್ನು ರಕ್ಷಿಸಿ, ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಕಾಫಿ ಡೇ ಮಾಲಕ ಸಿದ್ದಾರ್ಥ್ ಕೂಡ ಇದೇ ಜಾಗದಲ್ಲಿ ಜು.28 ರಂದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಈ ಬಗ್ಗೆ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story