Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಖಿಲ ಭಾರತ ಅಂತರ್ ವಿವಿ ಮಹಿಳಾ ಸ್ವಾಶ್...

ಅಖಿಲ ಭಾರತ ಅಂತರ್ ವಿವಿ ಮಹಿಳಾ ಸ್ವಾಶ್ ರ್ಯಾಕೆಟ್ ಚಾಂಪಿಯನ್‌ಶಿಪ್‌ಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ16 Oct 2019 7:49 PM IST
share
ಅಖಿಲ ಭಾರತ ಅಂತರ್ ವಿವಿ ಮಹಿಳಾ ಸ್ವಾಶ್ ರ್ಯಾಕೆಟ್ ಚಾಂಪಿಯನ್‌ಶಿಪ್‌ಗೆ ಚಾಲನೆ

ಉಡುಪಿ, ಅ.16: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ) ಆಶ್ರಯದಲ್ಲಿ ಮೂರು ದಿನಗಳ ಕಾಲ ಮಣಿಪಾಲದ ಮೆರೆನಾ ಒಳಾಂಗಣ ಕ್ರೀಡಾ ಸಂಕೀರ್ಣದಲ್ಲಿ ಆಯೋಜಿಸಲಾಗಿರುವ 2019-20ನೇ ಸಾಲಿನ ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ ಮಹಿಳಾ ಸ್ಕ್ವಾಶ್ ರ್ಯಾಕೆಟ್ ಚಾಂಪಿಯನ್‌ಶಿಪ್‌ಗೆ ಇಂದು ವಿದ್ಯುಕ್ತ ಚಾಲನೆ ನೀಡಲಾಯಿತು.

ಭಾರತದ ಅಂತಾರಾಷ್ಟ್ರೀಯ ಸ್ವಾಶ್ ಆಟಗಾರ ಹಾಗೂ ಭಾರತದ ಮೊದಲ ಏಷ್ಯನ್ ಜೂನಿಯರ್ ಸ್ಕ್ವಾಶ್ ರ್ಯಾಕೆಟ್ ಚಾಂಪಿಯನ್ ರವಿ ದೀಕ್ಷಿತ್ ಟೂರ್ನಿಗೆ ಚಾಲನೆ ನೀಡಿ ಮಾತನಾಡಿ, ಹೆಣ್ಣು ಮಕ್ಕಳು ಸ್ವಾಶ್ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಕಾಲೇಜು ಶಿಕ್ಷಣ ಮುಗಿದ ಬಳಿಕ ಈ ಕ್ರೀಡೆಯನ್ನು ವೃತಿಪರವಾಗಿ ತೆಗೆದುಕೊಂಡು ಮುಂದುವರಿಸಬೇಕು. ಕ್ರೀಡೆಯು ಜೀವನ ಪರ್ಯಂತ ನಮ್ಮ ಆರೋಗ್ಯವನ್ನು ಕಾಪಾಡುತ್ತದೆ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಮಾಹೆಯ ಪ್ರೊಚಾನ್ಸಲರ್ ಡಾ.ಎಚ್.ಎಸ್.ಬಲ್ಲಾಳ್ ಮಾತನಾಡಿ, ದೈಹಿಕ ಮತ್ತು ಮಾನಸಿಕ ಆರೋಗ್ಯ ಜೊತೆಯಾಗಿ ಸಾಗಬೇಕು. ಅದಕ್ಕೆ ಕ್ರೀಡೆ ಬಹಳ ಮುಖ್ಯವಾಗಿರುತ್ತದೆ. ಕ್ರೀಡೆಗೆ ಮಣಿಪಾಲ ಅಕಾಡೆಮಿ ಎಲ್ಲ ರೀತಿಯ ಪ್ರೋತ್ಸಾಹವನ್ನು ನೀಡುತ್ತಿದೆ. ನಮ್ಮ ದೇಶ ಮಧುಮೇಹ ಹಾಗೂ ಹೃದ್ರೋಗಗಳ ರಾಜಧಾನಿ ಆಗುತ್ತಿದೆ. ಇದನ್ನು ತಡೆಗಟ್ಟಬೇಕಾದರೆ ಪ್ರತಿಯೊಬ್ಬರೂ ಕ್ರೀಡೆಗೆ ಮಹತ್ವ ನೀಡಬೇಕು ಎಂದು ಹೇಳಿದರು.

ಮಾಹೆ ಪ್ರೊ ವೈಸ್ ಚಾನ್ಸಲರ್ ಡಾ.ಪೂರ್ಣಿಮಾ ಬಾಳಿಗಾ, ಮೆರೆನಾದ ಮುಖ್ಯಸ್ಥ ಡಾ.ಫೆಡ್ಡಿ ಡೇವಿಡ್, ಶ್ರೀಧರ್ ಎಚ್. ಉಪಸ್ಥಿತರಿದ್ದರು. ಮಾಹೆ ಕ್ರೀಡಾ ಕಾರ್ಯದರ್ಶಿ ಡಾ.ವಿನೋದ್ ನಾಯಕ್ ಸ್ವಾಗತಿಸಿದರು. ಜಂಟಿ ಕಾರ್ಯದರ್ಶಿ ಶೋಭಾ ಎಂ.ಇ. ಕಾರ್ಯಕ್ರಮ ನಿರೂಪಿಸಿದರು.

ಈ ಕ್ರೀಡಾಕೂಟದಲ್ಲಿ ಮಣಿಪಾಲ ಮಾಹೆ, ಪುಣೆ, ರಾಜಸ್ತಾನ, ಜೈಪುರ, ಕೇರಳ, ರಾಯ್‌ಪುರ, ಚಂಡಿಗಡ್, ಚೈನ್ನೈಯ ಅಣ್ಣಾ ವಿವಿ, ಪಟಿಯಾಲ ಪಂಜಾಬಿ ವಿವಿ ಸೇರಿದಂತೆ 20ಕ್ಕೂ ಅಧಿಕ ವಿವಿಗಳು ಭಾಗವಹಿಸಿವೆ.

ಪಂಜಾಬ್, ಸಾವಿತ್ರಿಬಾಯಿ ಪುಲೆ ವಿವಿ ಮುನ್ನಡೆ

ಮಣಿಪಾಲದ ಮೆರೆನಾ ಒಳಾಂಗಣ ಕ್ರೀಡಾ ಸಂಕೀರ್ಣದಲ್ಲಿ ನಡೆಯುತ್ತಿರುವ 2019-20ನೇ ಸಾಲಿನ ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ ಮಹಿಳಾ ಸ್ಕ್ವಾಶ್ ರ್ಯಾಕೆಟ್ ಚಾಂಪಿಯನ್‌ಶಿಪ್‌ನ ಮೊದಲ ದಿನಗಳ ಪಂದ್ಯಗಳಲ್ಲಿ ಚಂಡೀಗಡ್‌ದ ಪಂಜಾಬ್ ವಿವಿ ಹಾಗೂ ಪುಣೆಯ ಸಾವಿತ್ರಿಬಾಯಿ ಪುಲೆ ವಿವಿಗಳು ಜಯ ದಾಖಲಿಸಿ ಮುಂದಿನ ಸುತ್ತಿಗೆ ತೇರ್ಗಡೆಗೊಂಡಿವೆ.

ಪಂಜಾಬ್ ವಿವಿಯು ಎದುರಾಳಿ ಚೆನ್ನೈಯ ಅಣ್ಣಾ ವಿವಿಯನ್ನು 3-2 ಅಂತರದಿಂದ ಪ್ರಯಾಸಕರವಾಗಿ ಸೋಲಿಸಿದರೆ, ಪುಣೆ ತಂಡ, ರಾಜಸ್ಥಾನ್ ವಿವಿಯನ್ನು 3-1ರ ಅಂತರದಿಂದ ಸುಲಭವಾಗಿ ಹಿಮ್ಮೆಟ್ಟಿಸಿತು.

ಉಳಿದಂತೆ ಕೇರಳ ವಿವಿ, ಪಟಿಯಾಲದ ಪಂಜಾಬಿ ವಿವಿ, ಉದಯಪುರದ ಮೋಹನಲಾಲ್ ಸುಖಾಡಿಯಾ ವಿವಿಗಳು ತಮ್ಮ ಎದುರಾಳಿ ತಂಡಗಳು ಗೈರುಹಾಜರಾದ ಹಿನ್ನೆಲೆಯಲ್ಲಿ ವಾಕ್‌ಓವರ್ ಪಡೆದು ಮುಂದಿನ ಸುತ್ತಿನಲ್ಲಿ ಆಡುವ ಅರ್ಹತೆ ಪಡೆದುಕೊಂಡಿವೆ.

ಕಳೆದ ವರ್ಷ ಹೊಸದಿಲ್ಲಿಯಲ್ಲಿ ನಡೆದ ಟೂರ್ನಿಯಲ್ಲಿ ಸೆಮಿಫೈನಲ್ ಪ್ರವೇಶಿಸಿದ್ದ ಹಾಲಿ ಚಾಂಪಿಯನ್ ಮದ್ರಾಸ್ ವಿವಿ, ರನ್ನರ್ ಅಪ್ ಆಗಿರುವ ಆತಿಥೇಯ ಮಾಹೆ ವಿವಿ, ದಿಲ್ಲಿ ವಿವಿ ಹಾಗೂ ರಾಯ್‌ಪುರದ ಪಂಡಿತ್ ರವಿಶಂಕರ್ ಶುಕ್ಲ ವಿವಿ ತಂಡಗಳಿಗೆ ಈ ಬಾರಿ ನೇರವಾಗಿ ಕ್ವಾರ್ಟರ್ ಪೈನಲ್‌ಗೆ ಭಡ್ತಿ ನೀಡಲಾಗಿದೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X